Get Updates
Get notified of breaking news, exclusive insights, and must-see stories!

SSS Railway Station: ಅಯೋಧ್ಯೆಯ ಅಲಂಕಾರಕ್ಕೆ ಹುಬ್ಬಳ್ಳಿಯ ಅಳಿಲು ಸೇವೆ: ಅವಿಸ್ಮರಣೀಯ ಕೊಡುಗೆ

ಹುಬ್ಬಳ್ಳಿ, ಜನವರಿ 19: ಎಲ್ಲೆಡೆ ಶ್ರೀರಾಮನಾಮಜಪ ಶುರುವಾಗಿದೆ. ಈ ಮಧ್ಯೆ ಅಯೋಧ್ಯೆಯಿಂದ ಲಂಕಾಗೆ ಹೋಗಲು ರಾಮನಿಗೆ ಹನುಮಾನ ಸೈನ್ಯದ ಜೊತೆಗೆ ಅಳಿಲು ಕೂಡ ಸೇತುವೆ ನಿರ್ಮಾಣ ಮಾಡಲು ಸಹಾಯ ಮಾಡಿದೆ. ಈ‌ ನಿಟ್ಟಿನಲ್ಲಿ ಅಯೋಧ್ಯೆಯ ರೈಲು ನಿಲ್ದಾಣಕ್ಕೆ ಮಹತ್ವದ ರೂಪ ನೀಡಲು ಹುಬ್ಬಳ್ಳಿಯ ಕಲಾವಿದರೂ‌ ಕೂಡ ಅಳಿಲು ಸೇವೆ ಮಾಡಿದ್ದಾರೆ. ಈ ಕುರಿತು ಮಹತ್ವದ ಮಾಹಿತಿ ಇಲ್ಲಿದೆ.

ರಾಮಾಯಣದಲ್ಲಿ ರಾವಣನ ಸಂಹಾರಕ್ಕೆ ಲಂಕೆಗೆ ಹೊರಟ ಶ್ರೀರಾಮನಿಗೆ ಸಮುದ್ರದ ಮೇಲೆ ಸೇತುವೆ ಕಟ್ಟಲು ಸಣ್ಣ ಅಳಿಲು ಸಹ ಸಹಾಯ ಮಾಡಿದೆ ಎಂಬ ಉಲ್ಲೇಖವಿದೆ. ಅದೇ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್‌ನಲ್ಲಿ (ರೈಲ್ವೆ ನಿಲ್ದಾಣ) ನಿರ್ಮಿಸಲಾಗಿದೆ.

Hubballis Give to Special Contribution to the Decoration of Ayodhya Through Artwork

ಒಟ್ಟು ಐದು ಕಲಾಕೃತಿಯನ್ನು ಆರ್ಟ್‌ವಾಲೇ ಹುಬ್ಬಳ್ಳಿಯ ಇನ್ಪಾಸ್ಟ್ರಕ್ಟರ್ ಸಂಸ್ಥೆ ನಿರ್ಮಿಸಿರುವುದು ಮತ್ತೊಂದು ವಿಶೇಷವಾಗಿದೆ. ಹುಬ್ಬಳ್ಳಿ ನಗರದ ಕೊಪ್ಪಿಕರ್ ರಸ್ತೆಯ ಆರ್ಟ್ ವಾಲೇ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಓಸ್ತವಾಲ್ ಹಾಗೂ ಆರ್ಟ್ ಡೈರೆಕ್ಟರ್ ನಿಧಿ ಓಸ್ತವಾಲ್ ಅವರ ಮಾರ್ಗದರ್ಶನದಲ್ಲಿ ಈ ಕಲಾಕೃತಿಗಳನ್ನು ನಿರ್ಮಿಸಲಾಗಿದೆ.

ಕಲಾಕೃತಿ ವಿಶೇಷತೆ

ಕಲಾಕೃತಿ ನಿರ್ಮಾಣದ ಪ್ರಾಜೆಕ್ಟ್ ಮುಖ್ಯಸ್ಥ (ಆರ್ಕಿಟೆಕ್ಟ್) ಸನತ್ ಪಾಟೀಲ, ಕಿರಿಯ ಆರ್ಕಿಟೆಕ್ಟ್ ವಿನಯಕುಮಾರ ಕುಂಬಾರ ಸೇರಿದಂತೆ ಒಟ್ಟು 20 ಜನ ಸಿಬ್ಬಂದಿ ಕೇವಲ 35 ದಿನಗಳಲ್ಲಿ ಕಲಾಕೃತಿ ಸಿದ್ಧಪಡಿಸಿದ್ದಾರೆ. ಅದೂ‌ ಕೂಡ ಉಚಿತವಾಗಿ ಸೇವೆಯ ರೂಪದಲ್ಲಿ ಸಲ್ಲಿಸಿದ್ದಾರೆ.

Hubballis Give to Special Contribution to the Decoration of Ayodhya Through Artwork

ಇನ್ನೂ ಜಂಕ್ಷನ್‌ನ ಮುಖ್ಯದ್ವಾರದ ಬಳಿಯ ಎ-3 ಪ್ಯಾಸೇಜ್‌ನಲ್ಲಿ ಕ್ವಾರ್ಟನ್ ಸ್ಟೀಲ್ ನಲ್ಲಿ ಈ ಕಲಾಕೃತಿಯನ್ನು ಈಗಾಗಲೇ ಸ್ಥಾಪಿಸಲಾಗಿದೆ. ಅಳಿಲು ಒಟ್ಟು 19.5 ಅಡಿ ಎತ್ತರವಿದ್ದು, 2.5 ಟನ್ ತೂಕ ಇದೆ. ಇದು ಭಾರತದ ಅತೀ ಎತ್ತರದ ಅಳಿಲಿನ ಕಲಾಕೃತಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಲಿದೆ.

ಅದರಂತೆ ರೈಲ್ವೆ ಜಂಕ್ಷನ್‌ನಲ್ಲಿ 40 ಅಡಿ ಎತ್ತರದ ಅಯೋಧ್ಯೆ ರಾಮ ಮಂದಿರ, 8.5 ಅಡಿ ಎತ್ತರದ ಅಯೋಧ್ಯೆ ಹಾಗೂ 9 ಅಡಿ ಎತ್ತರದ ನಾಮಫಲಕ ಹಾಗೂ 40 ಅಡಿ ಎತ್ತರದ ಸರಾಯು ನದಿ ಘಾಟ್ ಕಲಾಕೃತಿಗಳನ್ನು ಆರ್ಟ್‌ ವಾಲೇ ಸಂಸ್ಥೆ ಇದನ್ನು ನಿರ್ಮಾಣ ಮಾಡಿದೆ.

ಹುಬ್ಬಳ್ಳಿಯ ಅವಿಸ್ಮರಣೀಯ ಕೊಡುಗೆ

ಒಟ್ಟಿನಲ್ಲಿ ಅಯೋಧ್ಯೆಯ ಅಲಂಕಾರಕ್ಕೆ ಹುಬ್ಬಳ್ಳಿಯ ಕೊಡುಗೆ ಅವಿಸ್ಮರಣೀಯವಾಗಿದೆ. ಹುಬ್ಬಳ್ಳಿಯ ಕಲಾವಿದರ ಕೈಚಳಕ ಅಯೋಧ್ಯೆಯ ರಾಮನ ಮನಸ್ಸಿಗೆ ಮುದ ನೀಡುವಂತಾಗಿರುವುದು ಎಲ್ಲೆಡೆಯೂ ಪ್ರಶಂಸೆಗೆ ಪಾತ್ರವಾಗಿದೆ.

ಎಲ್ಲರ ಗಮನ ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆ ಶ್ರೀರಾಮ ಮಂದಿರದತ್ತ ನೆಟ್ಟಿದೆ. ಇತ್ತ ಕೇಕಿನಲ್ಲಿ, ಬಿಸ್ಕತ್ತಿನಲ್ಲಿ ಅಯೋಧ್ಯ ರಾಮ ಮಂದಿರ ಸ್ಥಾಪಿಸುವ ಮೂಲಕ ಭಕ್ತಿ ಮೆರೆದಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ರಾಯಣದಲ್ಲಿ ಶ್ರೀರಾಮನಿಗೆ ಸೇವೆ ನೀಡಿದ ಅಳಿನ ಕಲಾಕೃತಿಯನ್ನು ಸಿದ್ಧಪಡಿಸುವ ಮೂಲಕ ತಮ್ಮ ಭಕ್ತಿ ತೋರ್ಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+