ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿ ವಾಣಿಜ್ಯ ಚಟುವಟಿಕೆ ನಿಷೇಧ
ಹುಬ್ಬಳ್ಳಿ, ಜನವರಿ, 3 : ಹುಬ್ಬಳ್ಳಿ-ಧಾರವಾಡದ ಮುಖ್ಯ ರಸ್ತೆಯ ಬದಿಯಲ್ಲಿ ಇನ್ಮುಂದೆ ಯಾವುದೇ ರೀತಿಯ ಚಟುವಟಿಕೆ ನಡೆಸುವಂತಿಲ್ಲ ಎಂದು ಬಿಆರ್ ಟಿಎಸ್ ವ್ಯವಸ್ಥಾಪಕ ನಿರ್ದೇಶಕ ಷೋರೂಂ ಮತ್ತು ಗ್ಯಾರೇಜ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ
ಹುಬ್ಬಳ್ಳಿ ಧಾರವಾಡ ಪಿಬಿ ರಸ್ತೆಯನ್ನುಅಷ್ಟ ಪಥ ರಸ್ತೆಯನ್ನಾಗಿ ಮಾರ್ಪಡಿಸಲಾಗುತ್ತಿದ್ದು, ರಸ್ತೆ ಕಾಮಗಾರಿಯು ಈಗಾಗಲೇ ಪ್ರಗತಿಯಲ್ಲಿದೆ. ಒಂದು ಹಂತದಲ್ಲಿ ನಿರ್ಮಿಸಿರುವ ರಸ್ತೆಯ ಮೇಲೆ ಕೆಲವು ಷೋರೂಂ ಮಳಿಗೆಗಳು, ಗ್ಯಾರೇಜ್ ಹಾಗೂ ಇತರೆ ವ್ಯಾಪಾರಸ್ಥರು, ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ.
ಅಲ್ಲದೇ ರಸ್ತೆ ಮೇಲೆ ಕಚ್ಚಾ ಸಾಮಗ್ರಿಗಳು, ಯಂತ್ರಗಳು, ಹಾಗೂ ಇನ್ನಿತರೆ ಭಾರಿ ಗಾತ್ರದ ವಸ್ತುಗಳನ್ನು ರಸ್ತೆಯ ಮೇಲೆ ಇಟ್ಟು ರಿಪೇರಿ ಹಾಗೂ ಇನ್ನಿತರೆ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಕಾಮಗಾರಿ ನಡೆಸಲು ತೊಂದರೆಯಾಗುತ್ತಿದೆ. ನಿರ್ಮಿಸಿರುವ ರಸ್ತೆಯೂ ಸಹ ಹಾಳಾಗುತ್ತಿದೆ.

ಇನ್ನು ರಸ್ತೆಯ ಇಕ್ಕೆಲಗಳಲ್ಲಿ ಇರುವ ಷೋರೂಂ, ಅಂಗಡಿಗಳು, ಗ್ಯಾರೇಜ್, ಆಸ್ಪತ್ರೆ, ಕಚೇರಿ, ಕಂಪನಿಗಳ ಸಿಬ್ಬಂದಿಗಳು ಹಾಗೂ ಇತರೆ ಕೆಲಸಗಳಿಗೆ ಬರುವ ಜನರು ತಮ್ಮ ವಾಹನಗಳನ್ನು ರಸ್ತೆಯ ಮೇಲೆ ಪಾರ್ಕಿಂಗ್ ಮಾಡುತ್ತಿದ್ದಾರೆ. ಇದರಿಂದ ರಸ್ತೆ ಕಾಮಗಾರಿಗೆ ತುಂಬಾ ಅಡಚಣೆಯಾಗುತ್ತಿದೆ.
ಈ ಬಗ್ಗೆ ಬಿಆರ್ ಟಿಎಸ್ ವ್ಯವಸ್ಥಾಪಕ ನಿರ್ದೇಶಕರು ರಸ್ತೆ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಹಾಗೂ ಈಗಾಗಲೇ ನಿರ್ಮಿಸಿರುವ ರಸ್ತೆಯ ಮೇಲೆ ಯಾವುದೇ ತೆರನಾದ ಚಟುವಟಿಕೆಗಳನ್ನು ಕೈಗೊಳ್ಳಬಾರದೆಂದು ಎಚ್ಚರಿಕೆ ನೀಡಿದ್ದಾರೆ.
ರಸ್ತೆಯ ಮೇಲೆ ಈಗಾಗಲೇ ಇಟ್ಟಿರುವ ಸಾಮಗ್ರಿಗಳನ್ನು ತೆರೆವುಗೊಳಿಸಲು ಸಂಬಂಧಿಸಿದವರು ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಯಾವುದೇ ರೀತಿಯ ವಾಹನಗಳನ್ನು ರಸ್ತೆಯ ಮೇಲೆ ಪಾರ್ಕಿಂಗ್ ಮಾಡುವಂತಿಲ್ಲ. ತಪ್ಪಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications