ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಗೌನ್ ಧರಿಸದ ಹುಬ್ಬಳ್ಳಿ-ಧಾರವಾಡ ಮೇಯರ್: ವಿವಾದ
ಹುಬ್ಬಳ್ಳಿ, ಸೆ.30: ತಲತಲಾಂತರದಿಂದ ಬಂದಿದ್ದ ಪದ್ಧತಿಗೆ ತಿಲಾಂಜಲಿ ಹೇಳಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಭಾರಿ ವಿವಾದಕ್ಕೆ ಗುರಿಯಾಗಿದ್ದಾರೆ.
ಮುಖ್ಯಮಂತ್ರಿ, ರಾಜ್ಯಪಾಲರು, ರಾಷ್ಟ್ರಪತಿ ಹೀಗೆ ಅವಳಿ ನಗರಕ್ಕೆ ಯಾರೇ ಗಣ್ಯಾತಿಗಣ್ಯರು ಆಗಮಿಸಿದರೂ ಮೇಯರ್ ಆದವರು ಗೌನ್ ಧರಿಸಿಕೊಂಡೇ ಸ್ವಾಗತಿಸುವುದು ಮೊದಲಿನಿಂದಲೂ ಬಂದ ಪದ್ಧತಿ. ಆದರೆ, ಹಾಲಿ ಮೇಯರ್ ಆಗಿರುವ ಈರೇಶ್ ಅಂಚಟಗೇರಿ ಗೌನ್ಗೆ ಗುಡ್ ಬಾಯ್ ಹೇಳಿದ್ದು ಹೊಸ ವಿವಾದಕ್ಕೆ ನಾಂದಿಯಾಗಿದೆ.
ರಾಷ್ಟ್ರಪತಿ, ಮುಖ್ಯಮಂತ್ರಿಗಳ ಸ್ವಾಗತಕ್ಕೆ ಗೌನ್ ಧರಿಸದೇ ಹಾಗೆ ಸ್ವಾಗತಿಸಿದ್ದ ಮೇಯರ್ ಈರೇಶ ಅಂಚಟಗೇರಿ ಇದೀಗ ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ಗೌನ್ ಧರಿಸದೇ ಭಾಗವಹಿಸಿದ್ದಕ್ಕೆ ವಿಪಕ್ಷ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ಮುಂದಡಿ ಇಟ್ಟಿರುವ ಮೇಯರ್ ಅವರಿಗೆ ಗೌನ್ ತಿರಸ್ಕರಿಸುವ ಮೂಲಕ ಇಡೀ ರಾಜ್ಯದಲ್ಲಿ ಗೌನ್ ತಿರಸ್ಕರಿಸಿದ ಮೊದಲ ಮೇಯರ್ ಆಗಿದ್ದಾರೆ ಎಂದು ಆರೋಪಿಸಿದ್ದಾರೆ.

ಗೌನ್ ಧರಿಸುವುದು ಬ್ರಿಟಿಷ್ ಆಡಳಿತದ ಪ್ರತೀಕ ಎಂದ ಮೇಯರ್!
ಈ ಹಿಂದೆ ಆಡಳಿತ ನಡೆಸಿರುವ 39 ಮೇಯರ್ಗಳು ಗೌನ್ ಧರಿಸಿಕೊಂಡೆ ಸಾಮಾನ್ಯ ಸಭೆ ನಡೆಸಿದ್ದರು. ಆದರೆ, ಇದೀಗ ಈರೇಶ ಅಂಚಟಗೇರಿ ಈ ಗೌನ್ ಧರಿಸುವುದಕ್ಕೆ ಇತಿಶ್ರೀ ಹಾಡಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ಮುಖ್ಯಮಂತ್ರಿಗಳನ್ನು ಸ್ವಾಗತಿಸುವ ವೇಳೆ ಗೌನ್ ಧರಿಸಿರಲಿಲ್ಲ. ಜತೆಗೆ ಗೌನ್ ಧರಿಸುವುದು ಬ್ರಿಟಿಷ್ ಆಡಳಿತದ ಪ್ರತೀಕ ಎನಿಸುತ್ತಿದೆ. ಹೀಗಾಗಿ ಇನ್ನು ಮುಂದೆ ತಾವು ಗೌನ್ ಧರಿಸುವುದಿಲ್ಲ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿಗಳ ಪೌರಸನ್ಮಾನ ಕಾರ್ಯಕ್ರಮದಲ್ಲೂ ಕಾಣೆಯಾಗಿತ್ತು ಗೌನ್
ಕಳೆದ ಎರಡು ದಿನಗಳ ಹಿಂದೆಯಷ್ಟೇ ನಗರಕ್ಕೆ ಆಗಮಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮೇಯರ್ ಈರೇಶ ಅಂಚಟಗೇರಿ ಗೌನ್ ಧರಿಸದೇ ಸ್ವಾಗತ ಮಾಡಿದ್ದರು. ಜತೆಗೆ ರಾಷ್ಟ್ರಪತಿಗಳ ಪೌರಸನ್ಮಾನ ಕಾರ್ಯಕ್ರಮದಲ್ಲೂ ಮೇಯರ್ ಗೌನ್ ಧರಿಸಿರಲಿಲ್ಲ. ಇದೀಗ ಸಾಮಾನ್ಯಸಭೆಯಲ್ಲೂ ಗೌನ್ ಧರಿಸದೇ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಗುರುವಾರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆಯುತ್ತಿತ್ತು . ಆದರೆ ಸಭೆ ಆರಂಭದಲ್ಲೇ ಮೇಯರ್ 'ಗೌನ್' ಗದ್ದಲ ಸೃಷ್ಟಿಯಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯ ಮಧ್ಯೆ ಜಟಾಪಟಿ ನಡೆಯಿತು.

ಸಾಮಾನ್ಯ ಸಭೆಗೂ ಗೌನ್ ಧರಿಸದೆ ಬಂದ ಮೇಯರ್!
ಹುಬ್ಬಳ್ಳಿಗೆ ಆಗಮಿಸಿದ್ದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಮಾಡಿದ್ದರು. ಈ ವೇಳೆ ಮೇಯರ್ ಈರೇಶ ಅಂಚಟಗೇರಿ ಅವರು ರಾಷ್ಟ್ರಪತಿ ಅವರಿಗೆ ತಮ್ಮ ಗೌನ್ ಇಲ್ಲದೆ ಪೌರ ಸನ್ಮಾನ ಮಾಡಿದ್ದಾರೆಂದು ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕಿಡಿಕಾರಿದರು. ಗೌನ್ ಧರಿಸದ ಶಿಷ್ಟಾಚಾರಕ್ಕೆ ತಿಲಾಂಜಲಿ ಹಾಡಿರುವ ಮೇಯರ್ ಈರೇಶ ಅಂಚಟಗೇರಿ, ಸಭೆಗೆ ಆಗಮಿಸುತ್ತಿದ್ದಂತೆಯೇ ಮೇಯರ್ ವಿರುದ್ಧ ಕಾಂಗ್ರೆಸ್ ಸದಸ್ಯರು ಹರಿಹಾಯ್ದರು . ಅಷ್ಟೇ ಅಲ್ಲದೆ ಇಂದಿನ ಸಾಮಾನ್ಯ ಸಭೆಗೂ ಕೂಡ ಮೇಯರ್ ಈರೇಶ ಅಂಚಟಗೇರಿ ಅವರು ಗೌನ್ ಧರಿಸದೆ ಬಂದಿದ್ದರು. ಸಭೆಯಲ್ಲಿಯೇ ಪ್ರತಿಭಟನೆಗೆ ಮುಂದಾದ ಕೈ ಸದಸ್ಯರು, ಸಭಾಂಗಣದಲ್ಲಿಯೇ ಧರಣಿಗೆ ನಡೆಸಿದ್ದಾರೆ.

ಗೌನ್ ಧರಿಸಿ, ಇಲ್ಲ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿ
ಗೌನ್ ಧರಿಸಿಯೇ ಸಭೆ ನಡೆಸಬೇಕೆಂದು ಪಟ್ಟು ಹಿಡಿದು ಕುಳಿತ ಸದಸ್ಯರು. ಮೇಯರ್ ಈರೇಶ ಅಂಚಟಗೇರಿ ಅವರು ಗೌನ್ ಧರಿಸುವುದನ್ನ ಕೈಬಿಟ್ಟು ಅಗೌರವ ತೋರುತ್ತಿದ್ದಾರೆ. ಮೇಯರ್ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ಅಗೌರವ ತೋರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ಗೌನ್ ಧರಿಸಬೇಕು ಇಲ್ಲವೇ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ, ಮೇಯರ್ ವಿರುದ್ಧ ಘೋಷಣೆ ಕೂಗಿ ಸಭೆಯಲ್ಲಿಯೇ ಪ್ರತಿಭಟನೆಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications