ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ ಯೋಧ ಸತ್ತಿದ್ದು ಉಗ್ರರ ದಾಳಿಯಿಂದಲ್ಲ, ಆತ್ಮಹತ್ಯೆಯಿಂದ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್ 3: ಅಕ್ಟೋಬರ್ 1ರಂದು ಜಮ್ಮು ಕಾಶ್ಮೀರದಲ್ಲಿ ಹುಬ್ಬಳ್ಳಿಯ ಯೋಧ ಮಂಜುನಾಥ ಓಲೇಕಾರ ಅವರು ಉಗ್ರರ ಗುಂಡೇಟಿಗೆ ಬಲಿಯಾಗಿರುವ ಮಾಹಿತಿ ತಿಳಿದುಬಂದಿತ್ತು. ಇದೀಗ ಆ ಸಾವು ಆತ್ಮಹತ್ಯೆಯಿಂದ ಸಂಭವಿಸಿದ್ದು ಎನ್ನಲಾಗಿದೆ.

ಮಂಜುನಾಥ ಅವರು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸೇನಾ ಮೂಲಗಳು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ. ಈವರೆಗೂ ಮಂಜುನಾಥ ಅವರು ಉಗ್ರರ ದಾಳಿಯಲ್ಲಿ ಬಲಿಯಾಗಿದ್ದಾರೆ ಎಂದೇ ಎಲ್ಲರೂ ನಂಬಿದ್ದರು. ಆದರೆ ಸೇನೆ ಇಂದು ಜಿಲ್ಲಾಡಳಿತಕ್ಕೆ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ನೀಡಿದೆ.

ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆಕಾಶ್ಮೀರದಲ್ಲಿ ಸಿಆರ್‌ಪಿಎಫ್ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಮೃತ ಯೋಧನ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ಇಂದು ಬೆಳಗಿನ ಜಾವ ಹುಬ್ಬಳ್ಳಿಗೆ ತಲುಪಿಸಲಾಯಿತು. ವಾಹನದ ಮೂಲಕ ಸ್ವಗ್ರಾಮವಾದ ಹುಬ್ಬಳ್ಳಿಯ ಇನಾಮ್ ವೀರಾಪುರ ಗ್ರಾಮಕ್ಕೆ ತರಲಾಯಿತು. ಗ್ರಾಮದಲ್ಲಿ ಸಾವಿರಾರು ಜನ ಯೋಧನ ಅಂತಿಮ ದರ್ಶನ ಪಡೆದರು.

Hubli Soldier Died By Suicide Not By Terrorist Attack

ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವಾಯುಸೇನೆಯ ಯೋಧಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವಾಯುಸೇನೆಯ ಯೋಧ

ಇತ್ತ ಜಿಲ್ಲಾಡಳಿತದಿಂದ ಅಂತ್ಯ ಸಂಸ್ಕಾರಕ್ಕೆ ಎಲ್ಲ ನೆರವು ನೀಡಲಾಗಿತ್ತು. ಆದರೆ ಯೋಧ ಆತ್ಮಹತ್ಯೆ ಮಾಡಿಕೊಂಡ ಕಾರಣ ಯಾವುದೇ ಸರ್ಕಾರಿ ಗೌರವವನ್ನು ನೀಡುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಕಾರಣ ಖಾಸಗಿಯಾಗಿ ಅಂತ್ಯಸಂಸ್ಕಾರ ನಡೆಸಲಾಯಿತು. ಆದರೆ ಮನೆಯವರು ಮಂಜುನಾಥನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂಥ ಯಾವುದೇ ಸಮಸ್ಯೆ ಇರಲಿಲ್ಲ ಎನ್ನುತ್ತಾರೆ. ಮಂಜುನಾಥ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮಾತ್ರ ನಿಗೂಢವಾಗಿದೆ.

English summary
Hubli soldier Manjunatha Olekara was said to have been died in terror attack in Jammu and Kashmir, which has now been declared as suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X