ಕಲ್ಯಾಣ ಕರ್ನಾಟಕದಲ್ಲಿ ಏಪ್ರಿಲ್ 16 ರಂದು 'ಬೃಹತ್ ಉದ್ಯೋಗ ಮೇಳ', ವಿದ್ಯಾರ್ಹತೆ
ಬೆಂಗಳೂರು, ಏಪ್ರಿಲ್ 08: ಕರ್ನಾಟಕ ರಾಜ್ಯ ಸರ್ಕಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಯುವಜನತೆಗಾಗಿ, ನಿರುದ್ಯೋಗ ಯುವ ಸಮುಹಕ್ಕಾಗಿ 'ಬೃಹತ್ ಉದ್ಯೋಗ ಮೇಳ 2025' (Job Fair in Kalyana Karnataka) ಆಯೋಜಿಸಿದೆ. ನಿರುದ್ಯೋಗಿಗಳ ಸಂಖ್ಯೆ ಇಳಿಕೆಗೆ, ಅರ್ಹರಿಗೆ ನೌಕರಿ ಕಲ್ಪಿಸಲು ಸರ್ಕಾರ ಮುಂದಾಗಿದೆ. ಎಲ್ಲಿ ಮೇಳ ನಡೆಯಲಿದೆ, ವಿದ್ಯಾರ್ಹತೆ, ವಯಸ್ಸು, ಪ್ರಮುಖ ಸಲಹೆ ಸೂಚನೆಗಳು ಇಲ್ಲಿವೆ.
'ಯುವ ಸಮೃದ್ಧಿ ಸಮ್ಮೇಳನ' ಶಿರ್ಷಿಕೆಯಡಿ ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಈ 'ಬೃಹತ್ ಉದ್ಯೋಗಮೇಳ' ಜರುಗಲಿದೆ. ಕಲಬುರಗಿ ನಗರದ ಕೆ.ಸಿ.ಟಿ ಕಾಲೇಜ್ ಕ್ಯಾಂಪಸ್ನಲ್ಲಿ 16 ಏಪ್ರಿಲ್ 2025 ರಂದು ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ 200 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿವೆ. ಯಾವುದೇ ವಿದ್ಯಾರ್ಹತೆ ಇರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) ಕರೆ ನೀಡಿದೆ.

ವಿವಿಧ ಕಂಪನಿಗಳಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕಿದೆ. ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಡೆಯಲಿರುವ ಮೇಳದಲ್ಲಿ ಪಾಲ್ಗೊಳ್ಳಲು ಸಹಾಯವಾಣಿ ಮತ್ತು ಕ್ಯೂಆರ್ ಕೋಡ್ ಸಹ ನೀಡಲಾಗಿದೆ. ವಿವಿಧ ಹಂತಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ರಾಜ್ಯ, ಹೊರ ರಾಜ್ಯ ಹಾಗೂ ದೇಶದ ಪ್ರತಿಷ್ಠಿತ ಉದ್ಯೋಗದಾತ ಕಂಪನಿಗಳು ಮೇಳಕ್ಕೆ ಆಗಮಿಸಲಿವೆ. ನೋಂದಣಿಗೆ http://skillconnect.kaushalkar.com/ ಗೆ ಭೇಟಿ ನೀಡಿ ಹೆಸರು ನೋಂದಾಯಿಸಬೇಕು. ಮೊದಲು ನೀವು ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಉದ್ಯೋಗ ಮೇಳದ ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಅಭ್ಯರ್ಥಿ ನೊಂದಣಿ ಮೇಲೆ ಕ್ಲಿಕ್ ಮಾಡಿಕೊಂಡು, ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. ಬಳಿಕ ನೀವು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಇನ್ನೂ ಉದ್ಯೋಗದಾತ ಕಂಪನಿಗಳು ಸಹ ಇದೇ ರೀತಿ http://skillconnect.kaushalkar.com/ ಭೇಟಿ ನೀಡಬೇಕು. ಮೊದಲು ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ ನಂತರ ಉದ್ಯೋಗ ಮೇಳದ ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು. ಬಳಿಕ ಉದ್ಯೋಗದಾತ ನೋಂದಣಿ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ ತಿಳಿಸಿದೆ.
ಉದ್ಯೋಗ ಮೇಳ ಹೆಚ್ಚಿನ ಮಾಹಿತಿಗೆ ಸಹಾಯವಾಣಿ 08022075030 ಗೆ ಸಂಪರ್ಕಿಸಬೇಕು. ಕೆಸಿಟಿ ಕಾಲೇಜ್ ಕ್ಯಾಂಪಸ್, ಖಮರ್ ಉಲ್ ಇಸ್ಲಾಂ ಕಾಲೋನಿ, ರೋಜಾ.ಬಿ.ರಿಂಗ್ ರಸ್ತೆ, ಕಲಬುರಗಿ 58510' ಇಲ್ಲಿ ಮೇಳ ನಡೆಯಲಿದೆ. ಈ ವಿಳಾಸ ಅನುಸರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಕಲಬುರಗಿ ಮೇಳದ ಬಳಿಕ ಹುಬ್ಬಳ್ಳಿ, ಬೆಳಗಾವಿ ಮತ್ತು ಮೈಸೂರಿನಲ್ಲಿ ಹಂತ ಹಂತವಗಿ ಉದ್ಯೋಗ ಮೇಳೆ ಆಯೋಜಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಹೇಳಿದರು.
-
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್ -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications