ಕೇಂದ್ರ ಕಾರ್ಮಿಕ ವಿರೋಧಿ ನೀತಿ: ರೈಲ್ವೆ ಸಿಬ್ಬಂದಿಗಳ ಪ್ರತಿಭಟನೆ
ಹುಬ್ಬಳ್ಳಿ, ಫೆಬ್ರವರಿ 2 : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ರೈಲ್ವೆ ಸಿಬ್ಬಂದಿಗಳು ಶುಕ್ರವಾರ ಹುಬ್ಬಳ್ಳಿಯ ಕೇಶವಪುರದಲ್ಲಿರುವ ರೈಲ್ವೆ ವಲಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನೈರುತ್ಯ ರೈಲ್ವೆ ಕಾರ್ಮಿಕ ಸಂಘಟನೆಗಳ ಸಾವಿರಾರು ಕಾರ್ಮಿಕರಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕನಿಷ್ಠ ವೇತನ 18 ಸಾವಿರ ರೂ ನಿಂದ ಹೆಚ್ಚಿಸಬೇಕು, ಪೇ ಫಿಕ್ಸೇಷನ್ ಫಾರ್ಮುಲಾ ಹೆಚ್ಚಿಸಿ ಪರಿಷ್ಕೃತ ವೇತನವನ್ನು ಜನವರಿ 2016ರಿಂದಲೇ ಜಾರಿಯಾಗುವಂತೆ ಪೂರ್ವಾನ್ವಯವಾಗುವಂತೆ ಕೊಡುವುದು, ಹೊಸ ಪಿಂಚಣಿ ಪದ್ಧತಿ ರದ್ದುಪಡಿಸಿ, ಗ್ಯಾರಂಟಿ ಪೆನ್ಷನ್ ಪದ್ಧತಿ ಜಾರಿಗೆ ತರಬೇಕು.
ಡ್ರೈವರ್ ಮತ್ತು ಗಾರ್ಡ್ ಗಳಿಗೆ ರನ್ನಿಂಗ್ ಪೆನ್ಷನ್ ಭತ್ಯೆ ಪರಿಷ್ಕರಿಸುವುದು. ಹುದ್ದೆಗಳನ್ನು ಕಡಿತಗೊಳಿಸುವುದನ್ನು ನಿಲ್ಲಿಸಬೇಕು. ರೈಲ್ವೆ ಇಲಾಖೆಯಲ್ಲಿ ಖಾಸಗೀಕರಣ ಹಾಗೂ ಹೊರ ಗುತ್ತಿಗೆಯನ್ನು ರದ್ದುಪಡಿಸಬೇಕು. ಸುರಕ್ಷಿತ ಹುದ್ದೆಗಳಲ್ಲಿ ಸ್ವನಿವೃತ್ತಿ ಹೊಂದಿದ ಕಾರ್ಮಿಕ ಮಕ್ಕಳಿಗೆ ನೇಮಕಾತಿ ಮಾಡುವುದನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ರೈಲ್ವೆ ಕ್ವಾಟರ್ಸ್ ಗಳ ಎಲೆಕ್ಟ್ರಿಕ್ ಹಾಗೂ ಇತರೆ ರಿಪೇರಿ ಕೆಲಸವನ್ನು ತ್ವರಿತವಾಗಿ ಮಾಡಬೇಕು. ರೈಲ್ವೆ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಜತೆಗೆ ಲೈಫ್ ಸೇವಿಂಗ್ ಔಷಧಿಗಳನ್ನು ಎಲ್ಲ ಕಾಲಕ್ಕೂ ಲಭ್ಯವಾಗಿರುವಂತೆ ಮಾಡಬೇಕು. ಹೀಗೆ ಈ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ನಾಲ್ಕು ವರ್ಷದಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ನಾಲ್ಕು ವರ್ಷದಿಂದ ಕೇಂದ್ರ ಸರ್ಕಾರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿಲ್ಲ. ನಿನ್ನೆ ಕೇಂದ್ರ ಬಜೆಟ್ ನಲ್ಲೂ ಈ ಬಗ್ಗೆ ಸ್ಪಷ್ಟತೆ ಇಲ್ಲದ ಕಾರಣ ಇವತ್ತು ರೈಲ್ವೆ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications