ಡಿಸೆಂಬರ್ 15ರೊಳಗೆ ಕಳಸಾ ಬಂಡೂರಿ ಸಮಸ್ಯೆ ಬಗೆಹರಿಸುತ್ತೇನೆ : ಯಡಿಯೂರಪ್ಪ
ಹುಬ್ಬಳ್ಳಿ, ನವೆಂಬರ್ 15 : ಮಹದಾಯಿ ಕಳಸಾ ಬಂಡೂರಿ ಸಮಸ್ಯೆ ಕುರಿತು ಗೋವಾ ಮುಖ್ಯಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ನಾಯಕರ ಜತೆ ಚರ್ಚಿಸಿ ಮುಂದಿನ ಡಿ.15ರೊಳಗೆ ಬಗೆಹರಿಸುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ನಗರದ ಕೇಶ್ವಾಪುರದಲ್ಲಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ನಿವಾಸದ ಎದುರು ರೈತ ಸೇನಾ ಕರ್ನಾಟಕ ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಧರಣಿ ಅಂತ್ಯಗೊಳಿಸುವ ನಿಟ್ಟಿನಲ್ಲಿ ರೈತರ ಮನವೊಲಿಸಿ ಮಾತನಾಡಿದ ಅವರು ಕಳಸಾ ಬಂಡೂರಿ ಸಮಸ್ಯೆಯನ್ನು ಬಗೆಹರಿಸುವಾದಿ ಹೇಳಿದರು.

'ಯಾರೇ ವಿರೋಧ ಮಾಡಿದರೂ ಗೋವಾ ಮುಖ್ಯಮಂತ್ರಿಗಳಿಂದ ಮಹದಾಯಿ ಯೋಜನೆ ಅನುಷ್ಠಾನ ಕುರಿತು ಸರ್ಕಾರಿ ಆದೇಶ ಹೊರಡಿಸಿಕೊಂಡು ನಿಮ್ಮ ಮುಂದೆ ಬರುತ್ತೇನೆ' ಎಂದು ಅವರು ಪ್ರತಿಭಟನಾ ನಿರತ ರೈತರಿಗೆ ವಾಗ್ದಾನ ನೀಡಿದ್ದಾರೆ.
ಕಳಸಾ ಬಂಡೂರಿ ಸಮಸ್ಯೆ ಉಲ್ಭಣಿಸಲು ಕಾಂಗ್ರೆಸ್ ಕಾರಣ ಎಂದ ಯಡಿಯೂರಪ್ಪ 'ಗೋವಾ ಮುಖ್ಯಮಂತ್ರಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮನವೊಲಿಸುವುದು ನನ್ನ ಜವಾಬ್ದಾರಿ. ಸಮಸ್ಯೆ ಉಲ್ಬಣ ಆಗಲು ಕಾಂಗ್ರೆಸ್ ಕಾರಣ ಎಂಬುದು ಜಗತ್ತಿಗೆ ಗೊತ್ತಿದೆ. ಗೋವಾ ವಿಧಾನಸಭೆ ಚುನಾವಣೆ ವೇಳೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಒಂದು ಹನಿ ನೀರು ಕರ್ನಾಟಕಕ್ಕೆ ಕೊಡಲ್ಲ ಎಂದಿದ್ದರು' ಎಂದು ಹೇಳಿದ್ದಾರೆ.
'ಕಳಸಾ ಬಂಡೂರಿ ಸಮಸ್ಯೆ ಸುಪ್ರೀಂ ಕೋರ್ಟ್, ನ್ಯಾಯಮಂಡಳಿ ಮುಂದೆ ಹೋಗಲು ಕಾಂಗ್ರೆಸ್ ನವರೇ ಕಾರಣ ಎಂದಿರುವ ಅವರು '7.5 ಟಿಎಂಸಿ ನೀರು ತೆಗೆದುಕೊಂಡು ನಿಮ್ಮ ಮುಂದೆ ಬರ್ತೀನಿ' ಎನ್ನುವ ಮೂಲಕ ಉತ್ತರ ಕರ್ನಾಟಕ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ.
ಯಡಿಯೂರಪ್ಪ ಅವರು ಭರವಸೆ ನೀಡಿದ ಬಳಿಕ ರೈತರು ಧರಣಿ ಅಂತ್ಯಗೊಳಿಸಿದ್ದಾರೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications