ವೀರಶೈವ-ಲಿಂಗಾಯತ ವಿವಾದ: ಬಹಿರಂಗ ಚರ್ಚೆಗೆ ಹೊರಟ್ಟಿ ಆಹ್ವಾನ
ಹುಬ್ಬಳ್ಳಿ, ಡಿಸೆಂಬರ್ 28 : ವೀರಶೈವ ಹಾಗು ಲಿಂಗಾಯತ ಪ್ರತ್ಯೇಕ ಎಂಬುದು ನಮ್ಮ ವಾದ ಆದರೆ ದಿಂಗಾಲೇಶ್ವರ ಸ್ವಾಮಿಗಳು ಎರಡೂ ಒಂದೇ ಎಂದು ಪ್ರತಿಪಾದಿಸುತ್ತಿದ್ದಾರೆ ಈ ಕುರಿತು ಡಿ.೩೦ರಂದು ಮೂರು ಸಾವಿರ ಮಠದಲ್ಲಿ ಬಹಿರಂಗ ಚರ್ಚೆ ನಡೆಸಲಿದ್ದೇವೆ ಎಂದು ಎಂಎಲ್ ಸಿ ಬಸವರಾಜ ಹೊರಟ್ಟಿ ಹೇಳಿದರು.
ನಾವು ಲಿಂಗಾಯತ ಹಾಗೂ ವೀರಶೈವ ಬೇರೆ ಎಂದು ಹೇಳಿದ್ದೇವೆ ಆದರೆ ದಿಂಗಾಲೇಶ್ವರ ಸ್ವಾಮಿಗಳು ಇದನ್ನು ಒಪ್ಪುತ್ತಿಲ್ಲ. ಇದರ ಬಗ್ಗೆ ಸ್ಪಷ್ಟನೆ ನೀಡುವಂತೆ ಕೇಳಿದ್ದೇವೆ. ಹೀಗಾಗಿ ಡಿ. 30 ರಂದು ಬೆಳಗ್ಗೆ ೧೧ ಗಂಟೆಗೆ ಮೂರು ಸಾವಿರ ಮಠದಲ್ಲಿ ಬಹಿರಂಗ ಚರ್ಚೆ ಏರ್ಪಡಿಸಲಾಗಿದೆ. ಇದರ ಹಿನ್ನೆಲೆ ಮೂರು ಸಾವಿರಮಠಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದರು.

ದಿಂಗಾಲೇಶ್ವರ ಮಹಾಸ್ವಾಮಿಗಳು ರಕ್ಷಣೆ ಬೇಕೆಂದು ಹೇಳಿದ್ದಾರೆ. ಆದರೆ ಅವರಿಗೆ ರಕ್ಷಣೆ ಕೊಡಲು ನಾವು ಪೊಲೀಸರಲ್ಲ.ನಮ್ಮ ಬೆಂಬಲಿಗರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೊರಟ್ಟಿ ಸ್ಪಷ್ಟನೆ ನೀಡಿದರು. ಚರ್ಚೆಯಲ್ಲಿ ವೀರಶೈವ ಮತ್ತು ಲಿಂಗಾಯತ ಧರ್ಮದ ಪ್ರತಿಪಾದಕರ ಐವರು ತಜ್ಞರು ಭಾಗಿಯಾಗಲಿದ್ದಾರೆ. ಲಿಂಗಾಯತ ಧರ್ಮ ಪ್ರತ್ಯೇಕ ಎಂಬುದಕ್ಕೆ ನಮ್ಮ ಬಳಿ ದಾಖಲೆಗಳು ಇವೆ ಎಂದು ಹೇಳಿದರು.












Click it and Unblock the Notifications