ಪಕ್ಷ ಕೊಟ್ಟ ಜವಾಬ್ದಾರಿ ನಿರ್ವಹಿಸುವೆ; ಬಸವರಾಜ ಹೊರಟ್ಟಿ
ಹುಬ್ಬಳ್ಳಿ, ಜುಲೈ 01: "ನಾನು ಎಂಎಲ್ಸಿಯಾಗಿ ಯಾವ ಅಧಿಕಾರವನ್ನು ಕೇಳುವುದಿಲ್ಲ. ನನ್ನ ಮೇಲೆ ನಂಬಿಕೆಯಿಟ್ಟು ಯಾವುದೇ ಹುದ್ದೆ ನೀಡಿದರೂ ಸಮರ್ಥವಾಗಿ ನಿಭಾಯಿಸುವೆ" ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಶುಕ್ರವಾರ ಹುಬ್ಬಳ್ಳಿ ಪತ್ರಕರ್ತರ ಭವದಲ್ಲಿ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. "ನನಗೆ ಯಾವುದೇ ಹುದ್ದೆಯನ್ನು ನೀಡಿದರೂ ನಾನು ಬೇಡ ಎನ್ನುವುದಿಲ್ಲ. ನನ್ನ ಆತ್ಮದ ವಿರುದ್ಧ ಎಂದಿಗೂ ನಾನು ನಡೆಯುವುದಿಲ್ಲ" ಎಂದರು.
"ಈ ಹಿಂದಿನಂತೆಯೇ ನೇರ ನುಡಿಯಲ್ಲಿಯೇ ಮಾತನಾಡುವೆ.ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಹಿಂದೆ ಉಳಿದಿದೆ. ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಲು ಯಾರಿಂದಲೂ ಸಾಧ್ಯವಿಲ್ಲ. ದೇವರು ಕೆಳಗೆ ಬಂದರೂ ಅದು ಆಗದು. ಒಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಷ್ಟರಲ್ಲಿ ಮತ್ತೊಂದು ಸಮಸ್ಯೆ ಎದುರಾಗಿರುತ್ತದೆ" ಎಂದು ಬಸವರಾಜ ಹೊರಟ್ಟಿ ತಿಳಿಸಿದರು.

ಯಾರೂ ಕಮರ್ಷಿಯಲ್ ಆಗಬಾರದು; "ಮಕ್ಕಳ ಕಲಿಕಾ ಮಟ್ಟ ಸುಧಾರಿಸಲು ಸರ್ಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಬೇಕು. ಮಕ್ಕಳ ವಿಷಯದಲ್ಲಿ ಯಾರು ಕಮರ್ಷಿಯಲ್ ಆಗಬಾರದು. ಇದೀಗ ಪಠ್ಯಪುಸ್ತಕ, ಸಮವಸ್ತ್ರ ಸರಿಯಾಗಿ ಮಕ್ಕಳಿಗೆ ತಲುಪುತ್ತಿಲ್ಲ. ಅದನ್ನು ಸರ್ಕಾರ ಮತ್ತು ಅಧಿಕಾರಿಗಳು ಕಾಲಕಾಲಕ್ಕೆ ತಲುಪಿಸುವ ಕೆಲಸ ಮಾಡಬೇಕು" ಎಂದು ಬಸವರಾಜ ಹೊರಟ್ಟಿ ಆಗ್ರಹಿಸಿದರು.
"ನನ್ನ ಅಧಿಕಾರದ ಅವಧಿಯಲ್ಲಿ ಮೇ ತಿಂಗಳಲ್ಲಿಯೇ ಸೈಕಲ್, ಪುಸ್ತಕ ಕೊಡುವ ಪದ್ದತಿ ಇತ್ತು. ಆದರೆ ಕೆಲವೊಂದು ಅಧಿಕಾರಿಗಳ ನಿರ್ಲಕ್ಷ್ಯದಿಂದ ದೊಡ್ಡ ಮಟ್ಟದ ಸಮಸ್ಯೆಗೆ ಕಾರಣವಾಗುತ್ತದೆ. ಹಾಗಾಗಿ ಶಾಲೆ ಪ್ರಾರಂಭದಲ್ಲೇ ಎಲ್ಲ ಸೌಲಭ್ಯ ಕಲ್ಪಿಸುವ ಕೆಲಸವನ್ನು ಸರ್ಕಾರ ಮಾಡಬೇಕು" ಎಂದು ಒತ್ತಾಯಿಸಿದರು.

"ನಾನು ಸಭಾಪತಿಯಂತಹ ಜವಾಬ್ದಾರಿ ಸ್ಥಾನದಲ್ಲಿದ್ದಾಗ ಶಿಕ್ಷಣ ವ್ಯವಸ್ಥೆಯ ಕೆಲ ಸಮಸ್ಯೆಗಳ ಕುರಿತು ಸರ್ಕಾರಕ್ಕೆ 112 ಪತ್ರಗಳನ್ನು ಬರೆದಿದ್ದೆ. ಆದರೆ ಅದ್ಯಾವುದಕ್ಕೂ ಸರ್ಕಾರದಿಂದ ಒಂದೇ ಒಂದು ಉತ್ತರ ಬಂದಿಲ್ಲ" ಎಂದು ಬಸವರಾಜ ಹೊರಟ್ಟಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
Recommended Video
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications