ಹೇಳಿಕೆಯಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ಸಿದ್ದರಾಮಯ್ಯ
ಹುಬ್ಬಳ್ಳಿ, ಅಕ್ಟೋಬರ್ 22: "ಎಕ್ಸಿಟ್ ಪೋಲ್ ಗಳು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುತ್ತಿವೆ. ಎಲ್ಲವೂ ಫಲಿತಾಂಶ ಬಂದಮೇಲೇ ತಿಳಿಯುತ್ತದೆ, ಕಾದು ನೋಡೋಣ" ಎಂದಿದ್ದಾರೆ ವಿಪಕ್ಷ ನಾಯಕ ಸಿದ್ದರಾಮಯ್ಯ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, "ಜನ ತೀರ್ಪು ಕೊಟ್ಟರೆ ಒಪ್ಪಿಕೊಳ್ಳಲೇ ಬೇಕಲ್ವಾ? ಆದರೆ ಮಹಾರಾಷ್ಟ್ರದಲ್ಲಿ ಅಭಿವೃದ್ಧಿಯೇ ಆಗಿಲ್ಲ. ಅಲ್ಲಿನ ರಸ್ತೆಗಳು ಕೆಟ್ಟದಾಗಿವೆ. ಜನ ಅದು ಹೇಗೆ ಬಿಜೆಪಿಗೆ ಮತ ನೀಡುತ್ತಾರೋ ಗೊತ್ತಿಲ್ಲ" ಎಂದು ವ್ಯಂಗ್ಯ ಮಾಡಿದ್ದಾರೆ.
Recommended Video
ಇವಿಎಂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದೂ ಆರೋಪಿಸಿದ ಅವರು, "ಇವಿಎಂ ಅಷ್ಟೇ ಅಲ್ಲ, ಚುನಾವಣೆ ಆಯೋಗವನ್ನು ಕೂಡ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. 70 ದಿನ ಮೊದಲೇ ಚುನಾವಣೆ ಘೋಷಣೆ ಆಗಿದ್ದನ್ನು ಇತಿಹಾಸದಲ್ಲಿ ನೋಡಿದ್ದಿರಾ?" ಎಂದು ಪ್ರಶ್ನಿಸಿದರು.

ಬಳಿಕ ನೆರೆ ಪರಿಹಾರ ಸಂಬಂಧ ಮಾತನಾಡಿದ ಅವರು, "ನೆರೆ ಪರಿಹಾರ ಇನ್ನೂ ಸಿಕ್ಕಿ ಲ್ಲ. ಮತ್ತೆ ಪ್ರವಾಹ ಬಂದಿದೆ. ಎಲ್ಲಾ ಕಡೆ ಜನ ತೊಂದರೆಯಲ್ಲಿದ್ದಾರೆ. ಬಿಜೆಪಿ ಸರ್ಕಾರ ಏನೂ ಮಾಡಿಲ್ಲ. ನಾವು ಕೂಡ ಸಾಕಷ್ಟು ಹೋರಾಟ ಮಾಡಿದ್ದೇವೆ. ಮಲಗಿರೋರನ್ನ ಎಬ್ಬಿಸಬಹುದು, ಆದ್ರೆ ಮಲಗಿರುವವರ ರೀತಿ ನಾಟಕ ಮಾಡೋರನ್ನ ಎಬ್ಬಿಸೋಕ್ಕಾಗುತ್ತಾ...?" ಎಂದರು.
ಸಾವರ್ಕರ್ ವಿಚಾರವಾಗಿ ಉಂಟಾಗಿದ್ದ ವಿವಾದದ ಕುರಿತು ಮಾತನಾಡುತ್ತಾ, "ಸಾವರ್ಕರ್ ಬಗ್ಗೆ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ. ಈ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಾನೀಗಾಗಲೇ ಹೇಳಿರುವೆ, ಮಹಾತ್ಮಾ ಗಾಂಧಿ ಕೊಲೆಯಲ್ಲಿ ಸಾವರ್ಕರ್ ಅವರು ಒಬ್ಬ ಆರೋಪಿ. ಕೆಲವೊಂದು ಸಾಕ್ಷ್ಯಗಳ ಕೊರತೆಯಿಂದ ಹೊರಬಂದಿರಬಹುದು. ಹಾಗಾಂತ ಅವರು ಆರೋಪಿಯೇ ಅಲ್ಲ ಅನ್ನುವುದಕ್ಕೆ ಸಾಧ್ಯನಾ? ಅಂಥವರಿಗೆ ಭಾರತ ರತ್ನ ಕೊಡುವುದು ಬೇಡ ಎಂದು ಪುನರುಚ್ಛರಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications