ಪ್ರೀತಿಸಿ ವಿವಾಹವಾದ ರಾಜ್ಯದ ಮತ್ತಿಬ್ಬರು ಐಎಎಸ್ ಅಧಿಕಾರಿಗಳು
ಹುಬ್ಬಳ್ಳಿ, ಫೆಬ್ರವರಿ 25 : ಕರ್ನಾಟಕದ ಮತ್ತಿಬ್ಬರು ಐಎಎಸ್ ಅಧಿಕಾರಿಗಳು ಪ್ರೀತಿಸಿ ವಿವಾಹವಾಗಿದ್ದಾರೆ. ಐಎಎಸ್ ಅಧಿಕಾರಿ ಗೌತಮ್ ಬಗಾದಿ ಮತ್ತು ಅಶ್ವತಿ ಅವರ ವಿವಾಹ ಫೆ.14ರಂದು ಕೇರಳದಲ್ಲಿ ನಡೆದಿತ್ತು.
ಸೋಮವಾರ ಹುಬ್ಬಳ್ಳಿಯಲ್ಲಿ ಐಎಎಸ್ ಅಧಿಕಾರಿಗಳಾದ ಉಜ್ವಲ್ ಕುಮಾರ್ ಘೋಷ್ ಮತ್ತು ಹಬ್ಸಿಬಾ ರಾಣಿ ಕೊರ್ಲಾಪಾಟಿ ಅವರು ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾದರು.

ಉಜ್ವಲ್ ಕುಮಾರ್ ಘೋಷ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಎಂಡಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಹಬ್ಸಿಬಾ ರಾಣಿ ಕೊರ್ಲಾಪಾಟಿ ಅವರು ಉಡುಪಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಉಜ್ವಲ್ ಕುಮಾರ್ ಘೋಷ್ ಅವರು ಕಲಬುರಗಿ ಜಿಲ್ಲಾಧಿಕಾರಿಯಾಗಿದ್ದರು. ಆಗ ಹಬ್ಸಿಬಾ ರಾಣಿ ಕೊರ್ಲಾಪಾಟಿ ಅವರು ಜಿಲ್ಲಾ ಪಂಚಾಯಿತಿ ಸಿಇಓ ಆಗಿದ್ದರು. ಆಗ ಇಬ್ಬರ ಪರಿಚಯವಾಗಿ ಪ್ರೇಮಾಂಕುರವಾಗಿತ್ತು.
ಇಬ್ಬರೂ ಅಧಿಕಾರಿಗಳ ಪ್ರೀತಿಗೆ ಕುಟುಂಬದವರ ಒಪ್ಪಿಗೆ ಸಿಕ್ಕಿತ್ತು. ಸೋಮವಾರ ಹುಬ್ಬಳ್ಳಿಯ ವಿವಾಹ ನೋಂದಣಿ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಸರಳವಾಗಿ ವಿವಾಹವಾದರು. ಈಗ ಇಬ್ಬರು ಅಧಿಕಾರಿಗಳು ಬೇರೆ-ಬೇರೆ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಗೌತಮ್ ಬಗಾದಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅಶ್ವತಿ ಅವರು ಫೆ.14ರಂದು ಕೇರಳದಲ್ಲಿ ವಿವಾಹವಾಗಿದ್ದರು. ಈ ಅಧಿಕಾರಿಗಳದ್ದು ಪ್ರೇಮ ವಿವಾಹ. ಈಗ ಇಬ್ಬರು ಅಧಿಕಾರಿಗಳು ಚಿಕ್ಕಮಗಳೂರಿನಲ್ಲಿ ಜಿಲ್ಲಾಧಿಕಾರಿ ಮತ್ತು ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications