ಈದ್ಗಾ ಮೈದಾನದಲ್ಲಿ ಹೇಗಿರಲಿದೆ 'ಗಣೇಶ ಪ್ರತಿಷ್ಠಾಪನೆ', ಮೆರವಣಿಗೆ & ಪೊಲಿಸ್ ಭದ್ರತೆ
ಹುಬ್ಬಳ್ಳಿ, ಸೆಪ್ಟಂಬರ್ 05: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಈ ಬಾರಿಯು ವಿವಾದಾತ್ಮಾಕ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ಹುಬ್ಬಳ್ಳಿ ಧಾರವಾಡ ಪಾಲಿಕೆಯಿಂದ ಅನುಮತಿ ನೀಡಿದೆ. ಇದರ ಬೆನ್ನಲ್ಲೆ 'ರಾಣಿ ಚನ್ನಮ್ಮ ಗಜಾನನ ಉತ್ಸವ ಮಹಾ ಮಂಡಳಿ'ಯು ವಿಶೇಷ ಗಣಪ ಪ್ರತಿಷ್ಠಾಪಿಸಿ ಅದ್ಧೂರಿ ಗಣೇಶೋತ್ಸವ ಆಚರಿಸಲು ಭರದ ಸಿದ್ಧತೆ ಮಾಡಿಕೊಂಡಿದೆ. ಮೈದಾನದಲ್ಲಿ ಎಲ್ಲ ಬಗೆಯ ತಯಾರಿಗಳು ನಡೆಯುತ್ತಿವೆ.
'ಹುಬ್ಬಳ್ಳಿಯಲ್ಲಿಯೇ ಮೂರ್ತಿ ತಯಾರಾಗುತ್ತಿದೆ. ಸೆಪ್ಟಂಬರ್ 6ರಂದು ಮೂರು ಸಾವಿರಮಠಕ್ಕೆ ಮೂರ್ತಿ ತರಲಾಗುತ್ತದೆ. ಹಬ್ಬದ ದಿನ ಬೆಳಗ್ಗೆ ಒಳ್ಳೆಯ ಮಹೂರ್ತದಲ್ಲಿ 9ರಂದು ಗಣಪನಮೂರ್ತಿಯನ್ನು ಪ್ರಮುಖ ನಗರಗಳ ಮಾರ್ಗವಾಗಿ ಬೃಹತ್ ಮೆರವಣಿಗೆ ನಡೆಸಿ, ಮೈದಾನದಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದು ಮಹಾಮಂಡಳದ ಅಧ್ಯಕ್ಷ ಬೃಹತ್ ಸಂಜೀವ್ ಬಡಸ್ಕರ ತಿಳಿಸಿದರು.

ತಿಷ್ಠಾಪನಾ ಮೆರವಣಿಗೆಗೆ ರಾಜ್ಯ ಅಥವಾ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲು ಚಿಂತನೆ ನಡೆಸಲಾಗಿದೆ. ಗಣಹೋಮ, ಅನ್ನಸಂತರ್ಪಣೆ, ಗಂಗಾರತಿ, ಮೂರು ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಹಬ್ಬದ ಕಾರ್ಯಕ್ರಮಗಳು ನಡೆಯಲಿವೆ.
ಸೆಪ್ಟೆಂಬರ್ 9 ರಂದು ಬೆಳಿಗ್ಗೆ 11.55 ಕ್ಕೆ ಈದ್ಗಾ ಮೈದಾನದಿಂದ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ.
ವಾಹನ ನಿಷೇಧ ರದ್ದು, ಪರದೆ ಅಳವಡಿಕೆ
ಈಗಾಗಲೇ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಈದ್ಗಾ ಮೈದಾನದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದ. ಪೆಂಡಾಲ್ ಹಾಕಲಾಗುತ್ತಿದೆ. ಇಲ್ಲಿ ವಾಹನಗಳ ನಿಲ್ಲುವುದನ್ನು ನಿಷೇಧಿಸಲಾಗಿದೆ. ಕಟ್ಟಡದ ಭದ್ರತೆಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ದೊಡ್ಡ ಪ್ರಮಾಣದಲ್ಲಿ ಪರದೇ ಅಳವಡಿಕೆಗೆ ಸಿಬ್ಬಂದಿ ಮುಂದಾಗಿದ್ದಾರೆ .ಇಡೀ ಮೈದಾನವನ್ನು ಪೊಲೀಸ್ ಸುಪರ್ದಿಗೆ ಪಡೆಯಲಾಗಿದೆ. ಶಾಂತಿ ಸುವ್ಯವಸ್ಥೆಯಿಂದ ಆಚರಣೆಗಳು ನಡೆಯುವಂತ ನೋಡಿಕೊಳ್ಳಲಾಗುತ್ತಿದೆ.
ಮೈದಾನದಲ್ಲಿನ ಕಟ್ಟಡ ಸೇರಿ ಶೇಕಡಾ 70ರಷ್ಟು ಭಾಗಕ್ಕೆ 20 ಅಡಿ ಎತ್ತರದಷ್ಟು ಪರದೆ ಕಟ್ಟಿ, ಉಳಿದ ಭಾಗವನ್ನು ಗಣೇಶಮೂರ್ತಿ ಪ್ರತಿಷ್ಠಾಪಿಸುವ ಸಮಿತಿಗೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಪಾಲಿಕೆ ಪರದೆ ಕಟ್ಟಿಸುವ, ಕಟ್ಟಿಗೆ ಕಂಬಗಳಿಂದ ಬ್ಯಾರಿಕೇಡ್ ಹಾಕಿ ಕಟ್ಟಡದ ಕಡೆ ಪ್ರವೇಶ ನಿಷೇಧಿಸಲಾಗುತ್ತಿದೆ.

ಮೈದಾನಕ್ಕೆ ಪೂರ್ವ ದ್ವಾರದಿಂದ ಪ್ರವೇಶ
ಇನ್ನೂ ಈದ್ಗಾ ಮೈದಾನದ ಸೆ. 6ರಂದು ಉತ್ತರ ಹಾಗೂ ದಕ್ಷಿಣದ್ವಾರ ಬಂದ್ ಮಾಡಿ, ಪೂರ್ವ ದ್ವಾರದ ಮೂಲಕ ಮೈದಾನ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಇದೆಲ್ಲ ಆದ ಬಳಿಕವೇ ಮೈದಾನ ನೀಡಲಾಗುತ್ತದೆ.
ಮೈದಾನದಲ್ಲಿ ಮೂರು ದಿನಗಳ ಕಾಲ ನಾಲ್ಕು ಕಡೆ ಹೈಮಾಸ್ಟ್ ದೀಪಗಳನ್ನು ಅಳವಡಿಸಿ, ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಪೊಲೀಸರು ಸೂಚಿದ ಜಾಗದಲ್ಲಿಯೇ 30 ಅಡಿ ಉದ್ದ, 30 ಅಡಿ ಅಗಲದ ಪೆಂಡಾಲ್ ನಿರ್ಮಿಸಬೇಕು' ಈಗಾಗಲೇ ಸಮಿತಿಗೆ ಕರಾರು ಹಾಕಿ ಒಪ್ಪಿಗೆ ನೀಡಲಾಗಿದೆ ನೀಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿದರು.
ಮೈದಾನ ಸುತ್ತಮುತ್ತ 422 ಪೊಲೀಸರಿಂದ ಭದ್ರತೆ
ಮೈದಾನದ ಒಳಗೆ ಹಾಗೂ ಹೊರಗೆ ಬಿಗಿ ಪೊಲಿಸ್ ಬಂದೋಬಸ್ತ್ ಮಾಡಲು ಪೊಲೀಸ್ ಇಲಾಖೆ ತೀರ್ಮಾನಿಸಿದೆ. ಈ ಸಂಬಂಧ ಅಗತ್ಯ ರೂಪರೇಷೆ ಸಿದ್ಧಪಡಿಸಲಾಗಿದೆ. ನಾಲ್ವರು ಎಸಿಪಿ ನೇತೃತ್ವದಲ್ಲಿ ಎಂಟು ತಂಡಗಳನ್ನು ರಚಿಸಿದೆ. ಭದ್ರತೆಗೆ ಒಟ್ಟು 422 ಸಿಬ್ಬಂದಿ ನಿಯೋಜನೆ ಮಾಡಲು ನಿರ್ಧರಿಸಲಾಗಿದೆ.
6 ಪಿಐ, 12 ಪಿಎಸ್ಐ, 40 ಎಎಸ್ಐ, 160 ಹೆಡ್ ಕಾನ್ಸ್ಟೆಬಲ್, 40 ಮಹಿಳಾ ಹೆಡ್ ಕಾನ್ಸ್ಟೆಬಲ್, 160 ಕಾನ್ಸ್ಟೆಬಲ್ ಮೈದಾನದ ಪ್ರವೇಶದ್ವಾರ, ಪೆಂಡಾಲ್ ಸುತ್ತಮುತ್ತ ಕರ್ತವ್ಯ ನಿರ್ವಹಿಸಲಿದ್ದಾರೆ. ಜೊತೆಗೆ ಕೆಎಸ್ಆರ್ಪಿ, ಸಿಎಆರ್ ತುಕಡಿಗಳು ಭದ್ರತೆಯಲ್ಲಿ ಸ್ಥಳದಲ್ಲಿರುವ. ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆಯಿಂದ ಆಚರಣೆ ಮಾಡುವಂತೆ ಈಗಾಗಲೇ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಇದೇ ವರ್ಷ ಜನವರಿಯಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆ ಆಗಿದೆ. ಇದೀಗ ಅದೇ 'ಶ್ರೀರಾಮನ ಅವತಾರದ ಗಣೇಶಮೂರ್ತಿ' ಯನ್ನು ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲು ತೀರ್ಮಾನಿಸಲಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications