ಹುಬ್ಬಳ್ಳಿಯಲ್ಲಿ ಕೃಷಿ ಇಲಾಖೆ ಜಾಗೃತ ದಳದ ದಾಳಿ; ಅನಧಿಕೃತ ಬೀಜ ದಾಸ್ತಾನು ಜಫ್ತಿ
ಹುಬ್ಬಳ್ಳಿ, ಮೇ 27: ಶಹರದ ಅಮರಗೋಳದ ಎಪಿಎಂಸಿ ಆವರಣದಲ್ಲಿರುವ ವಿವಿಧ ಬಿತ್ತನೆ ಬೀಜಗಳ ದಾಸ್ತಾನು ಮಳಿಗೆಗಳಿಗೆ ಕೃಷಿ ಇಲಾಖೆಯ ಜಾಗೃತ ದಳದ ಅಧಿಕಾರಿಗಳ ತಂಡ ಭೇಟಿ ನೀಡಿ ಸುಮಾರು 30.33 ಲಕ್ಷ ರೂ. ಮೌಲ್ಯದ ಅನಧಿಕೃತ ಬಿತ್ತನೆ ಬೀಜ ದಾಸ್ತಾನು ವಶಪಡಿಸಿಕೊಂಡು, ಎರಡು ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮೆ. ಗಾಯತ್ರಿದೇವಿ ಅಗ್ರೋ ಸರ್ವೀಸಸ್ ಮಾರಾಟ ಮಳಿಗೆಯಲ್ಲಿ ಹೈಬ್ರಿಡ್ ಮುಸುಕಿನ ಜೋಳ ಎಂಎಎಚ್ 14- 5 ತಳಿಯ 32 ಕ್ವಿಂಟಾಲ್, ಡೆಲ್ಟಾ 90 ವಿ 90 ತಳಿಯ 28 ಕ್ವಿಂಟಾಲ್, ಹೈ. ಮುಸುಕಿನ ಜೋಳ ಈಗಲ್ 10 ತಳಿಯ 22 ಕ್ವಿಂಟಾಲ್, ಹೈ. ಮುಸುಕಿನ ಜೋಳ ಈಗಲ್ 20 ತಳಿಯ 24.4 ಕ್ವಿಂಟಾಲ್ ಮತ್ತು ಸೋಯಾಬಿನ್ 26.75 ಕ್ವಿಂಟಾಲ್ ಸೇರಿದಂತೆ ಒಟ್ಟಾರೆಯಾಗಿ ರೂ.18.48 ಲಕ್ಷ ಮೌಲ್ಯದ ಅನಧಿಕೃತವಾಗಿ ಸಂಗ್ರಹಿಸಿದ ದಾಸ್ತಾನನ್ನು ಜಪ್ತಿ ಮಾಡಲಾಯಿತು. ಮೆ. ಈಗಲ್ ಸೀಡ್ಸ್ ಆಯಂಡ್ ಬಯೋಟೆಕ್ ಲಿಮಿಟೆಡ್ ಮಾರಾಟ ಮಳಿಗೆಯಲ್ಲಿ ಹೈ.ಮುಸುಕಿನ ಜೋಳ ಈಗಲ್ 10 ತಳಿಯ 33.20 ಕ್ವಿಂಟಾಲ್, ಹೈ. ಮುಸುಕಿನ ಜೋಳ ಈಗಲ್ 20 ತಳಿಯ 30 ಕ್ವಿಂಟಾಲ್ ಸೇರಿದಂತೆ ಒಟ್ಟಾರೆಯಾಗಿ ರೂ.11.85 ಲಕ್ಷ ಮೌಲ್ಯದ ಅನಧಿಕೃತ ದಾಸ್ತಾನನ್ನು ಜಪ್ತಿ ಮಾಡಲಾಯಿತು.

ಎರಡೂ ಅಂಗಡಿಗಳ ವಿರುದ್ಧ ಪ್ರಕರಣ:
ಈ ಎರಡೂ ಅಂಗಡಿಗಳ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲು ಕ್ರಮ ಕೈಗೊಳ್ಳಲಾಯಿತು. ಜಾಗೃತ ದಳದ ಅಧಿಕಾರಿಗಳಾದ ರಾಘವೇಂದ್ರ ಬಮ್ಮಿಗಟ್ಟಿ, ವಿ.ವಿ.ವಿಠ್ಠಲರಾವ್ , ಉಪ ಕೃಷಿ ನಿರ್ದೇಶಕರಾದ ಮಂಜುನಾಥ ಅಂತರವಳ್ಳಿ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು.
(ಒನ್ಇಂಡಿಯಾ ಸುದ್ದಿ)
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications