ಹುಬ್ಬಳ್ಳಿಯಲ್ಲಿ ಕೃಷಿ ಇಲಾಖೆ ಜಾಗೃತ ದಳದ ದಾಳಿ; ಅನಧಿಕೃತ ಬೀಜ ದಾಸ್ತಾನು ಜಫ್ತಿ
ಹುಬ್ಬಳ್ಳಿ, ಮೇ 27: ಶಹರದ ಅಮರಗೋಳದ ಎಪಿಎಂಸಿ ಆವರಣದಲ್ಲಿರುವ ವಿವಿಧ ಬಿತ್ತನೆ ಬೀಜಗಳ ದಾಸ್ತಾನು ಮಳಿಗೆಗಳಿಗೆ ಕೃಷಿ ಇಲಾಖೆಯ ಜಾಗೃತ ದಳದ ಅಧಿಕಾರಿಗಳ ತಂಡ ಭೇಟಿ ನೀಡಿ ಸುಮಾರು 30.33 ಲಕ್ಷ ರೂ. ಮೌಲ್ಯದ ಅನಧಿಕೃತ ಬಿತ್ತನೆ ಬೀಜ ದಾಸ್ತಾನು ವಶಪಡಿಸಿಕೊಂಡು, ಎರಡು ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮೆ. ಗಾಯತ್ರಿದೇವಿ ಅಗ್ರೋ ಸರ್ವೀಸಸ್ ಮಾರಾಟ ಮಳಿಗೆಯಲ್ಲಿ ಹೈಬ್ರಿಡ್ ಮುಸುಕಿನ ಜೋಳ ಎಂಎಎಚ್ 14- 5 ತಳಿಯ 32 ಕ್ವಿಂಟಾಲ್, ಡೆಲ್ಟಾ 90 ವಿ 90 ತಳಿಯ 28 ಕ್ವಿಂಟಾಲ್, ಹೈ. ಮುಸುಕಿನ ಜೋಳ ಈಗಲ್ 10 ತಳಿಯ 22 ಕ್ವಿಂಟಾಲ್, ಹೈ. ಮುಸುಕಿನ ಜೋಳ ಈಗಲ್ 20 ತಳಿಯ 24.4 ಕ್ವಿಂಟಾಲ್ ಮತ್ತು ಸೋಯಾಬಿನ್ 26.75 ಕ್ವಿಂಟಾಲ್ ಸೇರಿದಂತೆ ಒಟ್ಟಾರೆಯಾಗಿ ರೂ.18.48 ಲಕ್ಷ ಮೌಲ್ಯದ ಅನಧಿಕೃತವಾಗಿ ಸಂಗ್ರಹಿಸಿದ ದಾಸ್ತಾನನ್ನು ಜಪ್ತಿ ಮಾಡಲಾಯಿತು. ಮೆ. ಈಗಲ್ ಸೀಡ್ಸ್ ಆಯಂಡ್ ಬಯೋಟೆಕ್ ಲಿಮಿಟೆಡ್ ಮಾರಾಟ ಮಳಿಗೆಯಲ್ಲಿ ಹೈ.ಮುಸುಕಿನ ಜೋಳ ಈಗಲ್ 10 ತಳಿಯ 33.20 ಕ್ವಿಂಟಾಲ್, ಹೈ. ಮುಸುಕಿನ ಜೋಳ ಈಗಲ್ 20 ತಳಿಯ 30 ಕ್ವಿಂಟಾಲ್ ಸೇರಿದಂತೆ ಒಟ್ಟಾರೆಯಾಗಿ ರೂ.11.85 ಲಕ್ಷ ಮೌಲ್ಯದ ಅನಧಿಕೃತ ದಾಸ್ತಾನನ್ನು ಜಪ್ತಿ ಮಾಡಲಾಯಿತು.

ಎರಡೂ ಅಂಗಡಿಗಳ ವಿರುದ್ಧ ಪ್ರಕರಣ:
ಈ ಎರಡೂ ಅಂಗಡಿಗಳ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲು ಕ್ರಮ ಕೈಗೊಳ್ಳಲಾಯಿತು. ಜಾಗೃತ ದಳದ ಅಧಿಕಾರಿಗಳಾದ ರಾಘವೇಂದ್ರ ಬಮ್ಮಿಗಟ್ಟಿ, ವಿ.ವಿ.ವಿಠ್ಠಲರಾವ್ , ಉಪ ಕೃಷಿ ನಿರ್ದೇಶಕರಾದ ಮಂಜುನಾಥ ಅಂತರವಳ್ಳಿ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು.
(ಒನ್ಇಂಡಿಯಾ ಸುದ್ದಿ)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications