ಹುಬ್ಬಳ್ಳಿಯಲ್ಲಿ ಕೃಷಿ ಇಲಾಖೆ ಜಾಗೃತ ದಳದ ದಾಳಿ; ಅನಧಿಕೃತ ಬೀಜ ದಾಸ್ತಾನು ಜಫ್ತಿ
ಹುಬ್ಬಳ್ಳಿ, ಮೇ 27: ಶಹರದ ಅಮರಗೋಳದ ಎಪಿಎಂಸಿ ಆವರಣದಲ್ಲಿರುವ ವಿವಿಧ ಬಿತ್ತನೆ ಬೀಜಗಳ ದಾಸ್ತಾನು ಮಳಿಗೆಗಳಿಗೆ ಕೃಷಿ ಇಲಾಖೆಯ ಜಾಗೃತ ದಳದ ಅಧಿಕಾರಿಗಳ ತಂಡ ಭೇಟಿ ನೀಡಿ ಸುಮಾರು 30.33 ಲಕ್ಷ ರೂ. ಮೌಲ್ಯದ ಅನಧಿಕೃತ ಬಿತ್ತನೆ ಬೀಜ ದಾಸ್ತಾನು ವಶಪಡಿಸಿಕೊಂಡು, ಎರಡು ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮೆ. ಗಾಯತ್ರಿದೇವಿ ಅಗ್ರೋ ಸರ್ವೀಸಸ್ ಮಾರಾಟ ಮಳಿಗೆಯಲ್ಲಿ ಹೈಬ್ರಿಡ್ ಮುಸುಕಿನ ಜೋಳ ಎಂಎಎಚ್ 14- 5 ತಳಿಯ 32 ಕ್ವಿಂಟಾಲ್, ಡೆಲ್ಟಾ 90 ವಿ 90 ತಳಿಯ 28 ಕ್ವಿಂಟಾಲ್, ಹೈ. ಮುಸುಕಿನ ಜೋಳ ಈಗಲ್ 10 ತಳಿಯ 22 ಕ್ವಿಂಟಾಲ್, ಹೈ. ಮುಸುಕಿನ ಜೋಳ ಈಗಲ್ 20 ತಳಿಯ 24.4 ಕ್ವಿಂಟಾಲ್ ಮತ್ತು ಸೋಯಾಬಿನ್ 26.75 ಕ್ವಿಂಟಾಲ್ ಸೇರಿದಂತೆ ಒಟ್ಟಾರೆಯಾಗಿ ರೂ.18.48 ಲಕ್ಷ ಮೌಲ್ಯದ ಅನಧಿಕೃತವಾಗಿ ಸಂಗ್ರಹಿಸಿದ ದಾಸ್ತಾನನ್ನು ಜಪ್ತಿ ಮಾಡಲಾಯಿತು. ಮೆ. ಈಗಲ್ ಸೀಡ್ಸ್ ಆಯಂಡ್ ಬಯೋಟೆಕ್ ಲಿಮಿಟೆಡ್ ಮಾರಾಟ ಮಳಿಗೆಯಲ್ಲಿ ಹೈ.ಮುಸುಕಿನ ಜೋಳ ಈಗಲ್ 10 ತಳಿಯ 33.20 ಕ್ವಿಂಟಾಲ್, ಹೈ. ಮುಸುಕಿನ ಜೋಳ ಈಗಲ್ 20 ತಳಿಯ 30 ಕ್ವಿಂಟಾಲ್ ಸೇರಿದಂತೆ ಒಟ್ಟಾರೆಯಾಗಿ ರೂ.11.85 ಲಕ್ಷ ಮೌಲ್ಯದ ಅನಧಿಕೃತ ದಾಸ್ತಾನನ್ನು ಜಪ್ತಿ ಮಾಡಲಾಯಿತು.

ಎರಡೂ ಅಂಗಡಿಗಳ ವಿರುದ್ಧ ಪ್ರಕರಣ:
ಈ ಎರಡೂ ಅಂಗಡಿಗಳ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲು ಕ್ರಮ ಕೈಗೊಳ್ಳಲಾಯಿತು. ಜಾಗೃತ ದಳದ ಅಧಿಕಾರಿಗಳಾದ ರಾಘವೇಂದ್ರ ಬಮ್ಮಿಗಟ್ಟಿ, ವಿ.ವಿ.ವಿಠ್ಠಲರಾವ್ , ಉಪ ಕೃಷಿ ನಿರ್ದೇಶಕರಾದ ಮಂಜುನಾಥ ಅಂತರವಳ್ಳಿ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು.
(ಒನ್ಇಂಡಿಯಾ ಸುದ್ದಿ)












Click it and Unblock the Notifications