ಹುಬ್ಬಳ್ಳಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಒಂದು ಕಡೆ ಸ್ಮಾರ್ಟ್ ಸಿಟಿ ಪೂರ್ಣವಾಗಿಲ್ಲ
ಹುಬ್ಬಳ್ಳಿ, ಡಿಸೆಂಬರ್ 07: ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆದಿರುವ ಕಾಮಗಾರಿಗಳಲ್ಲಿ ಲೋಪ ಉಂಟಾಗಿದೆ. ಗುಣಮಟ್ಟದ ಕಾಮಗಾರಿಗಳು ಇಲ್ಲಿ ನಡೆದಿಲ್ಲ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಎಲ್ಲಾ ವಿಚಾರಗಳನ್ನು ಹಳ್ಳಿ ಹಳ್ಳಿಗೆ ಹೋಗಿ ಜನರೊಟ್ಟಿಗೆ ಚರ್ಚಿಸುತ್ತೇವೆ. ಎಎಪಿ ಸಂಸ್ಥಾಪನಾ ದಿನದಂದು ಮಾಡಿರುವ ಪ್ರಮಾಣದಂತೆ, ಭ್ರಷ್ಟಾಚಾರ ಬಯಲಿಗೆಳೆಯುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಗುಡುಗಿದ್ದಾರೆ. ಕಾಮಗಾರಿ, ಹಣ ಬಳಕೆ, ಭ್ರಷ್ಟಾಚಾರದ ಲೆಕ್ಕಾಚಾರದ ಅಂಕಿ ಅಂಶಗಳು ಇಲ್ಲಿವೆ.
ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೂರು ಪಕ್ಷಗಳು ಲೂಟಿ ಹೊಡೆದಿವೆ. ನರೇಂದ್ರ ಮೋದಿಯವರ ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಠಾನ ಸರಿಯಾಗಿಲ್ಲ. 100 ಸ್ಮಾರ್ಟ್ ಸಿಟಿಗಳಲ್ಲಿ ಒಂದೇ ಒಂದು ಕಡೆ ಪೂರ್ಣಗೊಂಡಿಲ್ಲ. ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆ ಕೂಡ ಹಳ್ಳ ಹಿಡಿದಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ದೂರಿದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು ಖಂಡಿಸಿ, ಮುಂದಿನ 15 ರಿಂದ 20 ದಿನಗಳಲ್ಲಿ ಶ್ವೇತಪತ್ರ ಹೊರಡಿಸಬೇಕು. ಈ ಸಂಬಂಧ ಸಮಗ್ರ ತನಿಖೆಗೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷ ರಾಜ್ಯದಾದ್ಯಂತ ಬೀದಿಗಿಳಿದು ಹೋರಾಟ ನಡೆಸಲಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೇಂದ್ರದಿಂದ ಬಿಡುಗಡೆಯಾಗಿರುವ ಹಣವೆಷ್ಟು, ರಾಜ್ಯದಿಂದ ಬಿಡುಗಡೆ ಆಗಿರುವ ಹಣ ಎಷ್ಟು ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದರು.
ಕೇವಲ 33 ಕೋಟಿ ರೂ.ಮಾತ್ರವೇ ಬಳಕೆ
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬಿಡುಗಡೆಯಾಗಿರುವ 1000 ಕೋಟಿ ರೂ. ಪೈಕಿ ಸುಮಾರು 33 ಕೋಟಿ ಅಂದರೆ ಶೇ 0.3 ರಷ್ಟು ಮಾತ್ರ ಬಳಸಲಾಗಿದೆ. ಈ ಪೈಕಿ ಶಿಕ್ಷಣ- 4 ಕೋಟಿ ರೂ., ಆರೋಗ್ಯ- 29 ಕೋಟಿ ರೂ. ನಿಗದಿಪಡಿಸಲಾಗಿದೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಪಟ್ಟ ಯೋಜನೆಗಳಿಗೆ ಕಡಿಮೆ ಹಣ ಮೀಸಲಿಟ್ಟಿದೆ. ಇದೇನಾ ಬಿಜೆಪಿ ಸರ್ಕಾರದ ನಿಯತ್ತು ಎಂದು ಪ್ರಶ್ನಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಶೇ 40 ರಿಂದ 50 ರಷ್ಟು ಭ್ರಷ್ಟಾಚಾರ ನಡೆದಿದೆ. ರಸ್ತೆಗಳು, ಗ್ರೀನ್ ಕಾರಿಡಾರ್ ಯೋಜನೆಗಳು ಶಹರ ಪಟ್ಟಣಕ್ಕೆ ಒಳ್ಳೆಯ ಮೆರಗು ನೀಡುತ್ತಿವೆ. ಆದರೂ, ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ. ಇದನ್ನೆಲ್ಲಾ ನೋಡಿದರೆ 1000 ಕೋಟಿ ರೂ. ವೆಚ್ಚದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಅದನ್ನು ಬಯಲಿಗೆಳೆದು ಹುಬ್ಬಳ್ಳಿ-ಧಾರವಾಡವನ್ನು ನಿಜವಾಗಿಯೂ ಸ್ಮಾರ್ಟ್ ಸಿಟಿಯನ್ನಾಗಿ ಮಾಡಲು ಆಮ್ ಆದ್ಮಿ ಪಕ್ಷ ಕೆಲಸ ಮಾಡಲಿದೆ ಎಂದರು.

ಇಲ್ಲಿ ವಾರ್ಡ್ ಸಮಿತಿ ಕಾರ್ಯಗತಗೊಂಡಿಲ್ಲ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಜನರ ಸಹಭಾಗಿತ್ವಕ್ಕೆ ವಾರ್ಡ್ ಸಮಿತಿ ರಚಿಸುವ ಕಾಯ್ದೆ ಇದ್ದರೂ, ಪಾಲಿಕೆ ಅಸ್ತಿತ್ವಕ್ಕೆ ಬಂದು 3 ವರ್ಷ ಕಳೆದರೂ ವಾರ್ಡ್ ಸಮಿತಿ ರಚಿಸಿ ಕಾರ್ಯರೂಪಕ್ಕೆ ತಂದಿಲ್ಲ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಥವಾ ಬೇರೆ ಯಾವುದೇ ಪಕ್ಷಗಳಿಗೆ ರಾಜಕೀಯ ಇಚ್ಛಾಶಕ್ತಿ ಇಲ್ಲ. ಚುನಾವಣೆ ಇದ್ದಾಗ ಮಾತ್ರ ಜನರು ನೆನಪಾಗುತ್ತಾರೆ. ಇದು ಖಂಡನೀಯ ಎಂದು ಹೇಳಿದರು.
ಇದಕ್ಕೂ ಮುನ್ನ ಚಿಟಗುಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಅಲ್ಲಿನ ನ್ಯೂನತೆಗಳ ಬಗ್ಗೆ ವೈದ್ಯರೊಂದಿಗೂ ಚರ್ಚೆ ನಡೆಸಿದರು.
ಭವಾನಿ ರೇವಣ್ಣ ವಿರುದ್ಧ ಕಿಡಿ
ತಮ್ಮ ಕಾರಿಗೆ ಅಪಘಾತ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಭವಾನಿ ರೇವಣ್ಣ ಅವರ ನಡೆ ಅಮಾನವೀಯವಾಗಿದ್ದು, ಅವರು ಕ್ಷಮೆ ಕೇಳಬೇಕು. ತಮ್ಮ ಒಂದೂವರೆ ಕೋಟಿ ಬೆಲೆ ಬಾಳುವ ಕಾರಿನ ಮುಂದೆ ಮನುಷ್ಯರ ಜೀವಕ್ಕೆ ಬೆಲೆ ಇಲ್ಲದಂತೆ ಅವರು ಮಾತನಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ನಡೆದುಕೊಳ್ಳಬಾರುದು ಎಂದರು.
ಭವಾನಿ ಅವರನ್ನು ಸಮರ್ಥಿಸುವ ರೀತಿಯಲ್ಲಿ ದೇವೇಗೌಡರು ಮತ್ತು ರೇವಣ್ಣ ಅವರು ಮಾತನಾಡಿರುವುದು ಸರಿಯಲ್ಲ. ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಬಸವರಾಜ ಮುದಿಗೌಡರ್, ಅನಂತಕುಮಾರ್ ಬುಗುಡಿ, ಜಿಲ್ಲಾಧ್ಯಕ್ಷ ಪ್ರವೀಣ್ ನಡಕಟ್ಟಿನ , ಮಹಿಳಾ ಘಟಕದ ಅಧ್ಯಕ್ಷೆ ಪ್ರತಿಭಾ ದಿವಾಕರ ,ಜಿಲ್ಲಾ ಮಾಧ್ಯಮ ಉಸ್ತುವಾರಿ ಮಲ್ಲಿಕಾರ್ಜುನ ಹಿರೇಮಠ , ಬಸವರಾಜ ಗುತ್ತೇದಾರ ಮತ್ತಿತರರು ಪಾಲ್ಗೊಂಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications