ಹುಬ್ಬಳ್ಳಿ: ಬೈಕ್ ಸವಾರನ ಬಳಿ ಹೆಲ್ಮೆಟ್ ಇಲ್ಲ ಅಂದ್ರೆ ಪೆಟ್ರೋಲ್ ಇಲ್ಲ
ಬೆಂಗಳೂರು, ಫೆಬ್ರವರಿ 22 : ಅವಳಿನಗರಗಳಾದ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಬೈಕ್ ಸವಾರ ಹೆಲ್ಮೆಟ್ ಧರಿಸಿಲ್ಲ ಎಂದರೆ ಪೆಟ್ರೋಲ್ ಕೂಡ ದೊರೆಯುವುದಿಲ್ಲ. ಅಲ್ಲಿ ಸಂಚಾರ ಪೊಲೀಸರು ಈ ಒಂದು ಕ್ರಮಕ್ಕೆ ಮುಂದಾಗಿದ್ದಾರೆ.
ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದರೂ ಯಾರೂ ಕೂಡ ನಿಯಮ ಪಾಲಿಸುತ್ತಿಲ್ಲ, ಎಷ್ಟೇ ಕಾರ್ಯಕ್ರಮಗಳು, ರೋಡ್ ಶೋ ಗಳನ್ನು ನಡೆಸಿ ಹೆಲ್ಮೆಟ್ ಕುರಿತಾಗಿ ಜಾಗೃತಿ ಕಾರ್ಯಕ್ರಮಗಳನ್ನು ಪೊಲೀಸರು ಹಮ್ಮಿಕೊಂಡಿದ್ದರೂ ಕೂಡ ಸಾರ್ವಜನಿಕರು ಈ ಬಗ್ಗೆ ಎಚ್ಚೆತ್ತುಕೊಂಡಿಲ್ಲ.
ದಿನಕ್ಕೇ ಸಾಕಷ್ಟು ಅಪಘಾತಗಳು ಕೂಡ ಸಂಭವಿಸುತ್ತಿದೆ. ಇದೆಲ್ಲವನ್ನು ತಡೆಯಲು ಸಂಚಾರ ಪೊಲೀಸರು ಬೈಕ್ ಸವಾರರು ಹೆಲ್ಮೆಟ್ ಧರಿಸಿದರೆ ಮಾತ್ರ ಪೆಟ್ರೋಲ್ ನೀಡಲಾಗುವುದು ಎನ್ನುವ ನಿಯಮವನ್ನು ತಂದಿದ್ದಾರೆ.

ಪೊಲೀಸರು ಈ ಕುರಿತು ಪೆಟ್ರೋಲ್ ಬಂಕ್ ಮಾಲೀಕರ ಬಳಿ ಸಭೆ ನಡೆಸಿದ್ದು, ಒಂದೊಮ್ಮೆ ಹೆಲ್ಮೆಟ್ ಧರಿಸದೆ ಇರುವವರಿಗೆ ಪೆಟ್ರೋಲ್ ಕೂಡ ನೀಡಬಾರದು ಎಂದು ಸೂಚನೆ ನೀಡಿದ್ದಾರೆ. ಜತೆಗೆ ತಮ್ಮ ಈ ಅಭಿಯಾನಕ್ಕೆ ಸಾಥ್ ನೀಡುವಂತೆ ಮನವಿ ಮಾಡಿದ್ದಾರೆ. ಎರಡು ನಗರಗಳು ಸೇರಿ ಸುಮಾರು 4 ಲಕ್ಷಕ್ಕೂ ಹೆಚ್ಚು ಬೈಕ್ ಸವಾರರಿದ್ದಾರೆ.
ಹೆಲ್ಮೆಟ್ ಕುರಿತು ಅರಿವು ಮೂಡಿಸಲು ಪೊಲೀಸರು ಅನೇಕ ಅಭಿಯಾನ ಹಮ್ಮಿಕೊಂಡಿದ್ದರು ಅದರೆ ಯಾವುದೇ ಪ್ರಯೋಜ ನವಾಗಿಲ್ಲ. ನಗರದ ಪ್ರಮುಖ ಭಾಗಗಳಲ್ಲಿ ಒಟ್ಟು 15 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಹೆಲ್ಮೆಟ್ ಧರಿಸದಿರುವ ಬೈಕ್ ಸವಾರರಿಗೆ ಪೆಟ್ರೋಲ್ ನೀಡದೆ ಪೊಲೀಸರು ಖುದ್ದಾಗಿ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಹೆಲ್ಮೆಟ್ ಧರಿಸಿದೆ ಇರುವವರು ಅಥವಾ ಸಂಚಾರಿ ನಿಯಮವನ್ನು ಉಲ್ಲಂಘಿಸುವವರಿಗೆ ದಂಡವನ್ನು ವಿಧಿಸಲಾಗುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎಂಎನ್. ನಾಗರಾಜ್ ತಿಳಿಸಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications