ಹುಬ್ಬಳ್ಳಿಯಲ್ಲಿ ಪಾಟೀಲ ಪುಟ್ಟಪ್ಪರಿಂದ ಧ್ವಜಾರೋಹಣ
ಹುಬ್ಬಳ್ಳಿ, ಆಗಸ್ಟ್ 15: ನಗರದಲ್ಲಿ ಸೋಮವಾರ ಸಂಭ್ರಮದ 70 ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ನೆಹರು ಮೈದಾನ, ಈದ್ಗಾ ಮೈದಾನ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಧ್ವಜಾರೋಹಣ ಮಾಡಲಾಯಿತು.
ಹಲವಾರು ರಸ್ತೆ, ವೃತ್ತಗಳಲ್ಲಿ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ನಗರದ ವಿವಿಧ ಸರಕಾರಿ ಕಚೇರಿಗಳಲ್ಲೂ ಧ್ವಜಾರೋಹಣ ನೆರವೇರಿಸಿದ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು.

ಕೆಲವೆಡೆ ರಾಷ್ಟ್ರಧ್ವಜವನ್ನು ಉಚಿತವಾಗಿ ವಿತರಿಸಲಾಗುತ್ತಿತ್ತು. ನಗರದ ಗೆಳೆಯರ ಬಳಗವೊಂದರ ಸದಸ್ಯರು ರಾಷ್ಟ್ರಧ್ವಜವನ್ನು ಬೇಕಾಬಿಟ್ಟಿಯಾಗಿ ಬಳಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಸಿಂಗಾರಗೊಂಡ ಆಟೋಗಳು:
ನಗರದಲ್ಲಿ ಹಲವಾರು ಆಟೋ ಚಾಲಕರು ತಮ್ಮ ವಾಹನಗಳನ್ನು ಹೂವಿನಿಂದ ಮತ್ತು ರಾಷ್ಟ್ರಧ್ವಜಗಳಿಂದ ಅಲಂಕರಿಸಿದ್ದರು. ಕೆಲವರು ಮಹದಾಯಿ ಹೋರಾಟದ ಕುರಿತಾದ ಚಿತ್ರಗಳನ್ನು ಬಿಡಿಸಿಕೊಂಡಿದ್ದರು. ಇನ್ನೂ ಕೆಲವರು ಮಹದಾಯಿ ಡ್ಯಾಂ ಚಿತ್ರದ ಮೂಲಕ ಗಮನ ಸೆಳೆದರು.
ಕೆಲವೆಡೆ ಆಟೋ ಚಾಲಕರ ಸಂಘಟನೆಗಳಿಂದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ವಾತಂತ್ರ್ಯೋತ್ಸವ ಅಗವಾಗಿ ವಿವಿಧೆಡೆ ಉಚಿತ ಆರೋಗ್ಯ ತಪಾಸಣೆ, ಉಚಿತ ಯೋಗ ಶಿಬಿರ, ಉಚಿತ ಸಸಿ ವಿತರಣೆ ಮತ್ತಿತರ ಕಾರ್ಯಕ್ರಮ ಆಯೋಜಿಸಲಾಗಿತ್ತು. .
ಜಿಮಖಾನಾ ಮೈದಾನದಲ್ಲಿ ಧ್ವಜಾರೋಹಣ:
ನಗರದಲ್ಲಿ ವಿವಾದಿತ ಪ್ರದೇಶ ಎಂದೇ ಕರೆಸಿಕೊಂಡಿರುವ ದೇಶಪಾಂಡೆ ನಗರದ ಜಿಮಖಾನಾ ಮೈದಾನದಲ್ಲಿ ಸೋಮವಾರ ಗ್ರೌಂಡ್ ಬಚಾವ್ ಸಮಿತಿ ವತಿಯಿಂದ ಧ್ವಜಾರೋಹಣವನ್ನು ಪತ್ರಕರ್ತ ಡಾ.ಪಾಟೀಲ ಪುಟ್ಟಪ್ಪ ನೆರವೇರಿಸಿದರು. ಮೈದಾನವನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿಡಬೇಕು ಎಂದರು.
ಸಮಿತಿ ಅಧ್ಯಕ್ಷ ಸಿಬಿಎಲ್ ಹೆಗಡೆ ಮಾತನಾಡಿ, ಎರಡು ಕೋರ್ಟ್ ಗಳಲ್ಲಿ ನಮ್ಮದೇ ಗೆಲುವು ಆಗಿದೆ. ಆದರೆ ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಗೇಟ್ ಬಂದ್ :
ಗ್ರೌಂಡ್ ಬಚಾವ್ ಸಮಿತಿಯವರು ಸೋಮವಾರ ಬೆಳಗ್ಗೆ ಧ್ವಜಾರೋಹಣಕ್ಕೆ ಬರುತ್ತಿದ್ದಾರೆ ಎಂದು ಮೊದಲೇ ಅರಿತಿದ್ದ ಜಿಮಖಾನಾ ಕ್ಲಬ್ ನವರು, ಯಾವ ವಾಹನವೂ ಒಳಗಡೆ ಬರಬಾರದೆಂದು. ಗೇಟ್ ಮುಂದೆ ದೊಡ್ಡ ಪಿಚ್ ರೋಲರ್ ನಿಲ್ಲಿಸಿದ್ದರು. ಪಾಟೀಲ ಪುಟ್ಟಪ್ಪನವರ ಕಾರು ಬಂದಾಗ ಗೇಟ್ ತೆಗೆಯಲು ಕ್ಲಬ್ ನವರಿಗೆ ಸಮಿತಿಯವರು ಮನವಿ ಮಾಡಿದರು. ಆದರೆ ಪಿಚ್ ರೋಲರ್ ಕೆಟ್ಟಿದೆ ಅದು ಚಾಲೂ ಆಗುವುದಿಲ್ಲ ಎಂದು ಹೇಳಿದರು. ಪಟ್ಟು ಬಿಡದ ಸಮಿತಿ ಸದಸ್ಯರು ಪೊಲೀಸರ ಮಧ್ಯಸ್ಥಿಕೆಯಲ್ಲಿ ಗೇಟ್ ತೆಗೆಯಿಸಿ, ಪಾಟೀಲ ಪುಟ್ಟಪ್ಪನವರ ವಾಹನವನ್ನು ಒಳಗಡೆ ಬಿಡಲಾಯಿತು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಸಂಸದ ಪ್ರಹ್ಲಾದ ಜೋಶಿಯವರ ಕುಮ್ಮಕ್ಕಿನಿಂದ ಪಾಲಿಕೆ ಸದಸ್ಯ ವೀರಣ್ಣ ಸವಡಿ ಗೇಟ್ ಬಂದ್ ಮಾಡಿಸಿದ್ದಾರೆ ಎಂದು ಸಮಿತಿ ಸದಸ್ಯರು ಆರೋಪಿಸಿದ್ದಾರೆ.
ಮತ್ತೊಂದು ಮನೆಗಳ್ಳತನ:
ಸರಗಳ್ಳರ ಮತ್ತು ಮನೆಗಳ್ಳರ ರಾಜಧಾನಿ ಎಂದೇ ಕುಖ್ಯಾತಿ ಗಳಿಸುತ್ತಿರುವ ಹುಬ್ಬಳ್ಳಿಯಲ್ಲಿ ಮತ್ತೊಂದು ಮನೆಗಳವು ಪ್ರಕರಣ ನಡೆದಿದೆ.
ಕೇಶ್ವಾಪುರ ಭಾಗದ ಬಾಲಾಜಿ ನಗರದ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 35 ಗ್ರಾಂ. ಬಂಗಾರ ಮತ್ತು 3 ಸಾವಿರ ರು. ನಗದನ್ನು ಕಳ್ಳರು ಎಗರಿಸಿದ್ದಾರೆ.
ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಗೆ ದೂರು ನೀಡಿರುವ ವಿಜಯಪುರದ ಹುಡ್ಕೋ ಕಾಲೋನಿಯ ಶ್ರೀದೇವಿ ಮಹೇಶ ಬಡಿಗೇರ ಹುಬ್ಬಳ್ಳಿಯ ತಮ್ಮ ಸಂಬಂಧಿಕರ ಮನೆಯಲ್ಲಿ ಕಳ್ಳತನವಾಗಿದೆ ಎಂದು ತಿಳಿಸಿದ್ದಾರೆ.
ವ್ಯಾನಿಟಿ ಬ್ಯಾಗ್ ನಲ್ಲಿದ್ದ ಹಣ ಮತ್ತು ಮಂಗಳಸೂತ್ರವನ್ನು ಕದಿಯಲಾಗಿದೆ ಎಂದು ಶ್ರೀದೇವಿ ದೂರು ನೀಡಿದ್ದಾರೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications