Election Special Train: ಮತದಾರರಿಗಾಗಿ ಬೆಂಗಳೂರು-ಧಾರವಾಡ-ಬೆಳಗಾವಿ ವಿಶೇಷ ರೈಲು: ವೇಳಾಪಟ್ಟಿ
ಹುಬ್ಬಳ್ಳಿ, ಮೇ 04: ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಬಳಿಕ ಇದೇ ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ಸಂಬಂಧ ಪ್ರಯಾಣಿಕರ/ಮತದಾರರ ಅನುಕೂಲಕ್ಕಾಗಿ ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ. ಹಾಗಾದರೆ ಎಲ್ಲಿಂದ ಎಲ್ಲಿಗೆ ಈ ರೈಲು ಪ್ರಯಾಣಿಸಲಿದೆ? ನಿಲ್ದಾಣ, ಸಮಯದ ಮಾಹಿತಿಗೆ ಮುಂದೆ ಓದಿ.
ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನ ಸಂಬಂಧ ನೈಋತ್ಯ ರೈಲ್ವೆಯು (SWR) ರಾಜ್ಯದ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೇವೆ ಒದಗಿಸಿದೆ. ಈ ರೈಲು ದಕ್ಷಿಣ ಕರ್ನಾಟಕದಿಂದ ಉತ್ತರ ಕರ್ನಾಟಕದ ಗಡಿ ಜಿಲ್ಲೆವರೆಗೆ ಸಂಪರ್ಕ ಸಾಧಿಸಲಿದೆ.

ಚುನಾವಣಾ ವಿಶೇಷ ರೈಲು ಮತದಾನ ಒಂದು ದಿನ (ಮೇ 7) ಮುಂಚಿತವಾಗಿ ರಾತ್ರಿ ಅಂದರೆ ಮೇ 6ರಂದು ಸೋಮವಾರ ರಾತ್ರಿ 9.55ಗಂಟೆಗೆ ಬೆಂಗಳೂರಿನಿಂದ ಪ್ರಯಾಣ ಬೆಳೆಸಲಿದೆ. ತುಮಕೂರು, ಅರಸೀಕೆರೆ, ದಾವಣಗೆರೆ, ಹಾವೇರಿ ಮಾರ್ಗವಾಗಿ ಹುಬ್ಬಳ್ಳಿ-ಧಾರವಾಡಕ್ಕೆ ಬೆಳಗ್ಗೆ 5 ಗಂಟೆಗೆ ತಲುಪಲಿದೆ.
ಬೆಳಗಾವಿವರೆಗೂ ರೈಲು ಸೇವೆ
ಇದೇ ರೈಲು ಧಾರವಾಡದಿಂದ ಮುಂದೆ ಸಾಗಿ ಗೋಕಾಕ್- ಘಟಪ್ರಭಾ-ರಾಯಭಾಗ- ಕುಡಚಿ ಮಾರ್ಗವಾಗಿ ಬೆಳಗ್ಗೆ 10:30 ಗಂಟೆಗೆ ಬೆಳಗಾವಿ ತಲುಪಲಿದೆ. ಈ ಮೂಲಕ ಬೆಂಗಳೂರಿನಂತಹ ಮಹಾನಗರಗಳಲ್ಲಿ ಉದ್ಯೋಗ ಮಾಡುವ ನೌಕರರಿಗೆ ಮತದಾನ ದಿನ ಅವರವರ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ಈ ರೈಲ್ವೆ ಸೌಲಭ್ಯ ಕಲ್ಪಿಸಲಾಗಿದೆ.
ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ವೇಳೆ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಹಾಗೂ ರಾಜ್ಯದ ಗಡಿ ಜಿಲ್ಲೆ ಬೆಳಗಾವಿ ಭಾಗದಲ್ಲಿ ಮತದಾನದ ಹಕ್ಕಿರುವವರು, ಕೆಲಸದ ನಿಮಿತ್ತ ಬೇರೆ ನಗರಗಳಲ್ಲಿ ಕೆಲಸ ಮಾಡುತ್ತಿರುತ್ತಾರೆ. ಇಂತಹವರಿಗೆ ಸೂಕ್ತ ದಿನದಂದು ತಮ್ಮೂರುಗಳಿಗೆ ಪ್ರಯಾಣಿಸಲು ಈ ವಿಶೇಷ ರೈಲು ಸಂಚಾರದಿಂದ ಅನುಕೂಲವಾಗಲಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಯಾರೊಬ್ಬರೂ ಮತದಾನ ಪ್ರಕ್ರಿಯೆಯಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಹಾಗೂ ಹೆಚ್ಚಿನ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ಈ ವಿಶೇಷ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮತದಾರರು ಸೇರಿದಂತೆ ಸಾರ್ವಜನಿಕರು ಈ ರೈಲ್ವೆಯ ಸದುಪಯೋಗ ಮಾಡಿಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.
ಚುನಾವಣೆಗಾಗಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ
ರೈಲು ಮಾತ್ರವಲ್ಲದೇ ಬೆಂಗಳೂರಿನಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು, ಗ್ರಾಮಗಳಿಗೆ ಮತದಾನ ದಿನ ತೆರಳಲು ಅನುಕೂಲವಾಗುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ (NWKRTC) ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು ಮಾತ್ರವಲ್ಲದೇ, ಪುಣೆ, ಗೋವಾರ ಸೇರಿದಂತೆ ಇನ್ನಿತರ ಭಾಗಗಳಿಂದಲೂ ನೀವು ಎರಡನೇ ಹಂತದ ಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕದ ನಿಮ್ಮ ಜಿಲ್ಲೆಗಳು ಮತ್ತು ಊರುಗಳಿಗೆ ಬರಲು ಅನುಕೂಲವಾಗುವಂತೆ NWKRTC ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಘಟಕ ಸಾರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications