Mumbai-Hubballi Flight Service: ಹುಬ್ಬಳ್ಳಿ-ಮುಂಬೈ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ
ಹುಬ್ಬಳ್ಳಿ, ಜೂನ್ 19: ಬಹುಬೇಡಿಕೆ ಇರುವ ಮುಂಬೈ ಹಾಗೂ ಹುಬ್ಬಳ್ಳಿ ಮಹಾನಗರಗಳ ಮಧ್ಯ ಶೀಘ್ರವೇ ವಿಮಾನ ಸೇವೆ ಆರಂಭವಾಗಲಿದೆ. ಈ ಕುರಿತು ಕೇಂದ್ರ ಸಚಿವರು ಮಾಡಿದ್ದ ಮನವಿಗೆ ಸ್ಪಂದಿಸಿರುವ ವಿಮಾನಯಾನ ಸಂಸ್ಥೆ ಸಕಾರಾತ್ಮಕವಾಗಿ ಸ್ಪಂದಿಸಿದೆ.
ದೇಶದ ವಾಣಿಜ್ಯ ನಗರಿ ಮುಂಬೈ ಕರ್ನಾಟಕ ವಾಣಿಜ್ಯ ನಗರಿ ಹುಬ್ಬಳ್ಳಿ ನಡುವೆ ಇಂಡಿಗೋ (Indigo 6e) ವಿಮಾನಯಾನ ಸೇವೆ ಪುನಾರಂಭಗೊಳ್ಳಲಿದೆ. ಮುಂದಿನ ತಿಂಗಳ ಜುಲೈ 15ರಿಂದ ಈ ಎರಡು ಮಹಾನಗರಗಳ ಪ್ರಯಾಣಿಕರು ಇಂಡಿಗೋ ವಿಮಾನದಲ್ಲಿ ಸಂಚರಿಸಬಹುದಾಗಿದೆ.

ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಮನವಿ ಮೇರೆಗೆ ಇಂಡಿಗೋ 6 ಇ ವಿಮಾನ ಸಂಚಾರವನ್ನು ಮತ್ತೆ ಶುರು ಮಾಡಲು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ.
IndiGo6E ನ ನಿರ್ವಹಣೆಗೆ ಸಚಿವ ಜೋಶಿ ಅವರು ಈ ಹಿಂದೆ ನಾಗರಿಕ ವಿಮಾನಯಾನ ಸಚಿವಾಲಯದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಸಚಿವಾಲಯ ಇದೀಗ ವಿಮಾನ ಸಂಚಾರ ಪುನರಾರಂಭಕ್ಕೆ ಕ್ರಮ ಕೈಗೊಂಡಿದೆ.

ಮುಂಬೈ-ಹುಬ್ಬಳ್ಳಿ- ಮುಂಬೈ (Mumbai-Hubballi-Mumbai flight service) ನಡುವೆ ಜುಲೈ 15ರಿಂದ ದೈನಂದಿನ ವಿಮಾನಗಳು ನಿರಂತರವಾಗಿ ಕಾರ್ಯ ನಿರ್ವಹಿಸಲಿವೆ. ಇದರ ವೇಳಾಪಟ್ಟಿ ಸಹ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲದ್ ಜೋಶಿ ಟ್ವಿಟ್ಟರ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಹುಬ್ಬಳ್ಳಿ-ಮುಂಬೈ ವಿಮಾನಯಾನದ ವೇಳಾಪಟ್ಟಿ
ಸೇವೆ ಆರಂಭವಾದ ನಂತರ ಇಂಡಿಗೋ ವಿಮಾನವು ಮುಂಬೈನಿಂದ ಮಧ್ಯಾಹ್ನ 3 ಗಂಟೆಗೆ ಹೊರಟರೆ ಸಂಜೆ 4.10ಗಂಟೆಗೆ ಸರಿಯಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿದೆ. ಸಂಜೆ 4.40ಕ್ಕೆ ಹುಬ್ಬಳ್ಳಿಯಿಂದ ಹೊರಡುವ ಇಂಡಿಗೋ ವಿಮಾನವು ಸಂಜೆ 5.50ಕ್ಕೆ ಮುಂಬೈ ವಿಮಾನ ನಿಲ್ದಾಣ ತಲುಪಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ಕೊಟ್ಟಿದೆ.
ತಮ್ಮ ಪ್ರಸ್ತಾವನೆ ಪುರಸ್ಕರಿಸಿ ಇಂಡಿಗೋ ವಿಮಾನ ಸಂಚಾರ ಪುನರಾರಂಭ ವ್ಯವಸ್ಥೆ ಕಲ್ಪಿಸಿದ ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಸಚಿವ ಪ್ರಹ್ಲಾದ್ ಜೋಶಿ ಅವರು ಧನ್ಯವಾದ ತಿಳಿಸಿದ್ದಾರೆ.
ಮುಂಬೈ ಹಾಗೂ ಹುಬ್ಬಳ್ಳಿ ಮಧ್ಯೆ ವಿಮಾನ ಸಂಪರ್ಕಕ್ಕೆ ಭಾರೀ ಬೇಡಿಕೆ ಇದೆ. ನಿತ್ಯ ನೂರಾರು ಪ್ರಮಾಣಿಕರು ಈ ಎರಡು ಮಹಾನಗರಗಳ ಮಧ್ಯೆ ಸಂಚರಿಸುತ್ತಾರೆ. ಇದೀಗ ವಿಮಾನ ಸೇವೆ ಪುನಾರಂಭದ ಬಗ್ಗೆ ಇಂಡಿಯೋ ಸಹ ಖಚಿತಪಡಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications