Hubli to Pune Flight : ಮಾರ್ಚ್ 13ರಂದು ಹುಬ್ಬಳ್ಳಿ-ಪುಣೆ ನಡುವೆ ದೈನಂದಿನನ ವಿಮಾನ ಕಾರ್ಯಾಚರಣೆ ಆರಂಭ
ಹುಬ್ಬಳ್ಳಿಯಿಂದ ಪುಣೆಗೆ ದೈನಂದಿನ ಇಂಡಿಗೋ ವಿಮಾನವೂ ಮಾರ್ಚ್ 13 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಹುಬ್ಬಳ್ಳಿ, ಮಾರ್ಚ್, 01: ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ಇಂಡಿಗೋ ವಿಮಾನವು ಮಾರ್ಚ್ 13 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.
ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಿದ ನಂತರ, ಇಲ್ಲಿನ ನಿವಾಸಿಗಳು ದೇಶದ ಇತರ ನಗರಗಳಿಗೆ ಹೆಚ್ಚಿನ ವಿಮಾನಗಳನ್ನು ಬಿಡುವುದಾಗಿ ಕೋರಿದ್ದಾರೆ. ಆದ್ದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಯಾವ ಮಾರ್ಗಗಳಲ್ಲಿ ವಿಮಾನ ಹಾರಾಟ?
ಇಂಡಿಗೋ ಮತ್ತು ಸ್ಟಾರ್ ಏರ್ ಹುಬ್ಬಳ್ಳಿಯಿಂದ ಬೆಂಗಳೂರು, ಹೈದರಾಬಾದ್, ಚೆನ್ನೈ, ಮುಂಬೈ, ಮೈಸೂರು, ಮಂಗಳೂರು ಮತ್ತು ನವದೆಹಲಿಗೆ ವಿಮಾನಗಳ ಹಾರಾಟ ನಡೆಸುತ್ತದೆ. ಪುಣೆಗೆ ಈಗ ವಾರಕ್ಕೆ ಎರಡು ಬಾರಿ ವಿಮಾನ ಹಾರಾಟ ನಡೆಸಲಿದೆ. ಶನಿವಾರ ಮತ್ತು ಭಾನುವಾರದಂದು ಈ ಸೇವೆ ಇರಲಿದೆ. ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆಗಳು ಬರುತ್ತಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಇಂಡಿಗೋ ಪ್ರತಿನಿತ್ಯ ವಿಮಾನಗಳ ಹಾರಾಟವನ್ನು ಪ್ರಾರಂಭಿಸಲು ನಿರ್ಧಾರ ಮಾಡಿದೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದೇನು?
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ನಾನು ಈಗಾಗಲೇ ಇಂಡಿಗೋ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಮತ್ತು ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಪುಣೆಗೆ ದೈನಂದಿನ ವಿಮಾನವನ್ನು ನಿರ್ವಹಿಸಲು ಹಸಿರು ನಿಶಾನೆ ತೋರಿಸಿದ್ದಾರೆ. ಫೆಬ್ರವರಿ 4 ರಿಂದ ಶನಿವಾರ ಮತ್ತು ಭಾನುವಾರದಂದು ವಾರಕ್ಕೆ ಎರಡು ಬಾರಿ ವಿಮಾನ ಕಾರ್ಯನಿರ್ವಹಿಸುತ್ತದೆ. ಹುಬ್ಬಳ್ಳಿಯಿಂದ ಪ್ರಮುಖ ಸ್ಥಳಗಳಲ್ಲಿ ಒಂದಾದ ಪುಣೆಗೆ ಇದೇ ಮಾರ್ಚ್ 13ರಿಂದ ಪ್ರತಿದಿನ ಕಾರ್ಯಾಚರಣೆ ಆರಂಭವಾಗಲಿದೆ ಎಂದರು.

ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ ಮಾತನಾಡಿ, ಇಂಡಿಗೋ ತನ್ನ ದೈನಂದಿನ ವಿಮಾನವನ್ನು ಪುಣೆಗೆ ಮಾರ್ಚ್ 13ರಿಂದ ಹಾರಾಟ ನಡೆಸಲಿದೆ. ಇಂಡಿಗೋ ಸಲ್ಲಿಸಿದ ಪ್ರಸ್ತಾವನೆಗೆ ಪ್ರತಿಕ್ರಿಯೆಯಾಗಿ ನಾವು ನಮ್ಮ ಸ್ಲಾಟ್ಗಳನ್ನು ತೆರವುಗೊಳಿಸಿದ್ದೇವೆ. ಹಾಗೆಯೇ ಅಹಮದಾಬಾದ್, ಗೋವಾ, ಕೊಚ್ಚಿನ್, ಜೋಧ್ಪುರ ಮತ್ತು ಇತರ ನಗರಗಳಿಗೆ ವಿಮಾನಗಳು ಹಾರಾಟ ನಡೆಸುವಂತೆ ಪ್ರಯತ್ನಿಸುತ್ತಿದ್ದು, ಇದು ಶೀಘ್ರದಲ್ಲೇ ಜಾರಿಗೆ ಬರಲಿದೆ. ಈ ಉದ್ದೇಶಿತ ಪುಣೆ ವಿಮಾನವು ಉತ್ತರ ಕರ್ನಾಟಕದ ಆರ್ಥಿಕ ಅಭಿವೃದ್ಧಿಗೆ ನೆರವಾಗಲಿದೆ ಎಂದು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications