ರೈಲ್ವೇ ಪದೋನ್ನತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ಹುಬ್ಬಳ್ಳಿ, ಸೆಪ್ಟೆಂಬರ್, 13: ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಇಡೀ ದೇಶದಲ್ಲೇ ಸಂಚಲ ಮೂಡಿಸಿತ್ತು. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಬಗೆದಷ್ಟು ಅಪರಾಧಿಗಳು ಹೊರಬರುತ್ತಲೇ ಇದ್ದಾರೆ. ಈ ಅಕ್ರಮ ನೇಮಕಾತಿ ಪ್ರಕರಣ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತಂದು ಕೊಟ್ಟಿದೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಇನ್ನೂ ಹಸಿಯಾಗಿದ್ದಾಗಲೇ ರೈಲ್ವೇ ಪದೋನ್ನತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.
ನೇಮಕಾತಿ ಅಕ್ರಮ ಪ್ರಕರಣ ಎಲ್ಲೆಡೆಯೂ ಹರಡುತ್ತಿದೆ. ರಾಜ್ಯ ಸರ್ಕಾರದ ಬಹುತೇಕ ಹುದ್ದೆಗಳಲ್ಲಿ ಅಕ್ರಮ ನಡೆದಿದ್ದು, ತನಿಖೆ ಕೂಡ ನಡೆಯುತ್ತಿರುವ ಬೆನ್ನಲ್ಲೇ ಇದೀಗ ರೈಲ್ವೇ ಇಲಾಖೆಯಲ್ಲೊಂದು ಗಂಭೀರ ಆರೋಪ ಕೇಳಿ ಬಂದಿದೆ. ರೈಲ್ವೇ ಪರೀಕ್ಷೆ ವಿಧಾನದ ವಿರುದ್ಧ ಸಿಬ್ಬಂದಿಗಳೇ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಅಭ್ಯರ್ಥಿಗಳು ಮರು ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ. ದೊಡ್ಡಮಟ್ಟದ ಅಕ್ರಮ ನಡೆದಿದೆ ಎಂದು ಅಸಮಾಧಾನಗೊಂಡ ಸಿಬ್ಬಂದಿ, ಇದೆಲ್ಲದಕ್ಕೂ ಸಾಕ್ಷಿ ಆಗಿದ್ದು ಹುಬ್ಬಳ್ಳಿ ರೈಲ್ವೇ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಎಂದು ಹೇಳುತ್ತಿದ್ದಾರೆ.
ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಅಕ್ರಮದ ಸದ್ದು
ರೈಲ್ವೇಯ ಗೂಡ್ಸ್ ಟ್ರೈನ್ ಮ್ಯಾನೇಜರ್ ಸಿಇಟಿ ಪ್ರಶ್ನೆಪತ್ರಿಕೆ ಬಹಿರಂಗಗೊಳಿಸಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಜಿ.ಟಿ.ಎಂ. ಪರೀಕ್ಷಾರ್ಥಿಗಳು ಹುಬ್ಬಳ್ಳಿಯ ನೈರುತ್ಯ ರೈಲ್ವೇ ಜಿ.ಎಂ. ಕಛೇರಿ ಬಳಿ ಹೋರಾಟ ನಡೆಸಿದ್ದಾರೆ. ಸೆಪ್ಟೆಂಬರ್ 04ರಂದು ರೈಲ್ವೇ ಇಲಾಖೆಯಲ್ಲಿ ಪದೋನ್ನತಿಗಾಗಿ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಸಿಇಟಿ ಜಿಟಿಎಲ್ ಆಂತರಿಕ ಸ್ಪರ್ಧಾ ಪರೀಕ್ಷೆಯನ್ನು ಆನ್ಲೈನ್ ಮೂಲಕ ನಡೆಸಲಾಗಿತ್ತು. ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆ ವಾಟ್ಸ್ ಆ್ಯಪ್ನಲ್ಲಿ ಹರಿದಾಡಿದೆ ಎಂಬ ಆರೋಪ ಕೇಳಿ ಬಂದಿದೆ.

147 ಹುದ್ದೆಗಳಿಗೆ ಒಟ್ಟು 4,685 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 200ಕ್ಕೂ ಹೆಚ್ಚು ಅಭ್ಯರ್ಥಿಗಳು ಶೇಕಡಾ 95 ರಿಂದ 96 ರಷ್ಟು ಅಂಕ ಪಡೆದಿದ್ದಾರೆ. ಹೀಗಾಗಿ ಇದನ್ನು ಖಂಡಿಸಿದ ಪರೀಕ್ಷಾರ್ಥಿಗಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಇನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ನೈರುತ್ಯ ರೈಲ್ವೇಯ ಜಿ.ಎಂ. ಗೆ ಮನವಿ ಸಲ್ಲಿಕೆ ಮಾಡದ್ದು, ಮರು ಪರೀಕ್ಷೆ ನಡೆಸುವಂತೆ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ. ಪರೀಕ್ಷೆ ನಡೆದು ಎಂಟು ದಿನಗಳಾಗಿದೆ. ಪ್ರಶ್ನೆಪತ್ರಿಕೆ ಲೀಕ್ ಆಗಿದೆ ಎಂದು ಇದೀಗ ಕೆಲ ಅಭ್ಯರ್ಥಿಗಳು ಆರೋಪಿಸಿದ್ದಾರೆ. ಈ ಕುರಿತು ಪಾರದರ್ಶಕ ತನಿಖೆ ನಡೆಸುವುದಾಗಿ ಸಿ.ಪಿ.ಆರ್.ಒ ಅನೀಶ್ ಹೆಗ್ಡೆ ಮಾಹಿತಿ ನೀಡಿದ್ದಾರೆ.
ಒಟ್ಟಿನಲ್ಲಿ ಅಭ್ಯರ್ಥಿಗಳಿಂದ ಆರೋಪ ಗಂಭೀರವಾಗಿ ಕೇಳಿ ಬಂದಿದ್ದು, ಕೇಂದ್ರ ಸರ್ಕಾರದ ವ್ಯವಸ್ಥೆ ಹಾಳು ಮಾಡಲು ಕೆಲವೊಂದು ಜಾಲ ಸಕ್ರಿಯವಾಗಿರುವುದು ಕಂಡುಬರುತ್ತಿದೆ. ಈ ಬಗ್ಗೆ ರೈಲ್ವೇ ಇಲಾಖೆ ಸೂಕ್ತ ತನಿಖೆ ನಡೆಸಿ, ಕ್ರಮಗಳನ್ನು ಕೈಗೊಳ್ಳುವ ಮೂಲಕ ಅರ್ಹರಿಗೆ ಪದೋನ್ನತಿ ನೀಡುವ ಕೆಲಸವನ್ನು ಮಾಡಬೇಕಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications