ಹುಬ್ಬಳ್ಳಿ ಗಲಭೆ ಪ್ರಕರಣ ಪ್ರಕರಣ ಕೈಬಿಡಲು ಡಿಸಿಎಂ ಪತ್ರ: ಪೊಲೀಸ್ ಕಮೀಷನರ್ ಹೇಳಿದ್ದೇನು..?
ಹುಬ್ಬಳ್ಳಿ, ಅಕ್ಟೋಬರ್ 03: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಮುಚ್ಚಿ ಹಾಕಲು ಗೃಹ ಇಲಾಖೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಂದಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
2022ರ ಏಪ್ರಿಲ್ನಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣವನ್ನು ಕೈಬಿಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕರ ನಡೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಡಿಕೆ ಶಿವಕುಮಾರ್ ಅವರ ಪತ್ರ ಈಗ ವಿವಾದ ಸೃಷ್ಟಿಸಿದೆ.
ಈ ಕುರಿತು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಸಹ ಮಾತನಾಡಿದ್ದು 'ಅದು ನಮ್ಮ ಆಡಳಿತಾತ್ಮಕ ಆಂತರಿಕ ವಿಚಾರ' ಎಂದಿದ್ದಾರೆ. ಹೀಗಾಗಿ ಈ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ.

ಈ ಹಿಂದೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದ ಬಗ್ಗೆ ತನ್ವೀರ್ ಸೇಠ್ ಪತ್ರ ಬರೆದಿದ್ದರು. ಇದೀಗ ಹುಬ್ಬಳ್ಳಿ ಗಲಭೆಯನ್ನು ಕೈಬಿಡಲು ಡಿಕೆ ಶಿವಕುಮಾರ್ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡುವಂತೆ ಗೃಹ ಇಲಾಖೆಗೆ ಪತ್ರ ಬರೆದ ಸಚಿವ ಡಿ.ಕೆ ಶಿವಕುಮಾರ್ ಅವರ ಶಿಫಾರಸು ಆಧರಿಸಿ ಪ್ರಕರಣದ ಮಾಹಿತಿಯನ್ನು ಎಡಿಜಿ ಕೇಳಿದ್ದಾರೆ. ಪ್ರಕರಣ ಹಿಂಪಡೆಯುವ ಬಗ್ಗೆ ದಾಖಲೆ ಸಹಿತ ಅಭಿಪ್ರಾಯ ಕೇಳಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರರಿಂದ ಹು-ಧಾ ಆಯುಕ್ತರಿಗೆ ಪತ್ರ ಬರೆಯಲಾಗಿದೆ.
ಹಳೇ ಹುಬ್ಬಳ್ಳಿ ಕೇಸ್ನಲ್ಲಿ ಹುಬ್ಬಳ್ಳಿ ಗಲಭೆಕೋರರ ಖುಲಾಸೆಗೆ, ಕೋಮುಗಲಭೆ ಪ್ರಕರಣ ಕೈಬಿಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಶಿಫಾರಸು ಪತ್ರ ಬರೆದಿರುವುದು ಈಗ ಬಹಿರಂಗ ಆಗಿದೆ. ಡಿಸಿಎಂ, ಶಾಸಕರ ಪತ್ರಕ್ಕೆ ಸ್ಪಂದಿಸುವ ನೆಪದಲ್ಲಿ ಕೇಸ್ ಕ್ಲೋಸ್ ಯತ್ನ ನಡೆಸುತ್ತಿದ್ದು, ಆಯುಕ್ತರು, ಎಸ್ಪಿಗಳಿಗೆ ಪತ್ರ ಬರೆದು ಎಡಿಜಿಪಿ ಮಾಹಿತಿ ಕೇಳಿದ್ದಾರೆ ಎನ್ನಲಾಗಿದೆ.
ಪ್ರಕರಣದ ಪೂರ್ಣ ವಿವರ ನೀಡುವಂತೆ ಡಿಜಿ-ಐಜಿ ಸೂಚನೆ ನೀಡಲಾಗಿದೆ. ಪ್ರಕರಣದ ಎಫ್ಐಆರ್, ಚಾರ್ಜ್ಶೀಟ್, ಸಾಕ್ಷಿಗಳ ಹೇಳಿಕೆ ಸಲ್ಲಿಸಲು ಸೂಚಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಸರ್ಕಾರ ಮುಸ್ಲಿಂ ತುಷ್ಠೀಕರಣಕ್ಕೆ ಇಳಿಯಿತಾ ಎಂಬ ಪ್ರಶ್ನೆ ಮೂಡಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಹಾಗೂ ಹಳೇ ಹುಬ್ಬಳ್ಳಿ ಕೇಸ್ ಮಾತ್ರವಲ್ಲದೆ ಶಿವಮೊಗ್ಗ, ಹಾವೇರಿ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲೂ ಇರುವ ಕೇಸ್ಗಳನ್ನು ಕೈಬಿಡಲು ಸಿದ್ಧತೆ ಮಾಡುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ. ಹಾಗಾದರೆ ಹುಬ್ಬಳ್ಳಿ ಧಾರವಾಡ ಪೊಲೀಸರು ಯಾವ ವರದಿ ಕೊಡುತ್ತಾರೆ ಕಾದು ನೋಡಬೇಕಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications