ಹುಬ್ಬಳ್ಳಿಯ ವಿವಿಧೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ
ಹುಬ್ಬಳ್ಳಿ, ಅಕ್ಟೋಬರ್ 5: ಇಲ್ಲಿನ ರಿಯಲ್ ಎಸ್ಟೇಟ್ ಉದ್ಯಮಿಗಳು, ಚಿನ್ನದ ಆಭರಣಗಳ ವ್ಯಾಪಾರಿಗಳಿಗೆ ಗೋವಾ ಮತ್ತು ಆಂಧ್ರ ಪ್ರದೇಶದ ಆದಾಯ ತೆರಿಗೆ ಅಧಿಕಾರಿಗಳು ಗುರುವಾರದಂದು ಆಘಾತ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಏಕಕಾಲದಲ್ಲಿ ನಾಲ್ಕು ಕಡೆ ಐಟಿ ದಾಳಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳು, ಚಿನ್ನಾಭರಣ ವ್ಯಾಪಾರಿಗಳ ಮನೆ, ಕಚೇರಿ, ಮಳಿಗೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದು, ಕೆಲ ಡೆವಲಪರ್ಸ್ ಗಳ ಮನೆಗಳ ಮೇಲೂ ದಾಳಿ ನಡೆದಿದೆ.
ಐಟಿ ವಿಚಾರಣೆಗೆ ಹಾಜರಾದ ಸಚಿವ ಡಿಕೆ ಶಿವಕುಮಾರ್
ಇನ್ನು ಹುಬ್ಬಳ್ಳಿಯ ಹೆಸರಾಂತ ಉದ್ಯಮಿ ದಿಲೀಪ್ ಸೆಲೇರಿ ಅವರ ಮನೆ ಹಾಗೂ ಕೊಪ್ಪಿಕರ್ ರಸ್ತೆಯ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಕೊಪ್ಪಿಕರ್ ರಸ್ತೆಯಲ್ಲಿ ಇರುವ ಮನೋಜ್ ಗೋಲ್ಡ್ ಅಂಡ್ ಡೈಮಂಡ್ ಜ್ಯೂವೆಲರಿ ಮಳಿಗೆ ಮೇಲೆ ದಾಳಿ ನಡೆಸಲಾಗಿದೆ. ಚೆನೈ, ಆಂಧ್ರಪ್ರದೇಶ ಹಾಗೂ ಗೋವಾದಿಂದ ಬಂದ ಆದಾಯ ತೆರಿಗೆ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.
ಇನ್ನು ಕೊಪ್ಪಿಕರ್ ರಸ್ತೆಯಲ್ಲಿರುವ ಸ್ಯಾಟಲೈಟ್ ಶಾಪಿಂಗ್ ಮಳಿಗೆಯಲ್ಲಿ ಇರುವ ಕಲೆ ರಿಯಲ್ ಎಸ್ಟೇಟ್ ಉದ್ಯಮಿಗಳ ಕಚೇರಿ ಮೇಲೆ ದಾಳಿ ನಡೆದಿದೆ. ಈ ಉದ್ಯಮಿಗಳ ಮೇಲಿನ ಐಟಿ ದಾಳಿಯು ಸಾಕಷ್ಟು ಕುತೂಹಲ ಕೆರಳಿಸಿದೆ. ಸ್ಥಳೀಯ ಅಧಿಕಾರಿಗಳಿಗೆ ಸಣ್ಣ ಸುಳಿವು ನೀಡದೆ ದಾಳಿ ನಡೆದಿದ್ದು, ಕೋಟ್ಯಂತರ ರುಪಾಯಿ ಮೌಲ್ಯದ ಭೂ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.