ಗಣಪತಿ ಪ್ರಕರಣ ಮುಚ್ಚಿಹಾಕಲು ಪ್ರಯತ್ನ: ಶೆಟ್ಟರ್
ಹುಬ್ಬಳ್ಳಿ, ಆಗಸ್ಟ್ 24 : ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಕೆಲ ಮಹತ್ವದ ಸಾಕ್ಷಿಗಳನ್ನು ಅಳಿಸಿ ಹಾಕಿದ್ದಾರೆ ಎಂದು ವಿಪಕ್ಷನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಗುರುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಈ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ. ತಮ್ಮ ಅಧೀನದಲ್ಲಿರುವ ಸಿಐಡಿಯನ್ನು ದುರ್ಬಳಕೆ ಮಾಡಿಕೊಂಡು ಈ ಕೆಲಸ ಮಾಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣ ವಿಚಾರಣೆಯಲ್ಲಿ ಇರುವಾಗಲೇ ಅವರ ಮೊಬೈಲ್ ನಲ್ಲಿರುವ ಮಾಹಿತಿಗಳನ್ನ ಡಿಲೀಟ್ ಆಗಿದ್ದು ಹೇಗೆ? ನೇರವಾಗಿ ಜಾರ್ಜ್ ಅವರು ಈ ಕೇಸ್ ನಲ್ಲಿ ಭಾಗಿಯಾಗಿ ಸಾಕ್ಷ್ಯನಾಶ ಮಾಡಿದ್ದಾರೆ.
ಹೀಗಾಗಿ ಕೂಡಲೇ ಜಾರ್ಜ್ ಅವರು ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರು ಜಾರ್ಜ್ ಅವರ ರಾಜೀನಾಮೆ ಪಡೆದು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.












Click it and Unblock the Notifications