ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಕಳಪೆ ಮನೆ ನಿರ್ಮಾಣ: ಶೆಟ್ಟರ್
ಹುಬ್ಬಳ್ಳಿ, ಜುಲೈ 03 : ರೈಲು ಯೋಜನೆಗಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಐಎಚ್ ಡಿಸಿ ಯೋಜನೆ ಅಡಿಯಲ್ಲಿ ಇಲ್ಲಿನ ಕನ್ಯಾ ನಗರದಲ್ಲಿ ನಿರ್ಮಿಸಿರುವ ಮನೆಗಳನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಸೋಮವಾರ ಪರಿಶೀಲಿಸಿದರು.
ರೈಲ್ವೆ ಯೋಜನೆಗಳಿಗಾಗಿ ಮನೆ ಕಳೆದುಕೊಂಡವರಿಗೆ ಪುನರ್ವಸತಿಗಾಗಿ ನಿರ್ಮಿಸಿರುವ ಈ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರ ಹಾಗೂ ಮನೆಗಳ ಗುಣಮಟ್ಟ ಕಳಪೆಯಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಯಿತು.

ಬಳಿಕ ಮಾತನಾಡಿದ ಜಗದೀಶ ಶೆಟ್ಟರ್, "ಒಟ್ಟು 13 ಕೋಟಿ ವೆಚ್ಚದಲ್ಲಿ ಧಾರವಾಡದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾಗಿರುವ ಈ ಮನೆಗಳು ಸಂಪೂರ್ಣ ಕಳಪೆಯಾಗಿದ್ದು, ನಿರ್ಮಾಣಕ್ಕೆ ಕಳಪೆ ವಸ್ತುಗಳನ್ನು ಉಪಯೋಗಿಸಲಾಗಿದೆ" ಎಂದು ಆರೋಪಿಸಿದರು.
ಮನೆಗಳು ವಾಸಕ್ಕೆ ಯೋಗ್ಯವಾಗಿಲ್ಲ. ಇದರಿಂದ ಸರ್ಕಾರದ ಹಣ ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಮಂಡಳಿಯ ಉನ್ನತ ಅಧಿಕಾರಿಗಳು ಈ ಕುರಿತು ಸಮಗ್ರ ತನಿಖೆ ನಡೆಸಬೇಕು. ಕಾಮಗಾರಿ ಕಳಪೆಯಾಗಲು ಕಾರಣರಾದ ಅಂದಿನ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಫಲಾನುಭವಿಗಳ ಆಯ್ಕೆಯಲ್ಲಿಯೂ ಅವ್ಯವಹಾರವಾಗಿದ್ದು, ಯೋಜನೆಯಲ್ಲಿ ನಿರಾಶ್ರಿತರಲ್ಲದವರಿಗೆ ಮನೆ ಹಂಚಿಕೆ ಮಾಡಲಾಗಿದೆ ಎಂಬ ಆರೋಪವಿದೆ. ಇದನ್ನೂ ಸಹ ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಬೇಕು. ಒಂದು ವೇಳೆ ಅಕ್ರಮ ನಡೆದಿದ್ದರೆ ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶೆಟ್ಟರ್ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರಣ್ಯ ನಗರ, ವಲ್ಲಭಾಯಿ ನಗರ, ಸುಡಗಾಡ ಚಾಳ, ಮಂಟೂರ ರಸ್ತೆ, ಹಾಗೂ ಮತ್ತಿತರ ಬಡಾವಣೆಗಳಲ್ಲಿ ನಿರ್ಮಾಣವಾಗಿರುವ ಮನೆಗಳನ್ನು ಪರಿಶೀಲಿಸಿದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications