ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತಹಾಕಿದ ಜನ, ರೈತರಿಗೆ ಕುಮಾರಸ್ವಾಮಿ ದ್ರೋಹ: ಜಗದೀಶ್ ಶೆಟ್ಟರ್‌

By Manjunatha
|
Google Oneindia Kannada News

ಹುಬ್ಬಳ್ಳಿ, ಮೇ 28: 'ನಾನು ಕರ್ನಾಟಕದ ಜನರ ಮುಲಾಜಿನಲ್ಲಿಲ್ಲ, ಕಾಂಗ್ರೆಸ್‌ನ ಮರ್ಜಿಯಲ್ಲಿದ್ದೇನೆ' ಎನ್ನುವ ಮೂಲಕ ಕುಮಾರಸ್ವಾಮಿ ಅವರು, ಮತ ಹಾಕಿದ ಜನರಿಗೆ, ರೈತರಿಗೆ ದ್ರೋಹ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದರು.

ರೈತರ ಸಾಲ ಮನ್ನಾ ಮಾಡಬೇಕು ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಅಧಿಕಾರ ವಹಿಸಿಕೊಂಡ 24 ಗಂಟೆಗಳಲ್ಲಿ ಸಾಲಮನ್ನಾ ಮಾಡುತ್ತೇನೆ ಎಂದು ಹೇಳಿದ್ದ ಕುಮಾರಸ್ವಾಮಿ ಅವರು ಈಗ ಯೂ ಟರ್ನ್‌ ಹೊಡೆದಿದ್ದಾರೆ' ಎಂದು ಅವರು ಆರೋಪಿಸಿದ್ದಾರೆ.

ರೈತರ ಸಾಲ ಮನ್ನಾ: ಜೆಡಿಎಸ್ ನಲ್ಲಿ ಏನು ಲೆಕ್ಕಾಚಾರ ನಡೀತಿದೆ?ರೈತರ ಸಾಲ ಮನ್ನಾ: ಜೆಡಿಎಸ್ ನಲ್ಲಿ ಏನು ಲೆಕ್ಕಾಚಾರ ನಡೀತಿದೆ?

ಪೂರ್ಣ ಬಹುಮತ ಬಂದಿಲ್ಲ, ಪೂರ್ಣ ಬಹುಮತ ಬಂದಿದ್ದರೆ ಸಾಲ ಮನ್ನಾ ಮಾಡುತ್ತಿದ್ದೆ ಎಂದು ಕುಮಾರಸ್ವಾಮಿ ಅವರು ಹೇಳಿರುವುದು ಪಲಾಯನವಾದ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

Jagadish Shettar lambasted on Kumaraswamy on his statement about loan wavier

ಸಾಲಮನ್ನಾ ಕುರಿತ ಕುಮಾರಸ್ವಾಮಿ ಅವರ ಹೇಳಿಕೆಗಳನ್ನು ರೈತರು ಗಮನಿಸಬೇಕು, ಹೇಗೆ ಕುಮಾರಸ್ವಾಮಿ ಚುನಾವಣೆಗಾಗಿ ರೈತರನ್ನು ಬಳಸಿಕೊಳ್ಳುತ್ತಾರೆ ಎಂಬುದು ಇದರಿಂದ ಗೊತ್ತಾಗುತ್ತದೆ. ಅಧಿಕಾರಕ್ಕೆ ಬರಲು ಸುಳ್ಳುಗಳನ್ನು ಹೇಳಿ ಈಗ ಎಚ್‌ಡಿಕೆ ಪಲಾಯನ ಮಾಡಿದ್ದಾರೆ ಎಂದರು.

ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಎಚ್.ಡಿ.ಕುಮಾರಸ್ವಾಮಿನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಎಚ್.ಡಿ.ಕುಮಾರಸ್ವಾಮಿ

'ನಮಗೆ ಜನಾದೇಶ ಇಲ್ಲ, ಹಾಗಾಗಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಹೇಳಿರುವ ಕುಮಾರಸ್ವಾಮಿ ಅವರು ಜನಾದೇಶ ಇಲ್ಲದಿದ್ದರೆ ಅಧಿಕಾರದಲ್ಲಿ ಏಕಿದ್ದಾರೆ? ಕೂಡಲೇ ಅವರು ಸಿಎಂ ಹುದ್ದೆಯಿಂದ ಕೆಳಗಿಳಿಯಲಿ ಎಂದು ಜಗದೀಶ್ ಶೆಟ್ಟರ್ ಒತ್ತಾಯಿಸಿದರು.

English summary
BJP leader Jagadish Shettar said 'HD Kumaraswamy dishonored Karnataka people by saying 'i'm in congress mercy not in Karnataka people mercy'. He said Kumaraswamy should waive off Farmers loan as he said before election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X