Get Updates
Get notified of breaking news, exclusive insights, and must-see stories!

'ಕೆಜೆಪಿಯಿಂದ ಬಿಎಸ್ ವೈ ಉಚ್ಚಾಟನೆಗೆ ಶೆಟ್ಟರ್ 10 ಕೋಟಿ ಡೀಲ್'

ಹುಬ್ಬಳ್ಳಿ, ಮಾರ್ಚ್ 26: "ಯಡಿಯೂರಪ್ಪ ಅವರನ್ನು ಕರ್ನಾಟಕ ಜನತಾ ಪಕ್ಷದಿಂದ (ಕೆಜೆಪಿ) ಉಚ್ಚಾಟನೆ ಮಾಡುವುದಕ್ಕೆ ನನಗೆ ಹತ್ತು ಕೋಟಿ ರುಪಾಯಿ ಆಮಿಷ ಒಡ್ಡಿದ್ದರು ಆಗ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್. ಈ ವಿಚಾರದಲ್ಲಿ ನನ್ನ ಬಳಿ ಮಧ್ಯಸ್ಥಿಕೆ ಮಾಡುವುದಕ್ಕೆ ಇಂದ್ರಜಿತ್ ಲಂಕೇಶ್ ಹಾಗೂ ಚಂದ್ರಚೂಡ ಬಂದಿದ್ದರು" ಎಂದು ಕೆಜೆಪಿಯ ರಾಷ್ಟ್ರಾಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ ಇಲ್ಲಿ ಸೋಮವಾರ ಹೇಳಿದ್ದಾರೆ.

ಇನ್ನೂ ಮುಂದುವರಿದು, ಈ ಬಗ್ಗೆ ಯಡಿಯೂರಪ್ಪ ಅವರಿಗೆ ತಿಳಿಸಿದ್ದೆ ಎಂದು ಕೂಡ ಹೇಳಿರುವ ಅವರು, ಆಗ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್ ಅವರು ತಮ್ಮ ಮನೆಗೆ ಕರೆಸಿಕೊಂಡು ನನಗೆ ಹಣದ ಆಮಿಷ ತೋರಿಸಿದ್ದರು. ಇದಕ್ಕೆ ಸಾಕ್ಷಿ ಅನ್ನೋ ಹಾಗೆ ನನ್ನ ಹತ್ತಿರ ವಿಡಿಯೋ ಇದೆ. ಅದನ್ನು ಬಿಡುಗಡೆ ಮಾಡುತ್ತೇನೆ ಎಂದು ಕೂಡ ಹೇಳಿದ್ದಾರೆ.

Jagadish Shettar offered 10 crore to expel Yeddyurappa from KJP

ಇನ್ನೇನು ವಿಧಾನಸಭೆ ಚುನಾವಣೆ ಹತ್ತಿರ ಇದೆ ಅನ್ನೋ ಕಾರಣಕ್ಕೆ ಈ ರೀತಿಯ ಆರೋಪ ಮಾಡುತ್ತಿಲ್ಲ. ಈ ಬಗ್ಗೆ ಯಾವ ದೇವರ ಮುಂದೆ ಬೇಕಾದರೂ ಪ್ರಮಾಣ ಮಾಡುವುದಕ್ಕೆ ನಾನು ಸಿದ್ಧನಾಗಿದ್ದೇನೆ ಎಂದು ಹೇಳಿರುವ ಪದ್ಮನಾಭ ಪ್ರಸನ್ನ ಕುಮಾರ್, ವಿಧಾನಸಭೆ ಚುನಾವಣೆಗೆ ತಮ್ಮ ಪಕ್ಷದಿಂದ ಸ್ಪರ್ಧಿಸುವ ನಲವತ್ಮೂರು ಅಭ್ಯರ್ಥಿಗಳು ಪಟ್ಟಿ ಸಹ ಬಿಡುಗಡೆ ಮಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+