ಸವದಿ, ಸಂತೋಷ್ ಪಕ್ಷ ತೊರೆದಿದ್ದರೂ, ಅಪರಾಧ ಮಾಡಿದವನಂತೆ ಎಲ್ಲಾ ನನ್ನ ಮೇಲೆ ಮುಗಿಬಿದ್ದಿದ್ದಾರೆ-ಶೆಟ್ಟರ್
ಹುಬ್ಬಳ್ಳಿ, ಏಪ್ರಿಲ್ 25: ಕೇಂದ್ರ ಸಚಿವ ಅಮಿತ್ ಶಾ, ಬಿ.ಎಸ್ ಯಡಿಯೂರಪ್ಪ, ಜೆ.ಪಿ ನಡ್ಡಾ, ಸ್ಮೃತಿ ಇರಾನಿ ಹೀಗೆ ಬಿಜೆಪಿ ನಾಯಕರು ಎಲ್ಲರೂ ಸೇರಿ ನನ್ನ ಸೋಲಿಸಲು ಪಣ ತೊಟ್ಟಿದ್ದಾರೆ. ಬಿಜೆಪಿ ನನ್ನನ್ನು ಸೋಲಿಸುವ ಅಭಿಯಾನ ನಡೆಸುತ್ತಿದೆ. ಈ ಬಡಪಾಯಿ ಮೇಲೆ ಯಾಕೆ ಮುಗಿ ಬೀಳುತ್ತಿದ್ದಾರೆ ಗೊತ್ತಿಲ್ಲ..? ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಯನೂರ ಮಂಜುನಾಥ್, ಲಕ್ಷ್ಮಣ ಸವದಿ, ಎನ್.ಆರ್ ಸಂತೋಷ್ ಎಲ್ಲರೂ ಪಕ್ಷ ತೊರೆದಿದ್ದಾರೆ. ಆದರೆ ನಾನು ಪಕ್ಷ ತೊರೆದಿದ್ದನ್ನು ದೊಡ್ಡ ಅಪರಾಧ ಮಾಡಿದವನಂತೆ ನನ್ನ ವಿರುದ್ಧ ಮುಗಿಬಿದ್ದಿದ್ದಾರೆ ಎಂದರು.

ಬಿ.ಎಸ್ ಯಡಿಯೂರಪ್ಪ ಕೆಜೆಪಿ ಕಟ್ಟುವಾಗ ಐಡಿಯಲಾಜಿ ಎಲ್ಲಿ ಹೋಗಿತ್ತು.? ಯಡಿಯೂರಪ್ಪ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಯಡಿಯೂರಪ್ಪ ಅವರ ಬೈಗುಳ, ಟೀಕೆಯನ್ನು ಆಶೀರ್ವಾದ ಎಂದು ತೆಗೆದುಕೊಂಡಿದ್ದೇನೆ. ಟಿಕೆಟ್ ಕೊಡಿಸುವುದಾಗಿ ಹೇಳಿ ಯಡಿಯೂರಪ್ಪ ಈಗ ಅಸಹಾಯಕರಾಗಿದ್ದಾರೆ. ಯಡಿಯೂರಪ್ಪ ಅವರ ಬೈಗುಳ ನನ್ನ ಗೆಲುವಿಗೆ ಅನುಕೂಲವಾಗಲಿದೆ. ನನಗೆ ಬೈದಷ್ಟು ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸ ಹೆಚ್ಚಾಗುತ್ತದೆ ಎಂದು ಹೇಳಿದರು.
ನಾನು ಪಕ್ಷ ದ್ರೋಹದ ಕೆಲಸ ಮಾಡಿಲ್ಲ. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಪಕ್ಷದಲ್ಲಿ ನನ್ನ ವಿರುದ್ಧ ಕುತಂತ್ರ ನಡೆದಿದೆ. ನೇರವಾಗಿ ನಾನು ಬಿ.ಎಲ್ ಸಂತೋಷ್ ಬಗ್ಗೆ ಟೀಕಿಸಿದ್ದು. ಆದರೆ ಸಂತೋಷ್ ಈ ಬಗ್ಗೆ ಉತ್ತರಿಸಿಲ್ಲ. ಯಡಿಯೂರಪ್ಪ ಅವರ ಹೆಗಲ ಮೇಲೆ ಬಂದೂಕು ಇಟ್ಟು ಹೊಡೆಯುವ ಕೆಲಸ ನಡೆದಿದೆ ಎಂದರು.

ಕೆಜೆಪಿ ಕಟ್ಟಿ ಶಿಗ್ಗಾಂವಿಗೆ ಪ್ರಚಾರಕ್ಕೆ ಹೋದಾದ ಇದೇ ಯಡಿಯೂರಪ್ಪ ಬೊಮ್ಮಾಯಿ ಅವರನ್ನು ಬೈಯ್ದಿದ್ದರು. ಆದರೆ ಬೊಮ್ಮಾಯಿ ಗೆದ್ದು ಬಂದಿದ್ದರು. ಸೆಂಟ್ರಲ್ ಕ್ಷೇತ್ರದಲ್ಲಿ ನನ್ನ ಗೆಲ್ಲುವುದು ನಿಶ್ಚಿತ ಎಷ್ಟು ಜನ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ. ಟೀಕೆ ಮಾಡುತ್ತಾರಾ ಮಾಡಲಿ ಅದು ನನಗೆ ಲಾಭವಾಗಲಿದೆ. ಐಡಿಯಾಲಜಿ ಬಗ್ಗೆ ಮಾತನಾಡುವವರು ಈ ಹಿಂದೆ ಆಪರೇಶನ್ ಮೂಲಕ ಕಾಂಗ್ರೆಸ್ನವರನ್ನ ಪಕ್ಷಕ್ಕೆ ಕರೆತಂದರು ನಾನು ಯಾವತ್ತೂ ಬಿಜೆಪಿಗೆ ಅನ್ಯಾಯ, ದ್ರೋಹ ಮಾಡಿಲ್ಲ ಕೇವಲ ಹುದ್ದೆಗಾಗಿ ನಾನು ಪಕ್ಷ ತೊರೆದಿಲ್ಲ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ನಾನು ಪಕ್ಷ ತೊರೆದಿದ್ದೇನೆ ಎಂದು ತಮ್ಮ ನಿಲುವುವನ್ನು ಸಮರ್ಥಿಸಿಕೊಂಡರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications