ಬೆಳಗಾವಿ ದಂಡು ಮಂಡಳಿಯ ಜಾಗ ಹಸ್ತಾಂತರ: ರಕ್ಷಣಾ ಸಚಿವರಲ್ಲಿ ಜಗದೀಶ್ ಶೆಟ್ಟರ್ ಮನವಿ
ಹುಬ್ಬಳ್ಳಿ, ಜುಲೈ 25: ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು/ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡುವಂತೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮನವಿ ಮಾಡಿದರು.
ಈ ಕುರಿತು ಕೇಂದ್ರ ರಕ್ಷಣಾ ಸಚಿವರನ್ನು ಭೇಟಿ ಮಾಡಿರುವ ಜಗದೀಶ್ ಶೆಟ್ಟರ್ ಅವರು ವಿಸ್ತೃತವಾಗಿ ಚರ್ಚಿಸಿದರು. ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು/ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ತಯಾರಿಸಬೇಕು.

ಈ ಬಗ್ಗೆ ಕಟ್ಟು ನಿಟ್ಟಿನ ಸೂಚನೆಯನ್ನು ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವಂತೆ ಜಗದೀಶ್ ಶೆಟ್ಟರ್ ಮನವಿ ಮಾಡಿದರು. ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಸಂಸದರ ಮನವಿಗಳನ್ನು ಆಲಿಸಿದರು. ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಜಾಗ ಹಸ್ತಾಂತರ ಮಾಡಲು ಮನವಿ
ಬೆಳಗಾವಿ ದಂಡು ಮಂಡಳಿ ಇದರ ವ್ಯಾಪ್ತಿಯಲ್ಲಿ ನೊಟಿಫೈಡ್ ಸಿವಿಲ್ ಪ್ರದೇಶಗಳನ್ನು ಮಾತ್ರ ಅಧಿಕಾರಿಗಳು ಗುರುತಿಸಿದ್ದಾರೆ. ಉಳಿದ ಸಿವಿಲ್ ಏರಿಯಾಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಬಗ್ಗೆ ಕರಡು ಪ್ರಸ್ತಾವನೆಯಲ್ಲಿ ಪ್ರಸ್ತಾಪ ಮಾಡಿರಲ್ಲಿಲ ಎಂಬುದನ್ನು ಶೆಟ್ಟರ್ ಸಚಿವರ ಗಮನಕ್ಕೆ ತಂದರು.
ಅಧಿಕಾರಿಗಳು ಕೇವಲ 'ಬಜಾರ ಏರಿಯಾ' ಮಾತ್ರ ಪರಿಗಣಿಸಿ 'ಬಂಗಲೋ ಏರೊಯಾ' ಮಾಡಿರಿಲ್ಲಿಲ. ಈ ಕುರಿತು ದಿನಾಂಕ 06.07.2024 ರಂದು ಜರುಗಿದ ದಂಡು ಮಂಡಳಿ ಸಭೆಯಲ್ಲಿ ಖುದ್ದಾಗಿ ಹಾಜರಿದ್ದು, ಮಾಹಿತಿ ನೀಡಿದರು. ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿರಲಿಲ್ಲ.

ರಕ್ಷಣಾ ಸಚಿವಾಲಯದ ಆದೇಶಗಳಂತೆ ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ಸಿವಿಲ್ ಏರೀಯಗಳನ್ನು ಗುರುತಿಸಿ "ಕರಡು ಪ್ರಸ್ತಾವನೆಯನ್ನು ತಯಾರಿಸಿ ಸಲ್ಲಿಸುವಂತೆ ಕರ್ನಾಟಕ ರಾಜ್ಯಕ್ಕೆ ಸೂಚಿಸಲು ಮನವಿ ಮಾಡಿಕೊಂಡರು.
ಎಲ್ಲ ವಿಷಯವನ್ನು ಆಲಿಸಿದ ಮಾನ್ಯ ರಕ್ಷಣಾ ಸಚಿವರು, ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಕ್ಷಣಾ ಸಚಿವಾಲಯದ ನಿರ್ದೇಶಗಳಡಿಯಲ್ಲಿಯೇ ಪ್ರಸ್ತಾಪಿತ ಕರಡು ಪ್ರಸ್ತಾವನೆ ತಯಾರಿಸಬೇಕು. ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆಯನ್ನು ಬೆಳಗಾವಿ ದಂಡು ಮಂಡಳಿ ಅಧಿಕಾರಿಗಳಿಗೆ ನೀಡಲಾಗುವುದು ಎಂದು ಭರವಸೆಯನ್ನು ನೀಡಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications