ಬೆಳಗಾವಿ ದಂಡು ಮಂಡಳಿಯ ಜಾಗ ಹಸ್ತಾಂತರ: ರಕ್ಷಣಾ ಸಚಿವರಲ್ಲಿ ಜಗದೀಶ್ ಶೆಟ್ಟರ್ ಮನವಿ
ಹುಬ್ಬಳ್ಳಿ, ಜುಲೈ 25: ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು/ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡುವಂತೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮನವಿ ಮಾಡಿದರು.
ಈ ಕುರಿತು ಕೇಂದ್ರ ರಕ್ಷಣಾ ಸಚಿವರನ್ನು ಭೇಟಿ ಮಾಡಿರುವ ಜಗದೀಶ್ ಶೆಟ್ಟರ್ ಅವರು ವಿಸ್ತೃತವಾಗಿ ಚರ್ಚಿಸಿದರು. ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು/ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ತಯಾರಿಸಬೇಕು.

ಈ ಬಗ್ಗೆ ಕಟ್ಟು ನಿಟ್ಟಿನ ಸೂಚನೆಯನ್ನು ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವಂತೆ ಜಗದೀಶ್ ಶೆಟ್ಟರ್ ಮನವಿ ಮಾಡಿದರು. ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಸಂಸದರ ಮನವಿಗಳನ್ನು ಆಲಿಸಿದರು. ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಜಾಗ ಹಸ್ತಾಂತರ ಮಾಡಲು ಮನವಿ
ಬೆಳಗಾವಿ ದಂಡು ಮಂಡಳಿ ಇದರ ವ್ಯಾಪ್ತಿಯಲ್ಲಿ ನೊಟಿಫೈಡ್ ಸಿವಿಲ್ ಪ್ರದೇಶಗಳನ್ನು ಮಾತ್ರ ಅಧಿಕಾರಿಗಳು ಗುರುತಿಸಿದ್ದಾರೆ. ಉಳಿದ ಸಿವಿಲ್ ಏರಿಯಾಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಬಗ್ಗೆ ಕರಡು ಪ್ರಸ್ತಾವನೆಯಲ್ಲಿ ಪ್ರಸ್ತಾಪ ಮಾಡಿರಲ್ಲಿಲ ಎಂಬುದನ್ನು ಶೆಟ್ಟರ್ ಸಚಿವರ ಗಮನಕ್ಕೆ ತಂದರು.
ಅಧಿಕಾರಿಗಳು ಕೇವಲ 'ಬಜಾರ ಏರಿಯಾ' ಮಾತ್ರ ಪರಿಗಣಿಸಿ 'ಬಂಗಲೋ ಏರೊಯಾ' ಮಾಡಿರಿಲ್ಲಿಲ. ಈ ಕುರಿತು ದಿನಾಂಕ 06.07.2024 ರಂದು ಜರುಗಿದ ದಂಡು ಮಂಡಳಿ ಸಭೆಯಲ್ಲಿ ಖುದ್ದಾಗಿ ಹಾಜರಿದ್ದು, ಮಾಹಿತಿ ನೀಡಿದರು. ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿರಲಿಲ್ಲ.

ರಕ್ಷಣಾ ಸಚಿವಾಲಯದ ಆದೇಶಗಳಂತೆ ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ಸಿವಿಲ್ ಏರೀಯಗಳನ್ನು ಗುರುತಿಸಿ "ಕರಡು ಪ್ರಸ್ತಾವನೆಯನ್ನು ತಯಾರಿಸಿ ಸಲ್ಲಿಸುವಂತೆ ಕರ್ನಾಟಕ ರಾಜ್ಯಕ್ಕೆ ಸೂಚಿಸಲು ಮನವಿ ಮಾಡಿಕೊಂಡರು.
ಎಲ್ಲ ವಿಷಯವನ್ನು ಆಲಿಸಿದ ಮಾನ್ಯ ರಕ್ಷಣಾ ಸಚಿವರು, ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಕ್ಷಣಾ ಸಚಿವಾಲಯದ ನಿರ್ದೇಶಗಳಡಿಯಲ್ಲಿಯೇ ಪ್ರಸ್ತಾಪಿತ ಕರಡು ಪ್ರಸ್ತಾವನೆ ತಯಾರಿಸಬೇಕು. ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆಯನ್ನು ಬೆಳಗಾವಿ ದಂಡು ಮಂಡಳಿ ಅಧಿಕಾರಿಗಳಿಗೆ ನೀಡಲಾಗುವುದು ಎಂದು ಭರವಸೆಯನ್ನು ನೀಡಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications