ಬಿಜೆಪಿಗೆ ಸೇರಿ ಜಗದೀಶ್ ಶೆಟ್ಟರ್ ಲಿಂಗಾಯತರಿಗೆ ಮೋಸ ಮಾಡಿದ್ದಾರೆ: ಹೀಗಂದವರು ಯಾರು? ಏಕೆ?
ಹುಬ್ಬಳ್ಳಿ, ಜನವರಿ 28: ಕಾಂಗ್ರೆಸ್ ಸೇರಿ ಕೆಲವೇ ತಿಂಗಳಲ್ಲಿ ಮರಳಿ ಬಿಜೆಪಿಗೆ ಸೇರ್ಪಡೆ ಆಗಿದ್ದಕ್ಕೆ ಜಗದೀಶ್ ಶೆಟ್ಟರ್ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ. ಲಿಂಗಾಯತ ಸಮುದಾಯದ ಹಿರಿಯ ನಾಯಕ ಶೆಟ್ಟರ್ ನಡೆ, ನಿರ್ಧಾರ ವಿರುದ್ಧ ಅವರ ಸಮುದಾಯದವರೇ ಕಿಡಿ ಕಾರಿದ್ದಾರೆ.
ಹೌದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಭಾರತೀಯ ಜನತಾ ಪಕ್ಷಕ್ಕೆ ಬಂದಿದ್ದು, ಈ ಸಂಬಂಧ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಬೆಂಬಲಿತ ಲಿಂಗಾಯತ ನಾಯಕರು ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ಹೊರ ಹಾಕಿದರು. ನಮ್ಮ ಸಮುದಾಯಕ್ಕೆ ಜಗದೀಶ್ ಶೆಟ್ಟರ್ ಮೋಸ ಮಾಡಿ ಹೋಗಿದ್ದಾರೆ ಎಂದು ಲಿಂಗಾಯತ ಮುಖಂಡ ಮೋಹನ್ ಲಿಂಬಿಕಾಯಿ ಆರೋಪಿಸಿದರು.

ಇಲ್ಲಿ ಒಬ್ಬ ನಿತೀಶ್ ಕುಮಾರ್ ಹುಟ್ಟಿದ್ದಾರೆ
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಯಾಕೆ ಬಿಜೆಪಿಗೆ ಹೋದರೂ ಎಂಬುದೇ ನಿಗೂಢವಾಗಿದೆ. ಇಂತವರಿಂದ ಯುವಕರಿಗೆ ಏನೂ ಸಂದೇಶ ಹೋಗತ್ತದೆ. ಜಗದೀಶ್ ಶೆಟ್ಟರ್ ಬಿಜೆಪಿ ಮರು ಸೇರ್ಪಡೆಯಿಂದ ನಮ್ಮ ಸಮಾಜಕ್ಕೆ ಅನ್ಯಾಯ ಆಗಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಒಬ್ಬ ನಿತೀಶ್ ಕುಮಾರ್ ಹುಟ್ಟಿದ್ದಾರೆ ಎಂದು ಪಕ್ಷಾಂತರ ಪ್ರಸ್ತಾಪಿಸಿ ಅವರು ವ್ಯಂಗ್ಯವಾಡಿದರು.
ನಾವ ಬಿಹಾರಕ್ಕೆ ಹೋಗೋದು ಬೇಡಾ, ಜಗದೀಶ್ ಶೆಟ್ಟರ್ ಮತ್ತೊಬ್ಬ ನಿತೀಶ್ ಕುಮಾರ್ ಇಲ್ಲಿಯೇ ಹುಟ್ಟಿದ್ದಾರೆ. ಸ್ವಾರ್ಥಕ್ಕಾಗಿ ಇವತ್ತು ಇಲ್ಲೆ ನಾಳೆ ಮತ್ತೊಂದು ಕಡೆ ಅನ್ನೋದಕ್ಕೆ ದೇಶದಲ್ಲಿ ಜಗದೀಶ್ ಶೆಟ್ಟರ್ ಉದಾಹರಣೆ. ನೀತಿಗೆಟ್ಟ ರಾಜಕಾರಣ ಮಾಡುವವರನ್ನು ಸಮಾಜ ಬೆಂಬಲಿಸುವುದಿಲ್ಲ ಎಂದು ಎಚ್ಚರಿಸಿದರು.
ಬಿಜೆಪಿ ವಿರುದ್ಧ ಬೈದಿದ್ದ ಶೆಟ್ಟರ್
ಸಮಾಜದ ನಂಬಿಕೆಯನ್ನು ಜಗದೀಶ್ ಶೆಟ್ಟರ್ ಕಳೆದುಕೊಂಡಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ವೇಳೆ ಅವರು ಬಿಜೆಪಿ ವಿರುದ್ಧ ಹಿಗ್ಗಾ ಮುಗ್ಗಾ ಮಾತನಾಡಿದ್ದರು. ಅಲ್ಲದೇ ಒಂದು ವಾರದ ಹಿಂದಷ್ಟೇ ಕೂಡಾ ಬಿಜೆಪಿ ವಿರುದ್ಧ ಮಾತಾಡಿದ್ದರು. ಆದರೆ ಇದೀಗ ಶೆಟ್ಟರ್ ಬಿಜೆಪಿಗೆ ಯಾಕೆ ಹೋದರು ಎಂಬುದೇ ನಿಗೂಢವಾಗಿದೆ ಎಂದು ವಿವರಿಸಿದರು.

ಮುಂಬರುವ ಲೋಕಸಭೆ ಟಿಕೆಟ್ 2024 ಲಿಂಗಾಯತರಿಗೆ ಕೊಡಬೇಕು. ಹುಬ್ಬಳ್ಳಿಯಲ್ಲಿ ಲಿಂಗಾಯತ ಮುಖಂಡರಿಂದ ಜಗದೀಶ್ ಶೆಟ್ಟರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಸೇರುತ್ತಿದ್ದಂತೆ ಕಾಂಗ್ರೆಸ್ ನಾಯಕರಲ್ಲಿ ತಳಮಳ ಉಂಟಾಗಿದೆ. ದಿಢೀರ್ ಬೆಳವಣಿಗೆಗೆ ಹಾಗೂ ಶೆಟ್ಟರ್ ವಿರುದ್ಧ ಕಾಂಗ್ರೆಸ್ ನಾಯಕರು ಹರಿಹಾಯ್ದಿದ್ದಾರೆ. ಶೆಟ್ಟರ್ಗೆ ಕಾಂಗ್ರೆಸ್ನಿಂದ ಧಾರವಾಡ ಟಿಕೆಟ್ ನೀಡುವುದಾಗಿ ಸ್ವತಃ ಸಿಎಂ ಹೇಳಿದ್ದರು. ಇದೀಗ ಅವರು ಬಿಜೆಪಿಗೆ ಮರಳಿದ್ದಾರೆ. ಎಲ್ಲರ ಚಿತ್ತ ಬಿಜೆಪಿಯು ಧಾರವಾಡದ ಟಿಕೆಟ್ ಅನ್ನು ಯಾರಿಗೆ ನೀಡುತ್ತದೆ ಎಂಬುದರತ್ತ ನೆಟ್ಟಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications