''Caste Census of Karnataka: ವರದಿ ವಿರುದ್ಧ ಕಾನೂನು ಹೋರಾಟ, ಜೂ. 8ಕ್ಕೆ ಜೈನ ಜನಣಗತಿ ವರದಿ ಸಲ್ಲಿಕೆ''
ಹುಬ್ಬಳ್ಳಿ, ಏಪ್ರಿಲ್ 17: ಕರ್ನಾಟಕ ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಅನುಷ್ಠಾನಕ್ಕೆ ತಯಾರಿ ಮಾಡಿಕೊಂಡಿದೆ. ಒಕ್ಕಲಿಗರು, ಲಿಂಗಾಯತರಂತೆ ಇದೀಗ ಜೈನ ಸಮುದಾಯದವರು ಜಾತಿ ಗಣತಿ ವರದಿ ವಿರೋಧಿಸುತ್ತಿದ್ದಾರೆ. ಈ ವರದಿ ಅವೈಜ್ಞಾನಿಕವಾಗಿದೆ. ಹೀಗಾಗಿ ಇದಕ್ಕೆ ನಮ್ಮ ಸಂಪೂರ್ಣ ವಿರೋಧವಿದೆ ಎಂದು ವರೂರಿನ ನವಗ್ರಹ ಕ್ಷೇತ್ರದ ಎ.ಜಿ.ಎಮ್ ಸಮೂಹ ಸಂಸ್ಥೆ ಅಧ್ಯಕ್ಷ ಹಾಗೂ ರಾಷ್ಟ್ರಸಂತ ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜ ಹೇಳಿದರು.
ಇಲ್ಲಿನ ವರೂರು ಕ್ಷೇತ್ರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯ ಸರ್ಕಾರ ಬಹಿರಂಪಡಿಸಲು ಮುಂದಾಗಿರುವ ಜಾತಿಗಣತಿ ವೈಜ್ಞಾನಿಕವಾಗಿದೆ. ಜೈನ ಸಮುದಾಯ ವರದಿ ವಿರೋಧಿಸಿಸುತ್ತದೆ. ಕರ್ನಾಟಕ ರಾಜ್ಯದಲ್ಲಿ ಜೈನ್ ಸಮುದಾಯವು ಕೇವಲ ಒಂದು ಲಕ್ಷ 65,565 ಜನಸಂಖ್ಯೆ ಹೊಂದಿದೆ ಎಂದು ಅಂಕಿ ಅಂಶಗಳಿಲ್ಲದೆ ತಿಳಿಸಲಾಗಿದೆ.

ರಾಜ್ಯ ಸರ್ಕಾರಕ್ಕೆ ಜೈನ ಜಸಂಖ್ಯಾ ವರದಿ ಸಲ್ಲಿಕೆ..
ಕರ್ನಾಟಕ ಸರ್ಕಾರ ಜಾರಿಗೊಳಿಸಲು ಹೊರಟಿರುವ ಜಾತಿಗಣತಿಯು ಅಸಮಂಜಸವಾಗಿದೆ. ಇದರಿಂದ ಜೈನ ಸಮಾಜಕ್ಕೆ ಅನ್ಯಾಯವಾಗಲಿದೆ. ಕಾರಣ ಸ್ವತಃ ನಾನೇ ಇಂದಿನಿಂದ ರಾಜ್ಯಾದ್ಯಂತ ಸಂಚರಿಸಿ ಜಾತಿ ಸಮೀಕ್ಷೆ ನಡೆಸಿ ಜೂನ್ 8 ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಹೇಳಿದರು.
ಸರ್ಕಾರ ಜಾತಿ ಗಣತಿ ಸಮೀಕ್ಷೆ ಮಾಡುವಾಗ ಇದುವರೆಗೂ ಯಾರು ನನ್ನನ್ನು ಸೇರಿ ಸಮಾಜದ ಯಾರೊಬ್ಬರನ್ನೂ ಭೇಟಿಯಾಗಿಲ್ಲ. ಈಗ ಏಕಾಏಕಿ ಜಾತಿ ಗಣತಿ ಜಾರಿಗೊಳಿಸಲಾಗುತ್ತಿದೆ. ಇದರಿಂದ ಸಮಾಜದ ಜನರಿಗೆ ಭಾರಿ ಅನ್ಯಾಯವಾಗಲಿದೆ. ಸಮಾಜದಿಂದ ಈಗ ನಡೆಸಲಾಗುವ ಸಮೀಕ್ಷಾ ವರದಿಯನ್ನು ಸರ್ಕಾರ ಪರಿಗಣಿಸಬೇಕು. ಒಂದು ವೇಳೆ ನಿರ್ಲಕ್ಷ್ಯಿಸಿದರೆ ಕಾನೂನು ಹೋರಾಟ ಮಾಡಲು ಸಿದ್ಧ ಎಂದು ಅವರು ಸರ್ಕಾರವನ್ನು ಎಚ್ಚರಿಸಿದರು.
ಜೈನ ಸಮುದಾಯ ಜನಸಂಖ್ಯೆ ಸಮೀಕ್ಷಾಗಿ ನಾವು ನಾಡಿನ ಪ್ರತಿ ಹಳ್ಳಿ ಗ್ರಾಮಗಳನ್ನು ಸಂಚರಿಸುತ್ತೆವೆ. ಮನೆ ಮನೆಗೆ ತೆರಳಿ ಸಮಾಜದ ಅಂಕಿ ಸಂಖ್ಯೆಯನ್ನು ಪಡೆಯುತ್ತೇವೆ. ರಾಜ್ಯದಲ್ಲಿರುವ ಜೈನ್ ಸಮುದಾಯದ ಧರ್ಮ ಗುರುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಸಂಚರಿಸಿ ಜಾತಿ ಗಣತಿ ಮಾಡಲಿದ್ದಾರೆ ಎಂದು ಅವರು ವಿವರಿಸಿದರು.
ಕಾನೂನು ಹೋರಾಟ, ಪ್ರತಿಭಟನೆಗೆ ನಿರ್ಧಾರ
ನಾನು ಸ್ವತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಐನಾಪುರ, ಹುಕ್ಕೇರಿ ಸೇರಿದಂತೆ ಎಲ್ಲ ತಾಲೂಕುಗಳನ್ನು ಸಂಚರಿಸಿ ಸಮೀಕಷೆ ನಡೆಸುತ್ತೇನೆ. ಮೇ 8ರಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಪ್ರತಿಭಟನೆ ಮತ್ತು ವರದಿ ವಿರುದ್ಧ ಕಾನೂನು ಹೋರಾಟ ಪ್ರಾರಂಭಿಸುತ್ತೇವೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ವರದಿಯಿಂದ (ಜಾತಿ ಗಣತಿ ವರದಿ) ಸಮಾಜದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜಾತಿ ಗಣತಿಯನ್ನು ಪರಿಗಣಿಸಬಾರದು. ಅವೈಜ್ಞಾನಿಕ ಗಣತಿ ವರದಿಯನ್ನು ರಾಜ್ಯದಲ್ಲಿ ಜಾರಿಗೆ ತರಬಾರದು ಎಂದು ಅವರು ಆಗ್ರಹಿಸಿದರು.
ಇದೇ ವೇಳೆ ರಾಜ್ಯ ಸಚಿವ ಜಮೀರ್ ಅಹ್ಮದ್ ಅವರು ಜೈನ ಸಮಾಜವು ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚಿಸಿದೆ ಎಂದು ವಿಧಾನಸೌಧದ ಸಭೆಯಲ್ಲಿ ಹೇಳಿದ್ದಾರೆ. ಅವರ ಹೇಳಿಕೆ ಸ್ವಾಗತಾರ್ಹವಾದದ್ದು. ಗಣತಿ ವರದಿ ಜಾರಿಗೆ ಮುಂದಾಗಿರುವ ಮುಖ್ಯಮಂತ್ರಿಗಳು ರಾಜ್ಯ ಸಚಿವ ಹೇಳಿಕೆ ಪರಿಗಣಿಸುವಂತೆ ಅವರು ಆಗ್ರಹಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications