Tirupati Laddu Row: ಪಾವಿತ್ರ್ಯಕ್ಕೆ ಧಕ್ಕೆ ತಂದವರಿಗೆ ಕ್ಷಮಾಪಣೆ ಇಲ್ಲ, ಕೆಟ್ಟ ರಾಜಕೀಯ ಬೇಡ: ಜೈನ ಮುನಿ ಗಣನಂದಿ ಮಹಾರಾಜ
ಹುಬ್ಬಳ್ಳಿ, ಸೆಪ್ಟಂಬರ್ 22: ದೇಶದೆಲ್ಲಡೆ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಬಳಕೆ ವಿಚಾರ ವರೂರಿನ ಪ್ರಸಿದ್ಧ ಜೈನ್ ಮಂದಿರದ ಜೈನ್ ಮುನಿ ಗಣನಂದಿ ಮಹಾರಾಜರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾಡುವಿನಲ್ಲಿ ದನದ ಮಾಂಸ ಬೆರಿಸಿರುವವರ ಮೇಲೆ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದರು, ತಿರುಪತಿಯಲ್ಲಿ ಲಾಡುವಿನಲ್ಲಿ ಮಾಂಸ ಮಿಶ್ರಣ ಕುರಿತ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಲಾಡುವಿನಲ್ಲಿ ಏನಾದರೂ ಮಾಂಸ, ಚರ್ಬಿ ಬೇರೆಕೆ ಮಾಡಿದ್ದರೆ ಖಂಡಿತವಾಗಿಯೂ ಶಿಕ್ಷೆ ಆಗಬೇಕು. ಕಾನೂನು ಪ್ರಕಾರ ದಂಡ ಹಾಕಬೇಕು.

ತಿರುಮಲ ದೇವಸ್ಥಾನ ಒಂದು ಒಳ್ಳೆಯ ದೇವಸ್ಥಾನ ಇಂತಹ ಪವಿತ್ರವಾದ ಸ್ಥಳದಲ್ಲಿ ಈ ರೀತಿಯಾಗಿ ಮಾಡುವುದು ಸರಿಯಲ್ಲ. ಭಕ್ತರಿಗೆ ಹಂಚುವ ಲಾಡುವಿನಲ್ಲಿ ಮಾಂಸದ ಚರ್ಬಿ ಹಾಗೂ ಹಂದಿ ಬಿಸಿ ಮಾಂಸ ಬೆರೆಕೆ ಸರಿಯಲ್ಲ. ಈ ರೀತಿಯಲ್ಲಿ ಮಾಡುವವರ ವಿರುದ್ಧ ಯಾವುದೇ ರೀತಿಯ ಕ್ಷಮಾಪಣೆಯೇ ಇಲ್ಲ ಎಂದು ಹೇಳಿದರು. ಕಾನೂನಿನ ಅನ್ವಯ ಕಠಿಣ ಕ್ರಮ ಆಗಲಿ ಎಂದು ನಾವು ಕೂಡ ಮುಂದೆ ಹೋರಾಟ ನಡೆಸುತ್ತೇವೆ. ದೇವಾಲಯಕ್ಕೆ ಸಂಬಂಧಿಸಿದಂತೆ ಆರ್ಥಿಕ ಸಮೃದ್ಧಿ ಇದ್ದರೂ ಸಹ ಯಾಕೆ ಹೀಗೆಲ್ಲ ಮಾಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಯಡಿಯೂರಪ್ಪ, ಸಿದ್ದರಾಮಯ್ಯ ಮೇಲಿನ ಆರೋಪ ಸರಿಯಲ್ಲ
ಇನ್ನೂ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಆರೋಪ ಸರಿಯಲ್ಲ. ಹೊಲಸು ರಾಜಕೀಯ ಮಾಡಬಾರದು ಎಂದು ಅವರು ತಿಳಿ ಹೇಳಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಮುಡಾ ಹಗರಣದ ಆರೋಪ ಮಾಡುವುದು ಸರಿಯಲ್ಲ. ಅದೇ ರೀತಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲಿನ ಆರೋಪಗಳು ಸರಿಯಲ್ಲ. ಇವರು ಸಾಕಷ್ಟು ಕೆಲಸ ಮಾಡಿದ್ದಾರೆ.
ಇಷ್ಟ ವರ್ಷಗಳ ಕಾಲ ಹೋರಾಟ ಮಾಡಿದ್ದಾರೆ.
ಅವರು ಮುಪ್ಪಿನ ಕಾಲದಲ್ಲಿದ್ದಾರೆ. ಇಂತಹ ಗಳಿಗೆಯಲ್ಲಿ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಇದೊಂದು ನಿಜಕ್ಕೂ ಬೇಸರದ ಸಂಗತಿ 70,80 ವಯಸ್ಸಿನವರ ಮೇಲೆ ಇಲ್ಲಸಲ್ಲದ ಆರೋಪ ಸರಿಯಲ್ಲ. ರಾಜಕೀಯ ಇದೆ ಆದರೆ ಹೊಲಸು ರಾಜಕಾರಣ ಮಾಡಬಾರದು ಎಂದು ಅವರು ಪುನರುಚ್ಚರಿಸಿದರು.
ವರೂರಲ್ಲಿ ಮಹಾಮಸ್ತಕಾಭಿಷೇಕ ವೆಬ್ ಸೈಟ್ ಸಿದ್ಧ
ವರೂರಿನ ದಿಗಂಬರ ಜೈನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮುಂದಿನ ವರ್ಷ ಜನವರಿ 15 ರಿಂದ 26ರ ರವರೆಗೆ ನಡೆಯಲಿರುವ ಪಾರ್ಶ್ವನಾಥ ಭಗವಾನ್ ರ ಮಹಾಮಸ್ತಕಾಭಿಷೇಕಕ್ಕೆ ಬರುವವರ ಅನುಕೂಲಕ್ಕಾಗಿ ವೆಬ್ ಸೈಟ್ ಸಿದ್ಧಪಡಿಸಲಾಗಿದೆ ಎಂದು ಗುಣಧರನಂದಿ ಮಹಾರಾಜರು ಇದೇ ವೇಳೆ ತಿಳಿಸಿದರು.
ಭಕ್ತರಿಗಾಗಿ https://mahamasthakabhisheka2025.agmrcet.ac.in ವೆಬ್ಸೈಟ್ ಸಿದ್ಧಪಡಿಸಲಾಗಿದೆ. ಕಾರ್ಯಕ್ರಮ ಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಮಾಡಿರುವ ವ್ಯವಸ್ಥೆಯನ್ನು ಇಲ್ಲಿ ಅಪ್ಲೋಡ್ ಮಾಡಲಾಗುತ್ತದೆ.
ಮಹಾಮಸ್ತಕಾಭುಷೇಕ ಅಂತಾರಾರಾಷ್ಟ್ರೀಯ ಕಾರ್ಯಕ್ರಮವಾಗಿದೆ. ಇದರಲ್ಲಿ ಜೈನ ಸಾಹಿತ್ಯ ಸಮ್ಮೇಳನ, ಸಂಗೀತ ಕಾರ್ಯಕ್ರಮ, ಪಂಚ ಕಲ್ಯಾಣ ಪ್ರತಿಷ್ಠಾ ಮಹೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಲಕ್ಷಾಂತರ ಜನಬರುವ ನಿರೀಕ್ಷೆ ಇದೆ ಎಂದು ಹೇಳಿದರು.
ಬಾಕಲರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆ. ಈ ಬಗ್ಗೆ ಅರುವು ಮೂಡಿಸುವ ಉದ್ದೇಶದಿಂದ ಶೀಘ್ರದಲ್ಲಿ ವೈದ್ಯರಿಂದ ವೆಬಿನಾರ್ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
-
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು












Click it and Unblock the Notifications