ಸೌಜನ್ಯ ಕೇಸ್ನಲ್ಲಿ ನ್ಯಾಯ ಸಿಗಲಿ, ಆದ್ರೆ ವಿರೇಂದ್ರ ಹೆಗ್ಗಡೆ ವಿರುದ್ಧಅಪಪ್ರಚಾರ ಸಹಿಸಲ್ಲ-ಗುಣಧರನಂದಿ ಸ್ವಾಮೀಜಿ
ಹುಬ್ಬಳ್ಳಿ, ಆಗಸ್ಟ್ 02: ಸೌಜನ್ಯ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಆಗಬೇಕು. ಆದರೆ ಇಂತಹ ಪ್ರಕರಣದ ಹೆಸರಲ್ಲಿ ಸಮಾಜ ಸೇವಕರ ಮಾನಹಾನಿಯಾಗಬಾರದು ಎಂದು ವರೂರು ನವಗೃಹ ತೀರ್ಥ ಕ್ಷೇತ್ರದ ಜೈನ ಮುನಿ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಶಾಂತಿಯ ತೋಟ. ಆದರೆ ಇಂತಹ ರಾಜ್ಯದಲ್ಲಿ ಹಿಂಸಾ ಕೃತ್ಯ ನಡೆಯಬಾರದು. ಅಹಿಂಸಾ ತತ್ವದಿಂದ ನಮ್ಮ ದೇಶ ಸ್ವಾತಂತ್ರ್ಯಗೊಂಡಿದೆ. ಕಳೆದ ಕೆಲ ವರ್ಷಗಳ ಹಿಂದೆ ಒಂದು ದುರ್ಘಟನೆ ನಡದಿದೆ. ಸೌಜನ್ಯ ಕೊಲೆ ಪ್ರಕರಣ ನಮ್ಮ ಮನಸ್ಸಿಗೆ ಬಹಳ ನೋವಾಗಿದೆ. ಯಾರೂ ಕೊಲೆ ಮಾಡಬಾರದು. ಯಾರು ಮಾಡಿದ್ದಾರೆ, ಅವರಿಗೆ ಶಿಕ್ಷೆ ಆಗಬೇಕು ಆದರೆ ಇಂತಹ ಪ್ರಕರಣದ ಹೆಸರಲ್ಲಿ ಸಮಾಜ ಸೇವಕರ ಮಾನಹಾನಿಯಾಗಬಾರದು ಎಂದರು.

ಸಮಾಜದಲ್ಲಿ ಕೊಲೆ ಅಪರಾಧ ನಡೆಯಬಾರದು. ಪ್ರಕರಣದಲ್ಲಿ ಭಾಗಿಯಾದವರ ಮನಪರಿವರ್ತನೆ ಆಗಬೇಕು. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆದರೆ ಇದನ್ನು ಇಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಯಾರ ಮಾತಾಡಿದ್ರೂ ನಾನು ಸಹಿಸಲ್ಲ. ಅವರ ಅಪರಾಧಿ ಇದ್ದರೆ ಅವರಿಗೆ ಜೈಲಾಗಲಿ. ಅವರು ಅಪರಾಧಿ ಎಂದು ಯಾರೂ ನಿರ್ಧಾರ ಮಾಡೋಕೆ ಸಾಧ್ಯ ಇಲ್ಲ. ಅದಕ್ಕೆ ಆದರದೇ ಆದ ತನಿಖೆ ಇದೆ. ನಮಗೆ ಗೃಹ ಸಚಿವರು ಪೊಲೀಸರು ಮೇಲೆ ನಂಬಿಕೆ ಇದೆ ಎಂದರು.
ಮಾತು ಮುಂದುವರಿಸಿದ ಗುಣಧರನಂದಿ ಸ್ವಾಮೀಜಿ ಒಳ್ಳೆಯ ಆಡಳಿತ ನೀಡಿದ ಸಿದ್ದರಾಮಯ್ಯ ಇದ್ದಾರೆ. ಅವರ ಮೇಲೆ ನಂಬಿಕೆ ಇದೆ. ಸೌಜನ್ಯಗೆ ನ್ಯಾಯ ಸಿಗಬೇಕು, ಆದರೆ ಮುಖವಾಡ ಹೊತ್ತು ಧರ್ಮಾಧಿಕಾರಿಗಳ ಬಗ್ಗೆ ಅಪಪ್ರಚಾರ ಮಾಡಬಾರದು ಎಂದು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಎಲ್ಲ ಧರ್ಮದವರು ಹೋಗುತ್ತಾರೆ. ಅನ್ನ ದಾಸೋಹ ಮಾಡಿದ ಮಠದ ಬಗ್ಗೆ ಅಪಪ್ರಚಾರ ಸರಿ ಅಲ್ಲ. ಪದೇ ಪದೇ ಅಪಪ್ರಚಾರ ಮಾಡಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ. ದೇಹದ ನೋವಿಗಿಂತ ಮನಸಿಗೆ ಆಗುವ ನೋವು ಹೆಚ್ಚು ನೋವು ಕೊಡುತ್ತದೆ. ಆಧಾರ ರಹಿತವಾಗಿ ಟಾರ್ಗೆಟ್ ಮಾಡೋದು ಸರಿ ಅಲ್ಲ ಎಂದು ಹೇಳಿದರು.
ಪದೇ ಪದೇ ಟಾರ್ಗೆಟ್ ಮಾಡೋದು ಕೂಡಾ ಮಾನಸಿಕ ಹಿಂಸೆ. ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ, ಅಪಪ್ರಚಾರ ಆಗಬಾರದು. ನಾನು ವಿರೇಂದ್ರ ಹೆಗ್ಗಡೆ ಜೊತೆ ಮಾತಾಡಿದ್ದೇನೆ. ಅವರು ನನಗೆ ಪದೇ ಪದೇ ಟಾರ್ಚರ್ ಕೊಡುತ್ತಿದ್ದಾರೆ ಎಂದಿದ್ದಾರೆ. ಸುಮ್ಮನೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಗುಣಧರನಂದಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications