ಸೌಜನ್ಯ ಕೇಸ್ನಲ್ಲಿ ನ್ಯಾಯ ಸಿಗಲಿ, ಆದ್ರೆ ವಿರೇಂದ್ರ ಹೆಗ್ಗಡೆ ವಿರುದ್ಧಅಪಪ್ರಚಾರ ಸಹಿಸಲ್ಲ-ಗುಣಧರನಂದಿ ಸ್ವಾಮೀಜಿ
ಹುಬ್ಬಳ್ಳಿ, ಆಗಸ್ಟ್ 02: ಸೌಜನ್ಯ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಆಗಬೇಕು. ಆದರೆ ಇಂತಹ ಪ್ರಕರಣದ ಹೆಸರಲ್ಲಿ ಸಮಾಜ ಸೇವಕರ ಮಾನಹಾನಿಯಾಗಬಾರದು ಎಂದು ವರೂರು ನವಗೃಹ ತೀರ್ಥ ಕ್ಷೇತ್ರದ ಜೈನ ಮುನಿ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಶಾಂತಿಯ ತೋಟ. ಆದರೆ ಇಂತಹ ರಾಜ್ಯದಲ್ಲಿ ಹಿಂಸಾ ಕೃತ್ಯ ನಡೆಯಬಾರದು. ಅಹಿಂಸಾ ತತ್ವದಿಂದ ನಮ್ಮ ದೇಶ ಸ್ವಾತಂತ್ರ್ಯಗೊಂಡಿದೆ. ಕಳೆದ ಕೆಲ ವರ್ಷಗಳ ಹಿಂದೆ ಒಂದು ದುರ್ಘಟನೆ ನಡದಿದೆ. ಸೌಜನ್ಯ ಕೊಲೆ ಪ್ರಕರಣ ನಮ್ಮ ಮನಸ್ಸಿಗೆ ಬಹಳ ನೋವಾಗಿದೆ. ಯಾರೂ ಕೊಲೆ ಮಾಡಬಾರದು. ಯಾರು ಮಾಡಿದ್ದಾರೆ, ಅವರಿಗೆ ಶಿಕ್ಷೆ ಆಗಬೇಕು ಆದರೆ ಇಂತಹ ಪ್ರಕರಣದ ಹೆಸರಲ್ಲಿ ಸಮಾಜ ಸೇವಕರ ಮಾನಹಾನಿಯಾಗಬಾರದು ಎಂದರು.

ಸಮಾಜದಲ್ಲಿ ಕೊಲೆ ಅಪರಾಧ ನಡೆಯಬಾರದು. ಪ್ರಕರಣದಲ್ಲಿ ಭಾಗಿಯಾದವರ ಮನಪರಿವರ್ತನೆ ಆಗಬೇಕು. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆದರೆ ಇದನ್ನು ಇಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಯಾರ ಮಾತಾಡಿದ್ರೂ ನಾನು ಸಹಿಸಲ್ಲ. ಅವರ ಅಪರಾಧಿ ಇದ್ದರೆ ಅವರಿಗೆ ಜೈಲಾಗಲಿ. ಅವರು ಅಪರಾಧಿ ಎಂದು ಯಾರೂ ನಿರ್ಧಾರ ಮಾಡೋಕೆ ಸಾಧ್ಯ ಇಲ್ಲ. ಅದಕ್ಕೆ ಆದರದೇ ಆದ ತನಿಖೆ ಇದೆ. ನಮಗೆ ಗೃಹ ಸಚಿವರು ಪೊಲೀಸರು ಮೇಲೆ ನಂಬಿಕೆ ಇದೆ ಎಂದರು.
ಮಾತು ಮುಂದುವರಿಸಿದ ಗುಣಧರನಂದಿ ಸ್ವಾಮೀಜಿ ಒಳ್ಳೆಯ ಆಡಳಿತ ನೀಡಿದ ಸಿದ್ದರಾಮಯ್ಯ ಇದ್ದಾರೆ. ಅವರ ಮೇಲೆ ನಂಬಿಕೆ ಇದೆ. ಸೌಜನ್ಯಗೆ ನ್ಯಾಯ ಸಿಗಬೇಕು, ಆದರೆ ಮುಖವಾಡ ಹೊತ್ತು ಧರ್ಮಾಧಿಕಾರಿಗಳ ಬಗ್ಗೆ ಅಪಪ್ರಚಾರ ಮಾಡಬಾರದು ಎಂದು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಎಲ್ಲ ಧರ್ಮದವರು ಹೋಗುತ್ತಾರೆ. ಅನ್ನ ದಾಸೋಹ ಮಾಡಿದ ಮಠದ ಬಗ್ಗೆ ಅಪಪ್ರಚಾರ ಸರಿ ಅಲ್ಲ. ಪದೇ ಪದೇ ಅಪಪ್ರಚಾರ ಮಾಡಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ. ದೇಹದ ನೋವಿಗಿಂತ ಮನಸಿಗೆ ಆಗುವ ನೋವು ಹೆಚ್ಚು ನೋವು ಕೊಡುತ್ತದೆ. ಆಧಾರ ರಹಿತವಾಗಿ ಟಾರ್ಗೆಟ್ ಮಾಡೋದು ಸರಿ ಅಲ್ಲ ಎಂದು ಹೇಳಿದರು.
ಪದೇ ಪದೇ ಟಾರ್ಗೆಟ್ ಮಾಡೋದು ಕೂಡಾ ಮಾನಸಿಕ ಹಿಂಸೆ. ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ, ಅಪಪ್ರಚಾರ ಆಗಬಾರದು. ನಾನು ವಿರೇಂದ್ರ ಹೆಗ್ಗಡೆ ಜೊತೆ ಮಾತಾಡಿದ್ದೇನೆ. ಅವರು ನನಗೆ ಪದೇ ಪದೇ ಟಾರ್ಚರ್ ಕೊಡುತ್ತಿದ್ದಾರೆ ಎಂದಿದ್ದಾರೆ. ಸುಮ್ಮನೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಗುಣಧರನಂದಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications