ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಜಯಮೃತ್ಯುಂಜಯ ಶ್ರೀ ಆಗ್ರಹ
ಹುಬ್ಬಳ್ಳಿ, ಅಕ್ಟೋಬರ್ 06: ರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸರಿಯಾದ ಹುದ್ದೆ ಕೊಡುತ್ತಿಲ್ಲ. ಲಿಂಗಾಯತ ಅಧಿಕಾರಿಗಳನ್ನು ನಿರ್ಲಕ್ಷ್ಯ ಮಾಡುವ ಬಗ್ಗೆ ಶಾಮನೂರು ಶಿವಶಂಕರಪ್ಪನವರ ಹೇಳಿದ್ದು ಸರಿ ಇದೆ. ಕೆಲ ಲಿಂಗಾಯುತ ಅಧಿಕಾರಿಗಳು ತಮ್ಮ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಮಾತನಾಡಿ ಸರಿ ಮಾಡಲಿ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರನ್ನು, ಲಿಂಗಾಯತ ಅಧಿಕಾರಿಗಳಿಗಳನ್ನು ಕಡೆಗಣಿಸಲಾಗುತಿದೆ ಎಂಬ ಮಾತು ಕೇಳಿ ಬಂದಿದೆ. ಈ ಕುರಿತು ಶಾಮನೂರು ಶಿವಶಂಕರಪ್ಪನವರು ಹೇಳಿದರಲ್ಲಿ ಮಾಹಿತಿಯಿದ್ದು, ವೀರಶೈವ ಮಹಾಸಭಾ ರಾಷ್ಟ್ರೀಯ ಕಾರ್ಯಾಧ್ಯಕ್ಷರು ಹಾಗೂ ಹಿರಿಯರಾಗಿರುವ ಕಾರಣ ಲಿಂಗಾಯತ ಅಧಿಕಾರಿಗಳು ಅವರಿಗೆ ಹೇಳಿರಬಹುದು ಎಂದರು.

ನನ್ನ ಬಳಿಯೂ ಕೇಲ ಲಿಂಗಾಯತ ಅಧಿಕಾರಿಗಳು ಹೇಳಿದರು. ಆದರೆ ನಾನು ಸಮಾಜದ ಗುರುಗಳು ಆಗಿದ್ದರಿಂದ ಏನು ಮಾತಾಡಲಿಲ್ಲ. ಆಡಳಿತಾತ್ಮಕ ವಿಷಯದಲ್ಲಿ ಕೈ ಹಾಕಬಾರದು ಎನ್ನುವ ಕಾರಣಕ್ಕೆ ಏನು ಮಾತಾಡಿಲ್ಲ. ಹೀಗಾಗಿ ಕೂಡಲೇ ಮುಖ್ಯಮಂತ್ರಿಗಳು ಶಾಮನೂರು ಶಿವಶಂಕರಪ್ಪನವರ ಜೊತೆಗೆ ಮಾತನಾಡಬೇಕು. ಯಾವುದೇ ತಪ್ಪು ಸಂದೇಶ ಹೋಗಬಾರದು ಎಂದು ಹೇಳಿದರು.
ಲಿಂಗಾಯತ ಸಮಾಜದ ಅಧಿಕಾರಿಗಳು ದಕ್ಷ ಹಾಗೂ ಸಮರ್ಥರಿದ್ದಾರೆ. ಅಂತಹ ಅಧಿಕಾರಿಗಳಿಗೆ ಸೂಕ್ತ ಸ್ಥಾನ ಮಾನ ಕೊಡಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.
ಅಕ್ಟೋಬರ್ 13ರಂದು ಪಂಚಮಸಾಲಿ ಮೀಸಲಾತಿ ಎರಡನೇ ಹಂತದ ಸಮಾವೇಶ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಆಗ್ರಹಿಸಿ ಅಕ್ಟೋಬರ್ 13 ರಂದು ಎರಡನೇ ಹಂತದ ಸಮಾವೇಶವನ್ನು ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಈಗಾಗಲೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ ಯಾತ್ರೆ ಆರಂಭವಾಗಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಈಗ ಧಾರವಾಡ ಜಿಲ್ಲೆಯ ಸಮಾವೇಶ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಮೈದಾನದಲ್ಲಿ ನಡೆಸಲಾಗುತ್ತದೆ. ಲಿಂಗಾಯತ ಉಪ ಪಂಗಡಗಳಿಗೆ ಕೇಂದ್ರದಿಂದ ಓಬಿಸಿ ದರ್ಜೆ ಕೊಡಲು ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಇಟ್ಟು ಹೋರಾಟ ಆರಂಭ ಮಾಡಲಾಗುತ್ತದೆ ಎಂದರು.
ಸಮಾವೇಶ ನಡೆಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆಗೆ ಸಲ್ಲಿಸಲಿದ್ದು, ಈ ಮೂಲಕ ವಿನೂತನ ಹೋರಾಟ ನಡೆಸಲಾಗುತ್ತಿದೆ ಎಂದ ಅವರು, 2A ಮೀಸಲಾತಿ, ಲಿಂಗಾಯತ ಉಪ ಪಂಗಡಗಳಿಗೆ ಕೇಂದ್ರದಿಂದ ಓಬಿಸಿ ದರ್ಜೆ ನೀಡಲು ಮೂರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಕಳೆದ ಸರ್ಕಾರ ಕೊನೆಯ ಗಳಿಗೆಯಲ್ಲಿ ಮೀಸಲಾತಿ ಘೋಷಣೆ ಮಾಡಲಾಯಿತು. ಚುನಾವಣೆ ಘೋಷಣೆ, ನೀತಿ ಸಂಹಿತೆಯಿಂದ ಮೀಸಲಾತಿ ಜಾರಿ ಆಗಲಿಲ್ಲ. ಕಾನೂನು ತೊಡಕು ಆಯಿತು. ಈಗಿನ ಸರ್ಕಾರಕ್ಕೆ ಸಹ ನಾವು ಕೇಳುತ್ತಿದ್ದೇವೆ. ಹೋರಾಟದ ಮೂಲಕ ನಮ್ಮ ಮೀಸಲಾತಿ ಪಡದೇ ತಿರುತ್ತೇವೆ ಸರ್ಕಾರ ನಮ್ಮನ್ನು ಮಾತುಕತೆಗೆ ಕರೆಯಬೇಕು ಎಂದು ಒತ್ತಾಯ ಮಾಡಿದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications