ಕಾರ ಹುಣ್ಣಿಮೆ ಸಂಭ್ರಮದಲ್ಲಿ ಮಿಂದೆದ್ದ ಉತ್ತರ ಕರ್ನಾಟಕ
ಹುಬ್ಬಳ್ಳಿ, ಜೂನ್ 9: ಉತ್ತರ ಕರ್ನಾಟಕದ ಜನಪ್ರಿಯ ಹಬ್ಬಗಳಲ್ಲಿ ಒಂದಾಗಿರುವ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಸೊಗಡಿನ ಕಾರ ಹುಣ್ಣಿಮೆಯನ್ನು ಶುಕ್ರವಾರ ಹುಬ್ಬಳ್ಳಿಯ ಜಂಗ್ಲಿಪೇಟೆಯಲ್ಲಿ ರೈತರು ಸಂಭ್ರಮದಿಂದ ಆಚರಿಸಿದರು.
ಹಬ್ಬದ ಅಂಗವಾಗಿ ನಗರದ ವಿವಿಧೆಡೆ ಎತ್ತುಗಳ ಕರಿ ಹರಿಯುವ ಮೂಲಕ ಕಡು ಬೇಸಿಗೆ ಕಳೆದು ಮುಂಗಾರು ಸ್ವಾಗತಿಸಲು ಹಬ್ಬ ಸಾಕ್ಷಿಯಾಯಿತು. ರೈತರು ತಮ್ಮ ಎತ್ತು ಹಾಗೂ ಹೋರಿಗಳ ಮೈ ತೊಳೆದು, ಬಣ್ಣ ಹಚ್ಚಿ ಶೃಂಗರಿಸಿ ಸಂಜೆ ಹಮ್ಮಿಕೊಂಡ ಕರಿ ಹರಿಯುವ ದೃಶ್ಯ ರೋಮಾಂಚನಗೊಳಿಸಿತು.

ವರ್ಷವಿಡೀ ದುಡಿಯುವ ಎತ್ತುಗಳಿಗೆ ಮನರಂಜನಾ ಕೂಟವಾಗಿರುವ ಕಾರ ಹುಣ್ಣಿಮೆ ನಿಮಿತ್ತ ವಿಶೇಷ ಅಲಂಕಾರ ಹಾಗೂ ಭಕ್ಷ್ಯಗಳನ್ನು ಉಣಿಸುವ ಸಂಪ್ರದಾಯ ಉತ್ತರ ಕರ್ನಾಟಕದಾದ್ಯಂತ ರೂಢಿಯಲ್ಲಿದೆ.[39 ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೊಕ್ ಸುದ್ದಿಗೆ ಡಿಕೆಶಿ ಹೇಳಿದ್ದೇನು]

ಇದರ ಭಾಗವಾಗಿ ಹುಬ್ಬಳ್ಳಿಯ ಜಂಗ್ಲಿಪೇಟೆ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಎತ್ತುಗಳ ಕರಿ ಹರಿಯುವ ವಿಶಿಷ್ಠ ಆಚರಣೆಗೆ ನೂರಾರು ರೈತರು ಹಾಗೂ ಯುವಕರು ಸಾಕ್ಷಿಯಾದರು.

ಶೃಂಗರಿಸಿ ಕರೆತಂದಿದ್ದ ತಮ್ಮ ಎತ್ತುಗಳನ್ನು ಸಾಲು ಸಾಲಾಗಿ ಓಡಿಸುತ್ತ ಸಂಭ್ರಮಪಟ್ಟ ರೈತರು ನಂತರ ಮನೆಗೆ ಬಂದಾಗ ಅವುಗಳಿಗೆ ಆರತಿ ಎತ್ತಿ ಖುಷಿ ಪಟ್ಟರು.[ಹುಬ್ಬಳ್ಳಿಯಲ್ಲಿ ಬೆಳೆ ಹಾನಿಗೆ ಸರ್ಕಾರ ನೀಡಿದ ಪರಿಹಾರ ಬರೋಬ್ಬರಿ 1 ರೂ.!]

ಇದಕ್ಕೂ ಮೊದಲು ಮಹಿಳೆಯರು ಕಾರ ಹುಣ್ಣಿಮೆ ನಿಮಿತ್ತ ವಿಶೇಷ ಪೂಜೆ ನೆರವೇರಿಸಿದರು. ಅಲ್ಲದೆ ಸಮೀಪದ ಅರಳಿ ಮರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಂಗಾರನ್ನು ಬರಮಾಡಿಕೊಂಡರು. ಹಬ್ಬದ ಅಂಗವಾಗಿ ಮನೆಯಲ್ಲಿ ತಯಾರಿಸಿದ ವಿಶೇಷ ಸಿಹಿ ಖಾದ್ಯಗಳನ್ನು ಸವಿದು ಸಂಭ್ರಮ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications