ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕಾರಜೋಳ-ತಿಮ್ಮಾಪುರ ಜಟಾಪಟಿ
ಹುಬ್ಬಳ್ಳಿ, ಜುಲೈ 20 : ವಿಧಾನಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಮತ್ತು ಮುಧೋಳ ಶಾಸಕ ಗೋವಿಂದ ಕಾರಜೋಳ ಅವರು ಕೃತಿ ಬಿಡುಗಡೆ ಸಮಾರಂಭದಲ್ಲಿ ಒಬ್ಬರಿಗೊಬ್ಬರು ಮಾತಿನಲ್ಲಿ ಕಿತ್ತಾಡಿದ ಪ್ರಸಂಗ ನಡೆಯಿತು.
ಸವಿತಾ ಅಂಬೇಡ್ಕರ್ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ಹಾಗೂ ಶಿವಶರಣ ಮಾದಾರ ಚನ್ನಯ್ಯ ಮಹಾಮಂಡಳ ವತಿಯಿಂದ ನಗರದ ಸಾಂಸ್ಕೃತಿಕ ಭವನದಲ್ಲಿ ಜುಲೈ 19ರಂದು ಆಯೋಜಿಸಿದ್ದ 'ಮೈತ್ರಿ ಭಾವದ ಬದುಕು' ಕೃತಿ ಬಿಡುಗಡೆ ಸಮಾರಂಭ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ವೇದಿಕೆಯಾಗಿ ಬದಲಾಯಿತು.

ಮೊದಲು ಮಾತನಾಡಿದ ವಿಧಾನಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ, ದಲಿತರ ಮನೆಯಲ್ಲಿ ಊಟ ಮಾಡುವ ನಾಟಕವನ್ನು ನಿಲ್ಲಿಸಿ, ಬದಲಾಗಿ ಬಸವ ತತ್ವ ಆಚರಣೆಗೆ ತನ್ನಿ, ನಾವೂ ನಿಮ್ಮೊಂದಿಗೆ ಬರುತ್ತೇವೆ ಎಂದು ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಕುಟುಕಿದರು.
ತಮ್ಮ ಮಾತಿನ ಸರದಿ ಬಂದಾಗ ತಿಮ್ಮಾಪುರ ಅವರ ಮಾತಿಗೆ ತಿರುಗೇಟು ನೀಡಿದ ಮುಧೋಳ ಶಾಸಕ ಗೋವಿಂದ ಕಾರಜೋಳ, ಬಿಜೆಪಿಯವರು ದಲಿತರ ಮನೆಯಲ್ಲಿ ಊಟ ಮಾಡುತ್ತಿರುವುದು ಜನರಲ್ಲಿ ಸಾಮರಸ್ಯ ಮೂಡಲಿ ಎಂಬ ಕಾರಣಕ್ಕೆ ಹೊರತು ಬೇರೆ ಉದ್ದೇಶಕ್ಕಲ್ಲ ಎಂದು ಸ್ಪಷ್ಟಪಡಿಸಿದರು.
ಸ್ವಾತಂತ್ರ್ಯ ನಂತರದ 25 ವರ್ಷದವರೆಗೂ ಮೀಸಲಾತಿ ವಿಷಯದಲ್ಲಿ ಎಲ್ಲವೂ ಸರಿಯಾಗಿ ಇತ್ತು. ಆದರೆ, ನಂತರ ವೋಟಿನ ಆಸೆಗೆ ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ದಲಿತರಲ್ಲದವರನ್ನೂ ತಂದು ಈ ಪಟ್ಟಿಗೆ ಸೇರಿಸಿದರು. ಇದರಿಂದ ಮಾದಿಗರಿಗೆ ಅನ್ಯಾಯವಾಗಿದೆ ಎಂದು ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದರು.

ಸದಾಶಿವ ಆಯೋಗ ರಚಿಸಿದ್ದ ಕಾಂಗ್ರೆಸ್ ಸರ್ಕಾರ ಆಯೋಗಕ್ಕೆ ಬಿಡಿಗಾಸನ್ನೂ ಕೊಟ್ಟಿರಲಿಲ್ಲ. ನಂತರ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ 13 ಕೋಟಿ ಬಿಡುಗಡೆ ಮಾಡಿದ್ದರು ಎಂದು ಸ್ಮರಿಸಿದರು.
ಇದರಿಂದ ಕೆರಳಿದ ಆರ್.ಬಿ.ತಿಮ್ಮಾಪುರ ಮತ್ತೆ ಮೈಕ್ ಕಸಿದುಕೊಂಡು ಈ ಎಲ್ಲ ವಿಷಯಗಳ ಬಗ್ಗೆ ದಾಖಲೆ ಸಮೇತ ಚರ್ಚೆಗೆ ಬರುವುದಾಗಿ ಅವರು ಸವಾಲು ಹಾಕಿದರು.
ಇದಕ್ಕೆಲ್ಲಾ ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮೂಕ ಪ್ರೇಕ್ಷಕರಾಗಿದ್ದರು.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications