ಶಾಸಕ ಸ್ಥಾನ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಲು ಶಿರಸಿಗೆ ಹೊರಡಲು ಸಿದ್ಧರಾದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಏಪ್ರಿಲ್, 16: ಬಿಜೆಪಿ ಪಕ್ಷದಿಂದ ಟಿಕೆಟ್ ನೀಡದ ಕಾರಣ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಲು, ತಮ್ಮ ನಿವಾಸದಿಂದ ಶಿರಸಿಯತ್ತ ತೆರಳುತ್ತಿದ್ದಾರೆ.

ಈಗಾಗಲೇ ಧರ್ಮೇಂದ್ರ ಪ್ರಧಾನ್, ಪ್ರಲ್ಹಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ ಅವರು ಜಗದೀಶ್ ಶೆಟ್ಟರ್ ಮನ ಒಲಿಸುವ ಸಂಧಾನ ಸಭೆ ಕೂಡ ವಿಫಲವಾಯಿತು. ಟಿಕೆಟ್ ನೀಡದ ಕಾರಣ ಶೆಟ್ಟರ್ ಅವರು ಮನನೊಂದು ತಮ್ಮ ಶಾಸಕ ಸ್ಥಾನ ಹಾಗೂ ಬಿಜೆಪಿ ಪಕ್ಷಕ್ಕೆ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ರಾಜೀನಾಮೆ ನೀಡಲು ಶಿರಸಿಗೆ ಹೊರಟಿದ್ದಾರೆ.
6 ಕ್ಷೇತ್ರಗಳಲ್ಲಿ ಅಧಿಕೃತ ಅಭ್ಯರ್ಥಿಗಳ ಘೋಷಣೆ
ಇತ್ತೀಚೆಗಷ್ಟೇ ವರಿಷ್ಠರ ಬುಲಾವ್ ಮೇರೆಗೆ ನವದೆಹಲಿಗೆ ತೆರಳಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವತಃ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆ ಚರ್ಚಿಸಿದ್ದರು. ಆದರೂ ಕೂಡ ಎರಡನೇ ಪಟ್ಟಿಯಲ್ಲಿ ಅವರ ಹೆಸರು ಪ್ರಕಟಗೊಳ್ಳುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಕೇಸರಿ ಪಡೆಯ 6 ಕ್ಷೇತ್ರಗಳಲ್ಲಿ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ.
ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದ ಬಿಜೆಪಿ
ಇನ್ನು 1993ರಿಂದ ಈಚೆಗೆ ಕಮಲ ಪಾಳೆಯದ ಭದ್ರಕೋಟೆಯಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಮೂರನೇ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಚುನಾವಣಾ ರಾಜಕಾರಣದಿಂದ ದೂರ ಉಳಿಯುವ ವರಿಷ್ಠರ ಸಲಹೆ ಸೋಲಿಲ್ಲದ ಸರದಾರ ಶೆಟ್ಟರ್ಗೆ ನುಂಗಲಾರದ ತುತ್ತಾಗಿದ್ದು, ಅವರಿಗೆ ಟಿಕೆಟ್ ನೀಡುವುದೋ ಅಥವಾ ಈಗಾಗಲೇ ಮೌಖಿಕವಾಗಿ ತಿಳಿಸಿದಂತೆ ಹೊಸಬರಿಗೆ ಮಣೆ ಹಾಕುವುದೋ ಎನ್ನುವ ವಿಚಾರವೇ ಇದೀಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಶೆಟ್ಟರ್ ಬದಲಿಗೆ ಸೆಂಟ್ರಲ್ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್, ಡಾ.ಮಹೇಶ್ ನಾಲವಾಡ ಹೆಸರುಗಳು ಮುಂಚೂಣಿಯಲ್ಲಿವೆ. ಕಳೆದ ಚುನಾವಣೆಯಲ್ಲಿ ಇದೇ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ 50 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಈಗ ಬಿಜೆಪಿಯದಲ್ಲಿರುವ ಈ ಮೂವರ ಹೆಸರು ಮುಂಚೂಣಿಯಲ್ಲಿವೆ. ಅಲ್ಲದೇ ಸಂಘ ಪರಿವಾರದ ಹಿನ್ನೆಲೆಯ ಜಯತೀರ್ಥ ಕಟ್ಟಿ ಹೆಸರು ಕೂಡ ಅಂತಿಮ ಕ್ಷಣದಲ್ಲಿ ಸೇರ್ಪಡೆಯಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಈ ಕ್ಷೇತ್ರದಲ್ಲಿ 17 ಪಾಲಿಕೆ ಸದಸ್ಯರು ಬಿಜೆಪಿ ಪ್ರತಿನಿಧಿಸುತ್ತಿದ್ದು, (ಮೂವರು ಪಕ್ಷೇತರರು ಸೇರಿ) ಮೊದಲ ಬಾರಿ ಕ್ಷತ್ರೀಯ ಸಮಾಜದವರೂ ಇಲ್ಲಿನ ಟಿಕೆಟ್ ಹಿಂದುಳಿದವರಿಗೆ ನೀಡಬೇಕೆಂಬ ಬೇಡಿಕೆ ಮುನ್ನೆಲೆಗೆ ಬಂದಿದೆ. ಇಂದು ರಾತ್ರಿ ಅಥವಾ ನಾಳೆ ಅಂತಿಮ ಪಟ್ಟಿ ಬಿಡುಗಡೆಗೊಳ್ಳಲಿದೆ ಸಾಧ್ಯತೆ ಇದೆ.
ಏಕಾಂಗಿಯಾದ ಜಗದೀಶ್ ಶೆಟ್ಟರ್
ಶೆಟ್ಟರ್ ಅವರನ್ನು ಶಸ್ತ್ರ ತ್ಯಜಿಸುವಂತೆ ಮಾಡಲು ವ್ಯವಸ್ಥಿತ ಯತ್ನ ನಡೆದಿದೆಯೇ ಎಂಬುದು ಬಿಜೆಪಿ ಪಾಳೆಯದಿಂದಲೇ ಕೇಳಿ ಬರುತ್ತಿರುವ ಮಾತಾಗಿದೆ. ಅಲ್ಲದೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಶೆಟ್ಟರ್, ಈಶ್ವರಪ್ಪ ಸೇವೆ ಬೇರೆ ರಾಜ್ಯಗಳಿಗೆ ಬಳಸಿಕೊಳ್ಳಲಾಗುವುದು ಎನ್ನುವ ಮೂಲಕ ರಾಜ್ಯಪಾಲ ಹುದ್ದೆಯ ಮುನ್ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಒಂದು ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಟಿಕೆಟ್ ನಿರಾಕರಿಸಿದಲ್ಲಿ ಅವರು ಬಂಡಾಯ ಎದ್ದು, ಸ್ವತಂತ್ರವಾಗಿ ಕಣಕ್ಕಿಳಿದು ಸೆಡ್ಡು ಹೊಡೆಯುವರೋ ಅಥವಾ ಪಕ್ಷ ಹೇಳಿದವರನ್ನು ಬೆಂಬಲಿಸುತ್ತಾರೆಯೋ ಎಂಬುದನ್ನು ಕಾದುನೋಡಬೇಕಾಗಿದೆ.
ಅನೇಕ ಹಾಲಿ ಶಾಸಕರಿಗೆ ಕೋಕ್
ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದ್ದು, ಈ ಬಾರಿ ಶತಾಯಗತಾಯ ಮತ್ತೆ ಅಧಿಕಾರ ಬರಲು ಪಣ ತೊಟ್ಟಿರುವ ಬಿಜೆಪಿ ಬುಧವಾರ ತಡರಾತ್ರಿ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿ ಹೈಮಾಂಡ್ ಅನೇಕ ಹಾಲಿ ಶಾಸಕರಿಗೆ ಕೋಕ್ ಕೊಟ್ಟಿದ್ದು, ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದವರಿಗೆ ಸ್ಪರ್ಧೆಗೆ ಅವಕಾಶ ನೀಡಿದೆ.
ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ ಛಬ್ಬಿಗೆ ಬಿಜೆಪಿ ಮಣೆ ಹಾಕಿದ್ದು, ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಬಿಜೆಪಿ ನಾಯಕರು ಅವಕಾಶ ಕಲ್ಪಿಸಿದ್ದಾರೆ. ಈಗಾಗಲೇ ಹಾಲಿ ಶಾಸಕ ಸಿ.ಎಂ.ನಿಂಬಣ್ಣವರ ಅವರಿಗೆ ಟಿಕೆಟ್ ತಪ್ಪಿಸಿ ನಾಗರಾಜ ಛಬ್ಬಿಗೆ ಟಿಕೆಟ್ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications