Get Updates
Get notified of breaking news, exclusive insights, and must-see stories!

CID: ಅಂಜಲಿ‌ ಹತ್ಯೆ ಪ್ರಕರಣ ಸಿಐಡಿಗೆ ಹಸ್ತಾಂತರ: ಇಂದು ಇಲ್ಲ ನಾಳೆ ಸಿಐಡಿ ತಂಡ ಹುಬ್ಬಳ್ಳಿಗೆ ಆಗಮನ?

ಹುಬ್ಬಳ್ಳಿ, ಮೇ 21: ಹುಬ್ಬಳ್ಳಿಯಲ್ಲಿ ಮೇ 15ರಂದು ನಡೆದ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬಗ್ಗೆ ಖುದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮಾಹಿತಿ ನೀಡಿದ್ದಾರೆ. ಇಂದು ಇಲ್ಲವೇ ನಾಳೆ ಸಿಐಡಿ ತಂಡ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಲಿದ್ದಾರೆ.

ಮಂಗಳವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅವರು ಬೆಂಗಳೂರಿಗೆ ಆಗಮಿಸಿದರು. ನೆನ್ನೆ ಸೋಮವಾರ ಬೆಳಗ್ಗೆ ಅವರು ಹುಬ್ಬಳ್ಳಿಗೆ ಭೇಟಿ ನೀಡಿ ಕಾನೂನು ಸುವ್ಯವಸ್ಥೆ ಪರಿಶೀಲಿಸಿದರು. ತಿಂಗಳ ಅಂತರದಲ್ಲಿ ಕೊಲೆಯಾದ ನೇಹಾ ಹಾಗೂ ಅಂಜಲಿ ಅವರ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Karnataka Govt Today Will Hand Over Hubballi Anjali Murder Case to CID G Parameshwara reacts

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿ ಅವರು, ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಈ ಎರಡು ಕೊಲೆ‌ ಪ್ರಕರಣಗಳನ್ನು ಸಿಐಡಿಗೆ ವಹಿಸಲಾಗಿದೆ. ಸ್ಥಳೀಯ ಪೊಲೀಸರು ಒತ್ತಡಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಬರಬಹುದು. ಹೀಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದರು.

ತನಿಖಾ ಕಡತ, ವರದಿ ಹಸ್ತಾಂತರ

ಸಿಐಡಿ ಅಧಿಕಾರಿಗಳ ತಂಡ ಇವತ್ತು ಅಥವಾ ನಾಳೆ ಅಂಜಲಿ ಹತ್ಯೆ ಕುರಿತಂತೆ ಪೊಲೀಸರಿಂದ ತನಿಖಾ ವರದಿಗಳ ಕಡತವನ್ನು ಸ್ವೀಕರಿಸಲಿದ್ದಾರೆ. ಘಟನೆ ಕುರಿತು ಪೊಲೀಸರಿಂದ ಮಾಹಿತಿ ಪಡೆಯುವ ಜೊತೆಗೆ ಖುದ್ದು ಅಧಿಕಾರಿಗಳು ಹತ್ಯೆ ನಡೆದ ಅಂಜಲಿ ಮನೆಗೆ ಭೇಟಿ ಕೊಟ್ಟು ಪರಿಶೀಲಿಸುತ್ತಾರೆ. ಅಗತ್ಯ ಮಾಹಿತಿಗಳನ್ನು ಪೊಲೀಸರಿಂದ ಪಡೆದು ತನಿಖೆ ಮುಂದುವರೆಸಲಿದ್ದಾರೆ.

ಕಳೆದ ಭಾರಿ ಅಂಜಲಿ ಪ್ರಕರಣವನ್ನು ಸಿಐಡಿಗೆ ನೀಡಿದ ದಿನವೇ ತನಿಖಾಧಿಕಾರಿಗಳು ಬಿವಿಬಿ ಕಾಲೇಜಿಗೆ ಭೇಟಿ ನೀಡಿದ್ದರು. ಕಡತ , ತನಿಖಾ ವರದಿ ಪಡೆದು ತಮ್ಮ ಆಯಾಮದಲ್ಲಿ ತನಿಖೆ ಮುಂದುವರೆಸಿದ್ದಾರೆ. ಇದೀಗ ಅಂಜಲಿ ಪ್ರಕರಣವು ಸಿಐಡಿಗೆ ಹಸ್ತಾಂತರವಾಗಿದೆ.

ಇದೇ ವಿಚಾರವಾಗಿ ಮಾತನಾಡಿದ ಜಿ.ಪರಮೇಶ್ವರ ಅವರು, ನೇಹಾ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಅನೇಕ ವಿಚಾರಗಳನ್ನು ತಮ್ಮ ಮುಂದೆ ಹೇಳಲು ಆಗುವುದಿಲ್ಲ. ಇದರಿಂದ ತನಿಖೆಗೆ ಅಡ್ಡಿಯಾಗುತ್ತದೆ. ಕೃತ್ಯಕ್ಕೆ ಕಾರಣ ಏನೆಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದರು.

Karnataka Govt Today Will Hand Over Hubballi Anjali Murder Case to CID G Parameshwara reacts

ನೇಹಾ ಕೊಲೆ ಕೇಸ್‌ಗೆ ರಾಜಕೀಯ ಬಣ್ಣ

ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣವನ್ನು ರಾಜಕೀಯ ಬಣ್ಣಕಟ್ಟುವ, ರಾಜಕೀಯಕ್ಕೆ ಬಳಸಿಕೊಳ್ಳವ ಪ್ರಯತ್ನ ಆಗಿದೆ. ಅನೇಕರ ಹೇಳಿಕೆಯನ್ನು ಪೊಲೀಸ್ ಇಲಾಖೆ ಗಮನಿಸಿದೆ. ಪ್ರಕರಣದ ಆರೋಪಿ ಯಾವ ಉದ್ದೇಶಕ್ಕಾಗಿ ಕೃತ್ಯ ಎಸಗಿದ ಎಂಬುದು ತನಿಖೆಯಿಂದ ಹೊರ ಬರಬೇಕಿದೆ. ಇದು ಶೀಘ್ರವೇ ಆಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸಚಿವರ ಬಳಿ ಅಳಲು ತೋಡಿಕೊಂಡ ಅಂಜಲಿಯ ಅಜ್ಜಿ

ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದಾಗಿ ಯುವತಿಯ ಅಜ್ಜಿ ಗಂಗಮ್ಮ ಅವರನ್ನು ಮಾತನಾಡಿಸಿದೆ. ಘಟನೆಗೂ ಮೊದಲೇ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದೆವು. ಈ ವೇಳೆ ಅಲ್ಲಿ ಸರಿಯಾಗಿ ಸ್ಪಂದಿಸದ ಕಾರಣ ಬೇಸರವಾಯ್ತು. ದೂರು ನೀಡಿದ ಕೂಡಲೇ ಕ್ರಮ ತೆಗೆದುಕೊಂಡಿದ್ದರೆ ಮೊಮ್ಮಗಳು ಅಜಂಲಿ ಹತ್ಯೆ ಆಗುತ್ತಿರಲಿಲ್ಲ ಎಂದು ಕಣ್ಣೀರು ಹಾಕಿದರು.

ನಿರ್ಲಕ್ಷ್ಯ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಲಾಗಿದೆ. ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಅದರ ವರದಿ ಬಂದ ನಂತರ ಮುಂದಿನ‌ ಕ್ರಮ ಜರುಗಿಸಲಾಗುವುದು. ಯಾರೇ ತಪ್ಪೆಸಗಿದ್ದರು ಸುಮ್ಮನೆ ಬಿಡುವ ಪ್ರಮೇಯವೇ ಇಲ್ಲ ಎಂದು ತಿಳಿಸಿದರು.

ಕ್ರೈಂ ರೇಟ್: ವಿಪಕ್ಷಗಳಿಗೆ ತಿರುಗೇಟು

ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರ ಅವಧಿಯಲ್ಲಿ 2021 ಜನವರಿ ತಿಂಗಳಿನಿಂದ ಏಪ್ರಿಲ್‌ವರೆಗೆ (4 ತಿಂಗಳ ಅಂಕಿ-ಅಂಶ) 499 ಕೊಲೆ‌ ಪ್ರಕರಣಗಳು, 2022 ಜನವರಿಯಿಂದ ಏಪ್ರಿಲ್‌ವರೆಗೆ 466, 2023 ಜನವರಿಯಿಂದ ಏಪ್ರಿಲ್‌ವರೆಗೆ 431, 2024 ಜನವರಿಯಿಂದ ಏಪ್ರಿಲ್‌‌ವರೆಗೆ 430 ಕೊಲೆ ಪ್ರಕರಣಗಳು ವರದಿಯಾಗಿವೆ. ಈ ಅಂಕಿ-ಅಂಶಗಳನ್ನು ಗಮನಿಸಿದರೆ, ಯಾರ ಅವಧಿಯಲ್ಲಿ ಹೆಚ್ಚು ಕೊಲೆ ಪ್ರಕರಣಗಳು ವರದಿಯಾಗಿವೆ ಎಂಬುದು ಸ್ಪಷ್ಟವಾಗುತ್ತದೆ ಎಂದು ತಿರುಗೇಟು ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+