CID: ಅಂಜಲಿ ಹತ್ಯೆ ಪ್ರಕರಣ ಸಿಐಡಿಗೆ ಹಸ್ತಾಂತರ: ಇಂದು ಇಲ್ಲ ನಾಳೆ ಸಿಐಡಿ ತಂಡ ಹುಬ್ಬಳ್ಳಿಗೆ ಆಗಮನ?
ಹುಬ್ಬಳ್ಳಿ, ಮೇ 21: ಹುಬ್ಬಳ್ಳಿಯಲ್ಲಿ ಮೇ 15ರಂದು ನಡೆದ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬಗ್ಗೆ ಖುದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮಾಹಿತಿ ನೀಡಿದ್ದಾರೆ. ಇಂದು ಇಲ್ಲವೇ ನಾಳೆ ಸಿಐಡಿ ತಂಡ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಲಿದ್ದಾರೆ.
ಮಂಗಳವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಬೆಂಗಳೂರಿಗೆ ಆಗಮಿಸಿದರು. ನೆನ್ನೆ ಸೋಮವಾರ ಬೆಳಗ್ಗೆ ಅವರು ಹುಬ್ಬಳ್ಳಿಗೆ ಭೇಟಿ ನೀಡಿ ಕಾನೂನು ಸುವ್ಯವಸ್ಥೆ ಪರಿಶೀಲಿಸಿದರು. ತಿಂಗಳ ಅಂತರದಲ್ಲಿ ಕೊಲೆಯಾದ ನೇಹಾ ಹಾಗೂ ಅಂಜಲಿ ಅವರ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿ ಅವರು, ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಈ ಎರಡು ಕೊಲೆ ಪ್ರಕರಣಗಳನ್ನು ಸಿಐಡಿಗೆ ವಹಿಸಲಾಗಿದೆ. ಸ್ಥಳೀಯ ಪೊಲೀಸರು ಒತ್ತಡಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಬರಬಹುದು. ಹೀಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದರು.
ತನಿಖಾ ಕಡತ, ವರದಿ ಹಸ್ತಾಂತರ
ಸಿಐಡಿ ಅಧಿಕಾರಿಗಳ ತಂಡ ಇವತ್ತು ಅಥವಾ ನಾಳೆ ಅಂಜಲಿ ಹತ್ಯೆ ಕುರಿತಂತೆ ಪೊಲೀಸರಿಂದ ತನಿಖಾ ವರದಿಗಳ ಕಡತವನ್ನು ಸ್ವೀಕರಿಸಲಿದ್ದಾರೆ. ಘಟನೆ ಕುರಿತು ಪೊಲೀಸರಿಂದ ಮಾಹಿತಿ ಪಡೆಯುವ ಜೊತೆಗೆ ಖುದ್ದು ಅಧಿಕಾರಿಗಳು ಹತ್ಯೆ ನಡೆದ ಅಂಜಲಿ ಮನೆಗೆ ಭೇಟಿ ಕೊಟ್ಟು ಪರಿಶೀಲಿಸುತ್ತಾರೆ. ಅಗತ್ಯ ಮಾಹಿತಿಗಳನ್ನು ಪೊಲೀಸರಿಂದ ಪಡೆದು ತನಿಖೆ ಮುಂದುವರೆಸಲಿದ್ದಾರೆ.
ಕಳೆದ ಭಾರಿ ಅಂಜಲಿ ಪ್ರಕರಣವನ್ನು ಸಿಐಡಿಗೆ ನೀಡಿದ ದಿನವೇ ತನಿಖಾಧಿಕಾರಿಗಳು ಬಿವಿಬಿ ಕಾಲೇಜಿಗೆ ಭೇಟಿ ನೀಡಿದ್ದರು. ಕಡತ , ತನಿಖಾ ವರದಿ ಪಡೆದು ತಮ್ಮ ಆಯಾಮದಲ್ಲಿ ತನಿಖೆ ಮುಂದುವರೆಸಿದ್ದಾರೆ. ಇದೀಗ ಅಂಜಲಿ ಪ್ರಕರಣವು ಸಿಐಡಿಗೆ ಹಸ್ತಾಂತರವಾಗಿದೆ.
ಇದೇ ವಿಚಾರವಾಗಿ ಮಾತನಾಡಿದ ಜಿ.ಪರಮೇಶ್ವರ ಅವರು, ನೇಹಾ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಅನೇಕ ವಿಚಾರಗಳನ್ನು ತಮ್ಮ ಮುಂದೆ ಹೇಳಲು ಆಗುವುದಿಲ್ಲ. ಇದರಿಂದ ತನಿಖೆಗೆ ಅಡ್ಡಿಯಾಗುತ್ತದೆ. ಕೃತ್ಯಕ್ಕೆ ಕಾರಣ ಏನೆಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದರು.

ನೇಹಾ ಕೊಲೆ ಕೇಸ್ಗೆ ರಾಜಕೀಯ ಬಣ್ಣ
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣವನ್ನು ರಾಜಕೀಯ ಬಣ್ಣಕಟ್ಟುವ, ರಾಜಕೀಯಕ್ಕೆ ಬಳಸಿಕೊಳ್ಳವ ಪ್ರಯತ್ನ ಆಗಿದೆ. ಅನೇಕರ ಹೇಳಿಕೆಯನ್ನು ಪೊಲೀಸ್ ಇಲಾಖೆ ಗಮನಿಸಿದೆ. ಪ್ರಕರಣದ ಆರೋಪಿ ಯಾವ ಉದ್ದೇಶಕ್ಕಾಗಿ ಕೃತ್ಯ ಎಸಗಿದ ಎಂಬುದು ತನಿಖೆಯಿಂದ ಹೊರ ಬರಬೇಕಿದೆ. ಇದು ಶೀಘ್ರವೇ ಆಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಸಚಿವರ ಬಳಿ ಅಳಲು ತೋಡಿಕೊಂಡ ಅಂಜಲಿಯ ಅಜ್ಜಿ
ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದಾಗಿ ಯುವತಿಯ ಅಜ್ಜಿ ಗಂಗಮ್ಮ ಅವರನ್ನು ಮಾತನಾಡಿಸಿದೆ. ಘಟನೆಗೂ ಮೊದಲೇ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದೆವು. ಈ ವೇಳೆ ಅಲ್ಲಿ ಸರಿಯಾಗಿ ಸ್ಪಂದಿಸದ ಕಾರಣ ಬೇಸರವಾಯ್ತು. ದೂರು ನೀಡಿದ ಕೂಡಲೇ ಕ್ರಮ ತೆಗೆದುಕೊಂಡಿದ್ದರೆ ಮೊಮ್ಮಗಳು ಅಜಂಲಿ ಹತ್ಯೆ ಆಗುತ್ತಿರಲಿಲ್ಲ ಎಂದು ಕಣ್ಣೀರು ಹಾಕಿದರು.
ನಿರ್ಲಕ್ಷ್ಯ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಲಾಗಿದೆ. ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಅದರ ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು. ಯಾರೇ ತಪ್ಪೆಸಗಿದ್ದರು ಸುಮ್ಮನೆ ಬಿಡುವ ಪ್ರಮೇಯವೇ ಇಲ್ಲ ಎಂದು ತಿಳಿಸಿದರು.
ಕ್ರೈಂ ರೇಟ್: ವಿಪಕ್ಷಗಳಿಗೆ ತಿರುಗೇಟು
ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರ ಅವಧಿಯಲ್ಲಿ 2021 ಜನವರಿ ತಿಂಗಳಿನಿಂದ ಏಪ್ರಿಲ್ವರೆಗೆ (4 ತಿಂಗಳ ಅಂಕಿ-ಅಂಶ) 499 ಕೊಲೆ ಪ್ರಕರಣಗಳು, 2022 ಜನವರಿಯಿಂದ ಏಪ್ರಿಲ್ವರೆಗೆ 466, 2023 ಜನವರಿಯಿಂದ ಏಪ್ರಿಲ್ವರೆಗೆ 431, 2024 ಜನವರಿಯಿಂದ ಏಪ್ರಿಲ್ವರೆಗೆ 430 ಕೊಲೆ ಪ್ರಕರಣಗಳು ವರದಿಯಾಗಿವೆ. ಈ ಅಂಕಿ-ಅಂಶಗಳನ್ನು ಗಮನಿಸಿದರೆ, ಯಾರ ಅವಧಿಯಲ್ಲಿ ಹೆಚ್ಚು ಕೊಲೆ ಪ್ರಕರಣಗಳು ವರದಿಯಾಗಿವೆ ಎಂಬುದು ಸ್ಪಷ್ಟವಾಗುತ್ತದೆ ಎಂದು ತಿರುಗೇಟು ನೀಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications