ನವೆಂಬರ್ 18ಕ್ಕೆ ಎಚ್ ಡಿಕೆ ಹುಬ್ಬಳ್ಳಿ ಮನೆ ಗೃಹಪ್ರವೇಶ
ಹುಬ್ಬಳ್ಳಿ, ನವೆಂಬರ್ 14: ನಗರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನವೆಂಬರ್ 18ರಂದು ಗೃಹಪ್ರವೇಶ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಮತ್ತು ಜೆಡಿಎಸ್ ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ ಸಂಬಂಧಿ ಸುರೇಶ ರಾಯರಡ್ಡಿ ಅವರ ಮನೆಯನ್ನು ವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.
ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿರುವ ಭೈರಿದೇವರಕೊಪ್ಪದ ಮಾಯಕಾರ್ಸ್ ಕಾಲೋನಿ, ಬ್ಲಾಕ್ ನಂ.359,2, ಒಂದನೇ ಮುಖ್ಯರಸ್ತೆ, ಈಶ್ವರ ನಗರದಲ್ಲಿ ಸುರೇಶ ಅವರ ಏಕದಂತ ಕೃಪಾ ಹೆಸರಿನ ಎರಡು ಮಹಡಿಯ, ನಾಲ್ಕು ಕೋಣೆಯ ಮನೆಯಲ್ಲಿ ಕುಮಾರಸ್ವಾಮಿ ಅವರು ತಿಂಗಳಲ್ಲಿ 15 ದಿನ ವಾಸ ಮಾಡಲಿದ್ದಾರೆ.[ಹುಬ್ಬಳ್ಳಿಯಲ್ಲಿ ಕುಮಾರಸ್ವಾಮಿ 2ನೇ ಮನೆ ಮಾಡ್ತಿರೋದು ಯಾಕೆ?]

ಒಟ್ಟು 6 ಸಾವಿರ ಚದರಡಿಯ ಈ ಮನೆಯಲ್ಲಿ ನೂರಕ್ಕೂ ಹೆಚ್ಚು ಜನ ಕುಳಿತುಕೊಳ್ಳುವ ಸಭಾ ಭವನ, ಕೆಲಸಗಾರರಿಗೆ ಪ್ರತ್ಯೇಕ ವ್ಯವಸ್ಥೆ ಮತ್ತು ಕಾರುಗಳ ನಿಲುಗಡೆ ಸಾಕಷ್ಟು ಜಾಗ ಮೀಸಲಿಡಲಾಗಿದೆ. ಜೊತೆಗೆ ಇಲ್ಲಿ ಕಚೇರಿಯನ್ನೂ ಮಾಡಿಕೊಳ್ಳಬಹುದಾಗಿದೆ.[ಉತ್ತರ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸ್ತೀನಿ: ಎಚ್ ಡಿಕೆ]
ಈಗಾಗಲೇ ಸಾಕಷ್ಟು ವಾಸ್ತು ಪರಿಣತರು ಬಂದು, ಮನೆ ಪರಿಶೀಲಿಸಿ ಉತ್ತರ ದಿಕ್ಕಿಗೆ ಬಾಗಿಲು ಇರುವ ಈ ಮನೆಯನ್ನೇ ಅಂತಿಮಗೊಳಿಸಿದ್ದಾರೆ. ಹೋಮ, ಹವನಗಳೊಂದಿಗೆ ಕುಮಾರಸ್ವಾಮಿ ಅವರು ತಮ್ಮ ಪತ್ನಿ ಅನಿತಾರೊಂದಿಗೆ ನವೆಂಬರ್ 18ರಂದು ಗೃಹಪ್ರವೇಶ ಮಾಡಲಿದ್ದಾರೆ. ಅಂದಹಾಗೆ, ಈ ಮನೆಯನ್ನು ಕುಮಾರಸ್ವಾಮಿ ಅವರು ಇನ್ನೂ ನೋಡಿಯೇ ಇಲ್ಲ. ಜೆಡಿಎಸ್ ನ ಸ್ಥಳೀಯ ಧುರೀಣರು ಈ ಮನೆಯನ್ನು ಆಯ್ಕೆ ಮಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications