Get Updates
Get notified of breaking news, exclusive insights, and must-see stories!

ಕುಮಾರಸ್ವಾಮಿ ಅವರಿಂದ 200 ಎಕರೆ ಭೂ ಕಬಳಿಕೆ-ಹಿರೇಮಠ

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ,ಹಾಗೂ ಅವರ ಸಂಬಂಧಿಗಳು ಒಟ್ಟು 200 ಎಕರೆ ಭೂಮಿ ಕಬಳಿಕೆ ಮಾಡಿದ್ದಾರೆ. ಸರ್ಕಾರ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್‌.ಆ ಒತ್ತಾಹಿಸಿದರು.

ಹುಬ್ಬಳ್ಳಿ, ಅಕ್ಟೋಬರ್. 31 : 'ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು 200 ಎಕರೆ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ' ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ.

ಭಾನುವಾರ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಸ್.ಆರ್.ಹಿರೇಮಠ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯಲ್ಲಿ 110 ಎಕರೆ ಗೋಮಾಳ ಸೇರಿದಂತೆ 200 ಎಕರೆ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆಂದು ಆರೋಪಿಸಿ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದರು.

Govt. urged to recover 200 acres of public land in ‘illegal possession’ of Kumaraswamy and family

'ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಮ್ಮಕ್ಕಿನಿಂದ 1987ರಿಂದಲೂ ಸರ್ಕಾರಿ ಭೂಮಿ ಒತ್ತುವರಿ ಮಾಡಲಾಗಿದೆ. ಕುಮಾರಸ್ವಾಮಿ ಸಂಬಂಧಿ, ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಅವರು ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ತಕ್ಷಣ ಮುಟ್ಟುಗೋಲು ಹಾಕಿ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕು' ಎಂದು ಒತ್ತಾಯಿಸಿದರು.

'ದೇವೇಗೌಡರು ನೀರಾವರಿ ಸಚಿವರಾಗಿದ್ದ ಕಾಲದಿಂದಲೇ ಈ ಕಬಳಿಕೆ ನಡೆದಿದೆ. ಮಾಜಿ ಶಾಸಕ ಕೆ.ಸಿ.ಲಿಂಗಪ್ಪ ಅಂದಿನ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ಬಳಿಕ ಕಾವೇರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಮಾದೇಗೌಡ ಅವರು ಲೋಕಾಯುಕ್ತಕ್ಕೆ ಈ ಕುರಿತು ದೂರು ನೀಡಿದ್ದರು' ಎಂದು ಹೇಳಿದರು.

'ಲೋಕಾಯುಕ್ತ ತನಿಖೆ ಬಳಿಕ ಸರ್ಕಾರಿ ಭೂಮಿ ಒತ್ತುವರಿ ಆಗಿರುವುದನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆದೇಶವಿದೆ. ಆದರೆ, ರಾಮನಗರ ಜಿಲ್ಲಾಧಿಕಾರಿಗಳು ಮುಟ್ಟುಗೋಲು ಹಾಕಿಕೊಳ್ಳಲು ಮೀನಾಮೇಷ ಎಣಿಸುತ್ತಿದ್ದಾರೆ. ಬಡವರಿಗೆ ತಲುಪಬೇಕಾದ ಭೂಮಿಯನ್ನು ಸರ್ಕಾರ ವಶಕ್ಕೆ ಪಡೆಯಬೇಕು' ಎಂದು ಒತ್ತಾಯಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+