ಹುಬ್ಬಳ್ಳಿಯಲ್ಲಿ ಮನೆ ಮಾಡಿದ ಎಚ್ಡಿಕೆ, ಧಾರವಾಡದಿಂದ ಸ್ಪರ್ಧೆ?
ಹುಬ್ಬಳ್ಳಿ, ಮೇ 31: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಕೆಗಳು ಗರಿಗೆದರತೊಡಗಿವೆ. ಮುಂಚೂಣಿಯಲ್ಲಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯದ ಉದ್ದಗಲಕ್ಕೂ ಸುತ್ತಾಡಲು ಆರಂಭಿಸಿದ್ದಾರೆ.
ಎಲ್ಲರಿಂತ ಒಂದು ಹೆಜ್ಜೆ ಮುಂದೆ ಎಂಬಂತೆ ಜೆಡಿಎಸ್ ರಾಜಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.
ಈ ಹಿಂದೆ ಕಾರ್ಯಕರ್ತರು ಬಯಸಿದರೆ ಉತ್ತರ ಕರ್ನಾಟಕದ ಯಾವುದಾದರೂಂದು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಸುಳಿವು ನೀಡಿದ್ದ ಎಚ್ಡಿಕೆ, ಇದೀಗ ಒಳಗಿಂದೊಳಗೆ ಚುನಾವಣೆಗೆ ನಿಲ್ಲಲು ತಯಾರಿ ನಡೆಸುತ್ತಿದ್ದಾರೆ.[ಮಂಡ್ಯ ರಾಜಕಾರಣ ಹೈಜಾಕ್ ಮಾಡಲು ಎಚ್ ಡಿಕೆ ಪ್ರಯತ್ನ: ಚೆಲುವರಾಯಸ್ವಾಮಿ]

ಧಾರವಾಡ ಗ್ರಾಮೀಣ ಕ್ಷೇತ್ರದತ್ತ ಕಣ್ಣು
ಕ್ಷೇತ್ರದ ಆಯ್ಕೆ ಕುರಿತು ಗಂಭೀರ ಚಿಂತನೆಯಲ್ಲಿ ತೊಡಗಿರುವ ಮಾಜಿ ಮುಖ್ಯಮಂತ್ರಿ, ಗಣಿ ಮತ್ತು ಭೂ ವಿಜ್ಞಾನ ಖಾತೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಪ್ರತಿನಿಧಿಸುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದತ್ತ ಒಲವು ಹೊಂದಿದ್ದಾರೆ ಎಂದು ಅವರ ಆಪ್ತ ಮೂಲಗಳು ಖಚಿತಪಡಿಸಿವೆ.
2013ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜೆಡಿಎಸ್ ಅಭ್ಯರ್ಥಿ ಅಮೃತ್ ದೇಸಾಯಿ ಶೇ 26.41 ರಷ್ಟು ಮತಗಳನ್ನು (35133) ಪಡೆದು ಎರಡನೇ ಸ್ಥಾನ ಪಡೆದಿದ್ದರು. ಕ್ಷೇತ್ರದಲ್ಲಿ ಪಕ್ಷದ ಬೇರು ಗಟ್ಟಿಯಾಗಿರುವುದು ಹಾಗೂ ಉತ್ತರ ಕರ್ನಾಟಕದ ಯಾವುದಾದರೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ತಾವು ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿಲ್ಲ ಎಂದು ಬಿಂಬಿಸುವುದು ಕುಮಾರಸ್ವಾಮಿ ಅವರ ಈ ನಿರ್ಧಾರಕ್ಕೆ ಕಾರಣ ಎನ್ನಲಾಗುತ್ತಿದೆ.[ಮೋದಿ ಸರಕಾರಕ್ಕೆ 3ವರ್ಷ: ಗೌಡ್ರು, ಕುಮಾರಣ್ಣ ನೀಡಿದ ಸರ್ಟಿಫಿಕೇಟ್]
ಅಲ್ಲದೆ ಅಮೃತ್ ದೇಸಾಯಿ ಈಗ ಪಕ್ಷ ತೊರೆದು ಬಿಜೆಪಿ ಸೇರಿರುವುದರಿಂದ ಆ ನಷ್ಟವನ್ನು ತುಂಬಲು ಈ ನಿರ್ಧಾರ ತಳೆದಿದ್ದಾರೆ. ಈ ಪಕ್ಷದ ನೆಲೆ ಇಲ್ಲದ ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸುವ ಮೂಲಕ ಒಂದು ವೇಳೆ ಗೆದ್ದರೆ ಇದೇ ಕ್ಷೇತ್ರವನ್ನು ಉಳಿಸಿಕೊಳ್ಳುವುದು ಅವರ ಮುಂದಿನ ಆಯ್ಕೆಯೂ ಆಗಿದೆ.
ಗೆಲುವಿಗಾಗಿ ತಯಾರಿ ಆರಂಭ
ಎಚ್ಡಿಕೆ ಗೆಲುವಿಗಾಗಿ ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಒಳಗಿಂದೊಳಗೆ ಸಂಘಟನೆಯಲ್ಲಿ ತೊಡಗಿದ್ದಾರೆ. ಅಲ್ಲದೆ ಕ್ಷೇತ್ರದ ಮತದಾರರ ವಿವಿರಗಳು ಸೇರಿದಂತೆ ಅಗತ್ಯ ಮಾಹಿತಿಯನ್ನು ಅವರು ಈಗಾಗಲೇ ಪಡೆದುಕೊಂಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.[ಕುಮಾರಸ್ವಾಮಿಗೆ ಹೆಚ್ಚಾದ ಆತ್ಮರತಿ: ಬಿಜೆಪಿ ನಾಯಕಿ ಲೇವಡಿ]
ಇನ್ನು ಮಹಿಳಾ ಸಂಘಗಳ ಮೂಲಕ ಮಹಿಳೆಯರನ್ನು ಸಂಘಟಿಸುವಲ್ಲಿ ಎಚ್ಡಿಕೆ ಆಪ್ತರು ಕ್ಷೇತ್ರದಲ್ಲಿ ಬಿಡು ಬಿಟ್ಟಿದ್ದಾರೆ. ಇತ್ತೀಚೆಗೆ ನಡೆದ ಮಹಿಳಾ ಸಂಘಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರೇ ಇದಕ್ಕೆ ಸಾಕ್ಷಿಯಾಗಿದ್ದು, ಈ ಎಲ್ಲ ಬೆಳವಣಿಗೆಗಳು ಸಚಿವ ವಿನಯ್ ಕುಲಕರ್ಣಿ ಅವರ ನಿದ್ದೆಗೆಡಿಸಿದೆ.
ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ವಿನಯ್ ಕುಲಕರ್ಣಿ ಅವರು ಈಗ ಸಂಪುಟ ದರ್ಜೆ ಸಚಿವರಾಗಿಯೂ ಇರುವುದರಿಂದ ಕ್ಷೇತ್ರ ತಮ್ಮ ಹಿಡಿತದಲ್ಲಿದೆ ಎಂದು ಆರಂಭದಿಂದ ಅಂದುಕೊಂಡಿದ್ದರು. ಆದರೆ, ಕುಮಾರಸ್ವಾಮಿ ಅವರ ಈ ಅನೀರಿಕ್ಷಿತ ನಡೆ ಮೂರನೇ ಬಾರಿಗೆ ವಿಧಾನಸಭೆ ಆಯ್ಕೆಯಾಗುವ ಅವರ ಕನಸಿಗೆ ಕೊಕ್ಕೆ ಹಾಕುವ ಸಾಧ್ಯತೆ ಇದೆ.
ಕಮರಿದ ಬಿಜೆಪಿ ಆಸೆ
ಎಚ್ಡಿಕೆ ನಡೆಯಿಂದ ಇತ್ತ ಬಿಜೆಪಿಯಲ್ಲಿಯೂ ಆಕಾಂಕ್ಷಿಗಳ ಆಸೆ ಕಮರತೊಡಗಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಅಮೃತ್ ದೇಸಾಯಿ, ಮಾಜಿ ಶಾಸಕಿ ಸೀಮಾ ಮಸೂತಿ ಹಾಗೂ ಕೆಜೆಪಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯೂಡಿಯೂರಪ್ಪ ಅವರೊಂದಿಗೆ ಬಿಜೆಪಿಗೆ ಮರಳಿರುವ ಅಷ್ಟಗಿ ತವನಪ್ಪ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಅಮೃತ್ ದೇಸಾಯಿ (ಶೇ 26.41) ಅಷ್ಟಗಿ ತವನಪ್ಪ (ಶೇ 16.23) ಹಾಗೂ ಬಿಜೆಪಿಯ ಸೀಮಾ ಮಸೂತಿ (ಶೇ 12.7) ಮತಗಳನ್ನು ಪಡೆದಿದ್ದು, ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದರೂ ಕುಮಾರಸ್ವಾಮಿ ಎದುರು ಸ್ಪರ್ಧೆಗೆ ಹಿಂದೇಟು ಹಾಕುತ್ತಿರುವುದಂತೂ ಸತ್ಯ.
ಮುಂಬರುವ ಚುನಾವಣೆಯಲ್ಲಿ ಒಂದೊಮ್ಮೆ ಕುಮಾರಸ್ವಾಮಿ ಸ್ಪರ್ಧಿಸಿದರೆ ಜಾತ್ಯಾತೀತ ಮತಗಳ ವಿಭಜನೆಯಾಗುವ ಮೂಲಕ ಬಿಜೆಪಿಗೆ ಅನುಕೂಲವಾಗಲಿದೆಯೋ ಅಥವಾ ಬಲಿಷ್ಠ ಲಿಂಗಾಯತ ಸಮುದಾಯ ಜೆಡಿಎಸ್ ಬೆನ್ನಿಗೆ ಬೀಳುವುದೋ ಎಂಬ ಕುತೂಹಲ ಹುಟ್ಟಿಕೊಂಡಿದೆ. ಒಟ್ಟಿನಲ್ಲಿ ಎಚ್ಡಿಕೆ ಸ್ಪರ್ಧಿಸಿದರೆ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆಯಲಿದೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications