ಹುಬ್ಬಳ್ಳಿಯಲ್ಲಿ ಮತ್ತೆ ಮೊಳಗಿತು ಪ್ರತ್ಯೇಕ ಲಿಂಗಾಯತ ಧರ್ಮದ ಬೇಡಿಕೆ
ಹುಬ್ಬಳ್ಳಿ, ನವೆಂಬರ್ 5 : ಅಖಿಲ ಭಾರತೀಯ ವೀರಶೈವ ಮಹಾಸಭಾದವರು ಸ್ಪಂದಿಸದಿದ್ದರೆ ಪ್ರತ್ಯೇಕ ಲಿಂಗಾಯತ ಮಹಾ ಪರಿಷತ್ ರಚನೆ ಮಾಡಬೇಕಾಗುತ್ತದೆ ಎಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ. 'ವೀರಶೈವ ಮಹಾಸಭಾದವರು ಕುರ್ಚಿಗಾಗಿ ರಾಜಕೀಯ ಮಾಡುತ್ತಿದ್ದಾರೆ. ಆದ್ದರಿಂದ, ಪ್ರತ್ಯೇಕ ಲಿಂಗಾಯತ ಧರ್ಮದ ಬೇಡಿಕೆಗೆ ವಿರೋಧ ಮಾಡುತ್ತಿದ್ದಾರೆ' ಎಂದು ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದರು.
ಭಾನುವಾರ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ 'ಲಿಂಗಾಯತ ಧರ್ಮ ಸಾಂವಿಧಾನಿಕ ಮಾನ್ಯತೆಗಾಗಿ' ಬೃಹತ್ ಸಮಾವೇಶ ನಡೆಯಿತು. 2018ರ ಫೆಬ್ರವರಿಯೊಳಗೆ ಲಿಂಗಾಯತ ಧರ್ಮ ಸಾಂವಿಧಾನಿಕ ಮಾನ್ಯತೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲು ನಿರ್ಣಯಿಸಲಾಯಿತು.
ಸಮಾವೇಶದಲ್ಲಿ ಮಾತನಾಡಿದ ಬಸವರಾಜ ಹೊರಟ್ಟಿ ಅವರು, 'ಹಲವು ಬಾರಿ ಮನವಿ ಮಾಡಿದರೂ ಶ್ಯಾಮನೂರು ಶಿವಶಂಕರಪ್ಪ ಅವರು ಸ್ಪಂದಿಸಿಲ್ಲ. ಅನಿವಾರ್ಯವಾಗಿ ಪ್ರತ್ಯೇಕ ಲಿಂಗಾಯತ ಮಹಾ ಪರಿಷತ್ ಆಗುವಂತೆ ಮಾಡಬೇಡಿ. ರಚನೆ ಮಾಡಿದ ಮೇಲೆ ನಮ್ಮನ್ನು ದೂರಬೇಡಿ' ಎಂದರು.
ಕೆಎಲ್ಇ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರಭಾಕರ ಕೋರೆ ಅವರ ವಿರುದ್ಧ ಸಮಾವೇಶದಲ್ಲಿ ಆಕ್ರೋಶ ವ್ಯಕ್ತವಾಯಿತು. ಕೋರೆ ಅವರು ಬದಲಾಗಬೇಕು ಇಲ್ಲವಾದಲ್ಲಿ ಕೆಎಲ್ಇ ಅಧ್ಯಕ್ಷ ಸ್ಥಾನ ಬಿಡಬೇಕಾಗುತ್ತದೆ ಎಂದು ಸಮಾವೇಶದಲ್ಲಿ ವಿವಿಧ ನಾಯಕರು ಹೇಳಿದರು.

'ಒಬ್ಬ ತಂದೆಗೆ ಹುಟ್ಟಿದವರು ಲಿಂಗಾಯತರು'
ಸಮಾವೇಶದಲ್ಲಿ ಮಾತನಾಡಿದ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, 'ಹುಬ್ಬಳ್ಳಿ ಅಂದರೆ ಸಾಕಷ್ಟು ಮಹಾಪುರುಷರಿಗೆ ಜನ್ಮ ನೀಡಿದೆ. ಒಬ್ಬ ತಂದೆಗೆ ಹುಟ್ಟಿದವರು ಲಿಂಗಾಯತರು. ಐವರು ತಂದೆಗೆ ಹುಟ್ಟಿದವರು ವೀರಶೈವರು' ಎಂಬ ವಿವಾದಾತ್ಮಕ ಹೇಳಿಕೆ ನೀಡಿದರು.

'ಕಲ್ಲಿಂದ ಹೊಡೆಯಬೇಕು'
ಸುಲಫಲ ಮಠದ ಶಿವಯೋಗಿ ಶ್ರೀಗಳು, 'ಪಂಚ ಪೀಠಾಧಿಪತಿಗಳು ಲಿಂಗಾಯತ ಸಮಾಜದ ಪೀಡಕರು, ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಗಾಂಧೀಜಿಯನ್ನು ಕೊಂದವರು ಎಂ.ಎಂ.ಕಲಬುರ್ಗಿ ಅವರನ್ನು ಕೊಂದಿದ್ದಾರೆ. ಮನುಷ್ಯರ ಹೆಗೆಲ ಮೇಲೆ ಹತ್ತಿ ಮೆರೆಯುವವರನ್ನು ಕಲ್ಲಿನಿಂದ ಹೊಡೆಯಬೇಕು' ಎಂದರು.

'ಮಾನ್ಯತೆ ಸಿಕ್ಕರೆ ಯಾರಿಗೂ ತೊಂದರೆಯಾಗಲ್ಲ'
ಸಭೆಯಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು, 'ಕೆಲವು ಮಠಾಧೀಶರು ಬಸವನ್ಣನವರು ಬಿಟ್ಟುಬಂದ ವೈದಿಕ ಪದ್ಧತಿ ಆಚರಿಸುತ್ತಾರೆ. ನಾವು ಹಿಂದೂ ಧರ್ಮದ ವಿರೋಧಿಗಳಲ್ಲ. ನಮಗೆ ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಯಾರಿಗೂ ತೊಂದರೆಯಾಗುವುದಿಲ್ಲ' ಎಂದು ಹೇಳಿದರು.

ಶ್ಯಾಮನೂರು ವಿರುದ್ಧ ಆಕ್ರೋಶ
ಸಮಾವೇಶ ಉದ್ದೇಶಿಸಿ ಮಾತನಾಡಿದ ಮಾತೆ ಮಹಾದೇವಿ ಅವರು, 'ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರು ಲಿಂಗಾಯತರಿಗೆ ಸ್ವತಂತ್ರ ಧರ್ಮ ಸಿಗಬಾರದು ಎಂದು ವೀರಶೈವ ಲಿಂಗಾಯತ ಧರ್ಮ ಕೇಳುತ್ತಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

'ವೀರಶೈವರ ಬಾಲ ಹಿಡಿದುಕೊಂಡು ಓಡಾಡುತ್ತಿದ್ದಾರೆ'
'ಜಗದೀಶ್ ಶೆಟ್ಟರ್ ಅವರನ್ನು ಸಮಾವೇಶಕ್ಕೆ ಕರೆದರೂ ಬರಲಿಲ್ಲ. ಲಿಂಗಾಯತರ ಹೆಸರಲ್ಲಿ ಶಾಸಕ, ಮಂತ್ರಿ, ಸಿಎಂ ಆಗಿದ್ದಾರೆ. ಈಗ ವೀರಶೈವರ ಬಾಲ ಹಿಡಿದುಕೊಂಡು ಓಡಾಡುತ್ತಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications