ಕರ್ನಾಟಕ ಮುಖ್ಯಮಂತ್ರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳುವುದೇ ಆಗಿರುತ್ತದೆ: ಮೋದಿ
ಹುಬ್ಬಳ್ಳಿ, ಫೆಬ್ರವರಿ 10: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹುಬ್ಬಳ್ಳಿಗೆ ಬಂದಿದ್ದರು. ಐದು ಗಂಟೆಗೆ ಅವರ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ತಡವಾಯಿತು. ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು.
ಮಹಾನಾಯಕ ಎನ್ಟಿಆರ್ ಬೆನ್ನಿಗೆ ಚೂರಿ ಹಾಕಿದ್ದ ಚಂದ್ರಬಾಬು ನಾಯ್ಡು: ಮೋದಿ
ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕರ್ನಾಟಕದಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಂತಾಗಿದೆ. ಮೋದಿ ಅವರ ಆಗಮನಕ್ಕೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ವಿಶ್ವದಲ್ಲೇ ಅತಿ ದೊಡ್ಡ ಆರೋಗ್ಯ ಯೋಜನೆ ತಂದ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು.
ಹದಿನೇಳು ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ದೊರೆಯುವಂತೆ ಮಾಡಿದರು. ಆದಾಯ ತೆರಿಗೆ ಇಳಿಕೆ ಮಾಡಿದ ಕೇಂದ್ರ ಸರಕಾರದ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡರು ಸದಾನಂದ ಗೌಡ. ಬಿಜೆಪಿಯ ಭಾರೀ ಶಕ್ತಿ ಪ್ರದರ್ಶನದಂತೆ ಕಂಡುಬರುತ್ತಿರುವ ಈ ಸಭೆಯಲ್ಲಿ ಮೋದಿ ಮಾತನಾಡಲಿದ್ದಾರೆ.
PM Modi addresses Public Meeting at Hubli, Karnataka. #SouthIndiaForNaMo https://t.co/lmcYcjDFJK
— BJP (@BJP4India) 10 February 2019
ದೆಹಲಿಯಲ್ಲಿ ಕೂತು ರಾಜ್ಯ ಸರಕಾರದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ರಾಹುಲ್ ಗಾಂಧಿ ಹೆಸರು ಹೇಳದೆ ವ್ಯಂಗ್ಯವಾಡಿದರು.