ಕುಂದಗೋಳ ಶಾಸಕಿ ವಿರುದ್ಧ ಅಸಾಂವಿಧಾನಿಕ ಭಾಷೆ ಬಳಸಿ ಆಕ್ರೋಶ: ಟಿಕೆಟ್ಗಾಗಿ ಲಾಬಿ
ಹುಬ್ಬಳ್ಳಿ, ಏಪ್ರಿಲ್ 03: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಸುತ್ತಿದ್ದು, ಕುಂದಗೋಳ ವಿಧಾನಸಭಾ ಕ್ಷೇತ್ರವು ರಂಗೇರುತ್ತಿದೆ. ಹಾಲಿ ಶಾಸಕಿಯ ವಿರುದ್ಧ ಕಾಂಗ್ರೆಸ್ ಪಾಳೆಯದಲ್ಲಿಯೇ ಟಿಕೆಟ್ ವಿಚಾರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಯೊಬ್ಬರು ಅಸಂವಿಧಾನಿಕ ಭಾಷೆ ಬಳಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಸೋಮವಾರ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ಶಿವಾನಂದ ಬೆಂತೂರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಲಾಗಿತ್ತು. ಕುಂದಗೋಳ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಸಿ.ಜೆ. ಪಾಟೀಲ ಎಂಬುವವರು ಕಾಂಗ್ರೆಸ್ ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿಯವರ ವಿರುದ್ಧವೇ ಅಸಂವಿಧಾನಿಕ ಭಾಷೆ ಬಳಸಿದ್ದಾರೆ. ಈ ಮೂಲಕ ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜರುಗಿದೆ.

ತರಾಟೆ ಬಳಿಕ ಕ್ಷಮೆಯಾಚನೆ
ಈಗಾಗಲೇ ಕುಸುಮಾವತಿ ಶಿವಳ್ಳಿಯವರ ವಿರುದ್ಧ ಬಂಡಾಯ ಚುನಾವಣೆ ಸಾರಲು ಸಿದ್ಧವಾಗಿರುವ ಹತ್ತು ಜನರ ತಂಡದಲ್ಲಿ ಸಿ.ಜೆ.ಪಾಟೀಲ ಕೂಡ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅನೇಕ ಮಾಧ್ಯಮದವರು ಉಪಸ್ಥಿತರಿದ್ದರು. ಅವರ ಮುಂದೇಯೆ ಅಸಂವಿಧಾನಿಕ ಭಾಷೆ ಬಳಸಿದ್ದಾರೆ. ಇದನ್ನು ಖಂಡಿಸಿ ಸ್ಥಳದಲ್ಲಿದ್ದ ಪತ್ರಕರ್ತರು ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ ಕಾಂಗ್ರೆಸ್ ಮುಖಂಡರು ಕ್ಷಮೆಯಾಚನೆ ಮಾಡಿರುವುದು ನಿಜಕ್ಕೂ ವಿಷಾದಕರ.
ದಿನೇ ದಿನೆ ಚುನಾವಣೆ ಕಾವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪಕ್ಷದ ಪ್ರತಿಷ್ಟೆಗಿಂತ ವೈಯಕ್ತಿಕ ಪ್ರತಿಷ್ಠೆಯ ಕಣವಾಗಿ ಮಾರ್ಪಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಶಾಸಕಿ ಕುಸುಮಾವತಿ ಶಿವಳ್ಳಿಯವರ ವಿರುದ್ಧ ಅಸಂವಿಧಾನಿಕ ಭಾಷೆ ಬಳಸಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಟಿಕೆಟ್ ಆಕಾಂಕ್ಷಿಯಾಗಿರುವ ಒಬ್ಬ ಮುಖಂಡ ಹಾಲಿ ಶಾಸಕರಿಗೆ ಅದರಲ್ಲೂ ಮಹಿಳಾ ಶಾಸಕರಿಗೆ ಈ ರೀತಿ ಭಾಷೆ ಬಳಸಿ ನಿಂದನೆ, ವೈಯಕ್ತಿಕ ಮತ್ತು ಪ್ರತಿಷ್ಠೆ ಕಾರಣಕ್ಕೆ ಮಾತನಾಡುವುದು ಸರಿಯಲ್ಲ ಎಂದು ಕುಸುಮಾವತಿ ಶಿವಳ್ಳಿಯವರ ಬೆಂಬಲಿಗರು ದೂರಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ನಲ್ಲಿ ಕುಂದಗೋಳ ಟಿಕೆಟ್ಗೆ ಲಾಭಿ
ಇತ್ತ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಟಿಕೆಟ್ ಘೋಷಣೆ ಆಗಿಲ್ಲ. ಈ ಮದ್ಯೆ ಟಿಕೆಟ್ ಗಾಗಿ ಲಾಭಿ ನಡೆಯುತ್ತಿದೆ. ಹಾಲಿ ಶಾಸಕಿಯವರು ಟಿಕೆಟ್ಗೆ ಲಾಭಿ ಮಾಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಇತರ ಟಿಕೆಟ್ ಆಕಾಂಕ್ಷಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕುಂದಗೋಳ ಕ್ಷೇತ್ರವು ಯಾವೊಂದು ಪ್ರಮುಖ ರಾಜಕೀಯ ಪಕ್ಷಗಳ ಭದ್ರಕೋಟೆ ಆಗಿ ಗುರುತಿಸಿಕೊಂಡಿಲ್ಲ. ಆದರೆ ಈ ಕ್ಷೇತ್ರದಲ್ಲಿ ಹಿಂದಿನಿಂದಲೇ ಗೆದ್ದಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೆ ಹೆಚ್ಚು ಗಮನ ಸೆಳೆದಿದ್ದಾರೆ. ಶಾಸಕರಾಗಿದ್ದ ಸಿ.ಎಸ್.ಶಿವಳ್ಳಿ ಅವರ ನಿಧನದ ನಂತರ ನಡೆದ ಉಪಚುನಾವಣೆ ಸೇರಿದಂತೆ ಹಿಂದಿನ ಮೂರು ಚುನಾವಣೆಗಳಲ್ಲಿ ಪಕ್ಷ ಗೆದ್ದಿದ್ದರೂ ಗೆಲುವಿನ ಅಂತರ ಅಷ್ಟಾಗಿಲ್ಲ. ಅಂದರೆ ತೀರಾ ಬಹುಮತದಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಹೀಗಾಗಿ ಈ ಬಾರಿ ಪಕ್ಷಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಿ.ಎಸ್. ಶಿವಳ್ಳಿಯವರು ಕೇವಲ 634 ಮತಗಳಿಂದ ಗೆದ್ದಿದ್ದರು. ಅವರ ನಿಧನಾ ನಂತರ ನಡೆದ ಉಪ ಚುನಾವಣೆಯಲ್ಲಿ ಅನುಕಂಪದ ಅಲೆಯಿದ್ದರೂ ಅವರ ಪತ್ನಿ ಕುಸುಮಾವತಿ ಶಿವಳ್ಳಿಯವರು ಕೇವಲ 1,601 ಕಡಿಮೆ ಮತದಾಗಳ ಅಂತರದಿಂದ ವಿಜಯ ಸಾಧಿಸಿದ್ದರು.
ಈ ಸಲವು ಕುಸುಮಾವತಿ ಶಿವಳ್ಳಿಯವರು ತಮಗೆ ಟಿಕೆಟ್ ನೀಡುವಂತೆ ಮುಖಂಡ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಕುಂದಗೋಳ ಕ್ಷೇತ್ರದ ಟಿಕೆಟ್ಗಾಗಿ ದೊಡ್ಡಮಟ್ಟದಲ್ಲಿ ಲಾಭಿ ನಡೆಯುತ್ತಿದೆ. ಕಾಂಗ್ರೆಸ್ನಲ್ಲಿಯೇ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಪ್ರಸಕ್ತ 2023ರ ಚುನಾವಣೆಯಲ್ಲಿ ಕಾಂಗ್ರೆಸ್ನಲ್ಲಿನ ಟಿಕೆಟ್ ಗದ್ದಲದ ಲಾಭವನ್ನು ಬಿಜೆಪಿ ಪಡೆದುಕೊಳ್ಳಲು, ಇಲ್ಲಿ ಜಯಿಸಲು ಯತ್ನಿಸುತ್ತಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications