ಕಾಂಗ್ರೆಸ್ ಹೀನಾಯ ಸೋಲು: ರಾಜೀನಾಮೆಗೆ ಎಚ್ಕೆ ಪಾಟೀಲ್ ನಿರ್ಧಾರ
ಹುಬ್ಬಳ್ಳಿ, ಮೇ 24: ರಾಜ್ಯದಲ್ಲಿ ಕಾಂಗ್ರೆಸ್ನ ಹೀನಾಯ ಸೋಲಿಗೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ನಿರ್ಧರಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಗೆದ್ದು ಹೀನಾಯ ಪ್ರದರ್ಶನ ನೀಡಿದೆ. ಅಲ್ಲದೆ, ವಿಧಾನಸಭೆ ಉಪ ಚುನಾವಣೆಯಲ್ಲಿಯೂ ಒಂದು ಸ್ಥಾನವನ್ನು ಕಳೆದುಕೊಂಡಿದೆ. ಇದರಿಂದ ನಾಯಕರು ಹತಾಶೆಗೊಳಗಾಗಿದ್ದಾರೆ.
ಹಾಸನದಲ್ಲಿ ನಾಟಕೀಯ ಬೆಳವಣಿಗೆ: ರಾಜೀನಾಮೆಗೆ ಪ್ರಜ್ವಲ್ ನಿರ್ಧಾರ
'ಈ ಸೋಲಿಗೆ ಹೊಣೆ ಹೊತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ' ಎಂದು ಹುಬ್ಬಳ್ಳಿಯಲ್ಲಿ ಎಚ್ಕೆ ಪಾಟೀಲ್ ಹೇಳಿದ್ದಾರೆ.
ಈ ಫಲಿತಾಂಶದಿಂದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಜನರು ನೀಡಿರುವ ತೀರ್ಪಿಗೆ ನಾವು ತಲೆಬಾಗಿ ಒಪ್ಪಿಕೊಳ್ಳಬೇಕಿದೆ. ಈ ಫಲಿತಾಂಶವನ್ನು ಸವಾಲಾಗಿ ಸ್ವೀಕರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ನಾಳೆ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ಕುರಿತು ಚರ್ಚೆ?
ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಲಿರುವುದಾಗಿ ಪಾಟೀಲ್ ತಿಳಿಸಿದ್ದಾರೆ.