ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಖ್ಯಮಂತ್ರಿ ಆಸೆಗಾಗಿ ಎಂಬಿ ಪಾಟೀಲ್, ಡಿಕೆಶಿ 50 ಕೋಟಿ ರೂ. ಹೂಡಿಕೆ: ರೇಣುಕಾಚಾರ್ಯ

|
Google Oneindia Kannada News

Recommended Video

Lok Sabha Elections 2019: ಡಿ ಕೆ ಶಿ ಹಾಗು ಎಂ ಬಿ ಪಾಟೀಲ್ ಬಗ್ಗೆ ಅಚ್ಚರಿಯ ಸುದ್ದಿ ಹೊರಹಾಕಿದ ರೇಣುಕಾಚಾರ್ಯ

ಹುಬ್ಬಳ್ಳಿ, ಮೇ 15: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿರುವ ಸಚಿವರಾದ ಎಂ.ಬಿ. ಪಾಟೀಲ್ ಮತ್ತು ಡಿ.ಕೆ. ಶಿವಕುಮಾರ್, ಉಪ ಚುನಾವಣೆಯಲ್ಲಿ ಗೆಲ್ಲಲು ತಲಾ 50 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ಡಿಕೆಶಿ ಮಾರಿಹಬ್ಬಕ್ಕೆ ಬಲಿಕೊಡುವ ಕೋಣ: ರೇಣುಕಾಚಾರ್ಯಡಿಕೆಶಿ ಮಾರಿಹಬ್ಬಕ್ಕೆ ಬಲಿಕೊಡುವ ಕೋಣ: ರೇಣುಕಾಚಾರ್ಯ

ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯಿಂದ ಇಬ್ಬರೂ ಕುಂದಗೋಳ ಕ್ಷೇತ್ರ ಮತ್ತು ಚಿಂಚೋಳಿ ಕ್ಷೇತ್ರಗಳ ಉಪ ಚುನಾವಣೆಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ತಮ್ಮ ವರ್ಚಸ್ಸು ತೋರಿಸುವ ಸಲುವಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ತಲಾ 50 ಕೋಟಿ ರೂ. ಬಂಡವಾಳ ಹಾಕಿದ್ದಾರೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕುಂದಗೋಳ: ಕಾಂಗ್ರೆಸ್ ನಲ್ಲಿ ಗಂಡಸರಿಲ್ಲ, ಅದಕ್ಕೆ ಡಿಕೆಶಿಯನ್ನು ಕರೆತಂದಿರೋದು ಕುಂದಗೋಳ: ಕಾಂಗ್ರೆಸ್ ನಲ್ಲಿ ಗಂಡಸರಿಲ್ಲ, ಅದಕ್ಕೆ ಡಿಕೆಶಿಯನ್ನು ಕರೆತಂದಿರೋದು

ಕುಂದಗೋಳ ಕ್ಷೇತ್ರದಲ್ಲಿ ಹಣ ಹಂಚುವ ಸಲುವಾಗಿಯೇ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಿಂದ 500 ಮಂದಿ ಬೆಂಬಲಿಗರನ್ನು ಕರೆದುಕೊಂಡು ಬಂದಿದ್ದಾರೆ. ಆದರೆ, ಚುನಾವಣಾ ಉಸ್ತುವಾರಿ ವಹಿಸಿಕೊಂಡ ಬಳಿಕ ಕ್ಷೇತ್ರದ ಅಭಿವೃದ್ಧಿ ಕುರಿತು ಏನನ್ನೂ ಮಾತನಾಡಿಲ್ಲ. ಡಿಕೆಶಿ ಜಲಸಂಪನ್ಮೂಲ ಸಚಿವರಲ್ಲ, ಭ್ರಷ್ಟಸಂಪನ್ಮೂಲ ಸಚಿವ ಎಂದು ಟೀಕಿಸಿದರು.

Lok Sabha elections 2019 renukacharya hubballi alleged Rs 50 crore invested for CM post

ಕ್ಷೇತ್ರದ ಹರಕುಣಿಯಲ್ಲಿ ಮೂರು ವರ್ಷದ ಹಿಂದೆ ಡಿ.ಕೆ. ಶಿವಕುಮಾರ್ ಅವರು ನಿರಂತರ ಜ್ಯೋತಿ ಯೋಜನೆಗೆ ಚಾಲನೆ ಕೊಟ್ಟಿದ್ದರು. ಈಗ ಆ ಗ್ರಾಮದಲ್ಲಿ ಬೆಳಕೇ ಇಲ್ಲ. ಶಿವಕುಮಾರ್ ಅವರೇನಿದ್ದರೂ ಕಾಗದದ ಮೇಲಿನ ಹುಲಿ. ಅವರ ಆಟ ಇಲ್ಲಿ ನಡೆಯುವುದಿಲ್ಲ ಎಂದರು.

English summary
Lok Sabha elections 2019: BJP MLA MP Renukacharya in Hubballi said that, both the Ministers MB Patil and DK Shivakumar have invested Rs 50 Crore each in Kundgol and Chincholi by elections for CM post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X